ಬ್ರೇಕಿಂಗ್ ನ್ಯೂಸ್
27-01-21 09:54 pm Mangaluru Correspondent ಕರಾವಳಿ
ಪುತ್ತೂರು, ಜ.27: ಬೈಕ್ ರಸ್ತೆ ಡಿವೈಡರ್ಗೆ ಡಿಕ್ಕಿಯಾದ ಪರಿಣಾಮ ನವವಿವಾಹಿತ ಸವಾರ ಮೃತಪಟ್ಟ ದುರ್ಘಟನೆ ಉಪ್ಪಿನಂಗಡಿ ಜಂಕ್ಷನ್ ಬಳಿ ಮಂಗಳವಾರ ತಡರಾತ್ರಿ ನಡೆದಿದೆ.
ಕಡಬ ತಾಲೂಕಿನ ಹಳೆನೇರಂಕಿ ಗ್ರಾಮದ ಕಲ್ಲೇರಿ ನಿವಾಸಿ ಕಿಶೋರ್(29) ಮೃತಪಟ್ಟ ಯುವಕ. ಈತನಿಗೆ ತಿಂಗಳ ಹಿಂದೆಯಷ್ಟೇ ವಿವಾಹವಾಗಿತ್ತು. ಮೃತರು ತಾಯಿ, ಪತ್ನಿ ಮತ್ತು ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ.
ಮಂಗಳೂರಿನಲ್ಲಿ ಉದ್ಯೋಗದಲ್ಲಿದ್ದ ಕಿಶೋರ್ ರಾತ್ರಿ ಕೆಲಸ ಮುಗಿಸಿ ವಾಪಸ್ ಮನೆಗೆ ಬರುತ್ತಿದ್ದ ವೇಳೆ ಅಪಘಾತ ನಡೆದಿದೆ. ನಿಯಂತ್ರಣ ಕಳೆದುಕೊಂಡ ಬೈಕ್ ಡಿವೈಡರ್ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಗಂಭೀರ ಗಾಯಗೊಂಡಿದ್ದ ಕಿಶೋರ್ನನ್ನು ಸ್ಥಳೀಯರು ಕೂಡಲೇ ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲು ಕರೆದುಕೊಂಡು ಹೋದರಾದರೂ ದಾರಿ ಮಧ್ಯೆ ಕೊನೆಯುಸಿರುಳೆದಿದ್ದಾರೆ.
ಮಂಗಳೂರಿನ ತೊಕ್ಕೊಟ್ಟಿನಲ್ಲಿ ಪ್ರಿಂಟಿಂಗ್ ಪ್ರೆಸ್ ಒಂದರಲ್ಲಿ ಉದ್ಯೋಗಿಯಾಗಿದ್ದ ಅವರಿಗೆ ಕಳೆದ ಡಿಸೆಂಬರ್ ತಿಂಗಳಲ್ಲಿ ವಿವಾಹ ನಡೆದಿತ್ತು. ಪ್ರತಿದಿನ ಅವರು ಮಂಗಳೂರಿನಿಂದ ಹಳೇ ನೆರಂಕಿಯ ತನ್ನ ಮನೆಗೆ ಬೈಕಿನಲ್ಲಿ ಹೋಗಿ ಬರುತಿದ್ದರು.
ಅಪಘಾತದ ಮಧ್ಯೆ ಕಿಶೋರ್ ಧರಿಸಿದ್ದ ನಾಲ್ಕು ಪವನ್ ತೂಕದ ಚಿನ್ನದ ಸರ ನಾಪತ್ತೆಯಾಗಿದೆ ಎಂದು ಮೃತರ ಸಂಬಂಧಿಕರು ತಿಳಿಸಿದ್ದಾರೆ.
A 29-year-old Newly Married youth was killed in a road accident after his bike collided with a road divider on National Highway 75 in Puttur, Uppinangady on Wednesday, January 27.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm