ಬ್ರೇಕಿಂಗ್ ನ್ಯೂಸ್
28-01-21 02:20 pm Mangalore Correspondent ಕರಾವಳಿ
ಸುಳ್ಯ, ಜ.28 : ಇಲ್ಲಿನ ಪೆರಾಜೆ, ಬಿಳಿಯಾರು ಪ್ರದೇಶದಲ್ಲಿ ದೊಡ್ಡ ಗಾತ್ರದ ಕಾಡಾನೆಯೊಂದು ಎರಡು ದಿನಗಳಿಂದ ಹಾದಿಯುದ್ದಕ್ಕೂ ತನ್ನ ಪಾಡಿಗೆ ನಡೆದು ಹೋಗುತ್ತಿದ್ದು ಜನರಲ್ಲಿ ಆತಂಕ ಶುರುವಾಗಿದೆ. ಆದರೆ, ಅಲ್ಲಿನ ಕೆಲವರ ಪ್ರಕಾರ ಈ ಆನೆ ಪ್ರತಿ ವರ್ಷ ಹೀಗೇ ಬರುತ್ತದೆಯಂತೆ. ಜನರಿಗೇನು ತೊಂದರೆ ಕೊಡುವುದಿಲ್ಲವಂತೆ.
ಹೌದು, ಈ ಆನೆಯು ಪ್ರತೀ ವರ್ಷ ಕಡಬದ ಸುಬ್ರಹ್ಮಣ್ಯ ಅರಣ್ಯ ವಲಯದಿಂದ ಸುಳ್ಯದ ಪಂಜ ಮೂಲಕ ಮಡಿಕೇರಿಯ ಭಾಗಮಂಡಲ ವರೆಗೂ ಇದೇ ದಾರಿಯಲ್ಲಿ ಸಂಚರಿಸುತ್ತದೆ ಎನ್ನಲಾಗುತ್ತಿದೆ. ಪ್ರತಿ ಬಾರಿ ಜನವರಿ, ಫೆಬ್ರವರಿ ತಿಂಗಳಲ್ಲಿ ಇದೇ ಆನೆ ಈ ದಾರಿಯಲ್ಲಿ ಕಂಡುಬರುತ್ತಿದೆ.
ಆನೆ ನಡೆದದ್ದೇ ದಾರಿ ಎನ್ನುವಂತೆ, ತಾನು ಹಾದು ಹೋಗುವ ದಾರಿಯಲ್ಲಿ ಹೊಟ್ಟೆ ಹಸಿವು ಆದಾಗ ಬಾಳೆ, ತೆಂಗು ಸೇರಿದಂತೆ ಬೈನೆ ಮರಗಳನ್ನು ತಿನ್ನುತ್ತದೆ. ಮಡಿಕೇರಿ ಗಡಿಭಾಗ ಭಾಗಮಂಡಲದ ವರೆಗೂ ಹೋದ ಆನೆ ನಂತರದಲ್ಲಿ ಫೆಬ್ರವರಿ ತಿಂಗಳ ಮಧ್ಯದಲ್ಲಿ ಅದೇ ದಾರಿಯಲ್ಲಿ ವಾಪಾಸು ಬರುತ್ತದೆಯಂತೆ.

ಆನೆ ಹೋಗುವ ದಾರಿಯಲ್ಲಿ ಸಿಗುವ ಕುಮಾರಧಾರಾ ನದಿ ಹಾಗೂ ಪಯಸ್ವಿನಿ ನದಿಯನ್ನೂ ಆನೆ ಈಜುವ ಮೂಲಕ ನದಿ ದಾಟುತ್ತಿದೆ ಎಂದು ಸಾರ್ವಜನಿಕರು ಹೇಳುತ್ತಾರೆ.
ಈ ಆನೆಯನ್ನು ಅರಣ್ಯಾಧಿಕಾರಿಗಳು ಕೂಡ ಗುರುತಿಸಿದ್ದು ಆನೆ ಅದರ ಪಾಡಿಗೆ ತನ್ನ ದಾರಿಯಲ್ಲೇ ಸಂಚಾರ ಮಾಡುತ್ತದೆ. ಯಾರಿಗೂ ತೊಂದರೆ ನೀಡಿದ ಮಾಹಿತಿ ಇಲ್ಲ. ಆದರೂ ರಾತ್ರಿ ವೇಳೆ ಈ ಭಾಗದಲ್ಲಿ ಸಂಚರಿಸುವ ಜನರು ಎಚ್ಚರಿಕೆ ವಹಿಸಬೇಕು. ತೊಂದರೆ ಕಂಡುಬಂದಲ್ಲಿ ಅರಣ್ಯ ಇಲಾಖೆಗೆ ಮಾಹಿತಿ ನೀಡುವಂತೆ ವಿನಂತಿ ಮಾಡಿದ್ದಾರೆ.
Video:
A Wild elephant caught on Video has become viral on social media as the Elephant enters Kadapa village every year hunting for food towards Bagamandala.
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
28-10-25 08:36 pm
Mangalore Correspondent
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
28-10-25 10:48 pm
Mangalore Correspondent
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm