ಬ್ರೇಕಿಂಗ್ ನ್ಯೂಸ್
28-01-21 02:20 pm Mangalore Correspondent ಕರಾವಳಿ
ಸುಳ್ಯ, ಜ.28 : ಇಲ್ಲಿನ ಪೆರಾಜೆ, ಬಿಳಿಯಾರು ಪ್ರದೇಶದಲ್ಲಿ ದೊಡ್ಡ ಗಾತ್ರದ ಕಾಡಾನೆಯೊಂದು ಎರಡು ದಿನಗಳಿಂದ ಹಾದಿಯುದ್ದಕ್ಕೂ ತನ್ನ ಪಾಡಿಗೆ ನಡೆದು ಹೋಗುತ್ತಿದ್ದು ಜನರಲ್ಲಿ ಆತಂಕ ಶುರುವಾಗಿದೆ. ಆದರೆ, ಅಲ್ಲಿನ ಕೆಲವರ ಪ್ರಕಾರ ಈ ಆನೆ ಪ್ರತಿ ವರ್ಷ ಹೀಗೇ ಬರುತ್ತದೆಯಂತೆ. ಜನರಿಗೇನು ತೊಂದರೆ ಕೊಡುವುದಿಲ್ಲವಂತೆ.
ಹೌದು, ಈ ಆನೆಯು ಪ್ರತೀ ವರ್ಷ ಕಡಬದ ಸುಬ್ರಹ್ಮಣ್ಯ ಅರಣ್ಯ ವಲಯದಿಂದ ಸುಳ್ಯದ ಪಂಜ ಮೂಲಕ ಮಡಿಕೇರಿಯ ಭಾಗಮಂಡಲ ವರೆಗೂ ಇದೇ ದಾರಿಯಲ್ಲಿ ಸಂಚರಿಸುತ್ತದೆ ಎನ್ನಲಾಗುತ್ತಿದೆ. ಪ್ರತಿ ಬಾರಿ ಜನವರಿ, ಫೆಬ್ರವರಿ ತಿಂಗಳಲ್ಲಿ ಇದೇ ಆನೆ ಈ ದಾರಿಯಲ್ಲಿ ಕಂಡುಬರುತ್ತಿದೆ.
ಆನೆ ನಡೆದದ್ದೇ ದಾರಿ ಎನ್ನುವಂತೆ, ತಾನು ಹಾದು ಹೋಗುವ ದಾರಿಯಲ್ಲಿ ಹೊಟ್ಟೆ ಹಸಿವು ಆದಾಗ ಬಾಳೆ, ತೆಂಗು ಸೇರಿದಂತೆ ಬೈನೆ ಮರಗಳನ್ನು ತಿನ್ನುತ್ತದೆ. ಮಡಿಕೇರಿ ಗಡಿಭಾಗ ಭಾಗಮಂಡಲದ ವರೆಗೂ ಹೋದ ಆನೆ ನಂತರದಲ್ಲಿ ಫೆಬ್ರವರಿ ತಿಂಗಳ ಮಧ್ಯದಲ್ಲಿ ಅದೇ ದಾರಿಯಲ್ಲಿ ವಾಪಾಸು ಬರುತ್ತದೆಯಂತೆ.

ಆನೆ ಹೋಗುವ ದಾರಿಯಲ್ಲಿ ಸಿಗುವ ಕುಮಾರಧಾರಾ ನದಿ ಹಾಗೂ ಪಯಸ್ವಿನಿ ನದಿಯನ್ನೂ ಆನೆ ಈಜುವ ಮೂಲಕ ನದಿ ದಾಟುತ್ತಿದೆ ಎಂದು ಸಾರ್ವಜನಿಕರು ಹೇಳುತ್ತಾರೆ.
ಈ ಆನೆಯನ್ನು ಅರಣ್ಯಾಧಿಕಾರಿಗಳು ಕೂಡ ಗುರುತಿಸಿದ್ದು ಆನೆ ಅದರ ಪಾಡಿಗೆ ತನ್ನ ದಾರಿಯಲ್ಲೇ ಸಂಚಾರ ಮಾಡುತ್ತದೆ. ಯಾರಿಗೂ ತೊಂದರೆ ನೀಡಿದ ಮಾಹಿತಿ ಇಲ್ಲ. ಆದರೂ ರಾತ್ರಿ ವೇಳೆ ಈ ಭಾಗದಲ್ಲಿ ಸಂಚರಿಸುವ ಜನರು ಎಚ್ಚರಿಕೆ ವಹಿಸಬೇಕು. ತೊಂದರೆ ಕಂಡುಬಂದಲ್ಲಿ ಅರಣ್ಯ ಇಲಾಖೆಗೆ ಮಾಹಿತಿ ನೀಡುವಂತೆ ವಿನಂತಿ ಮಾಡಿದ್ದಾರೆ.
Video:
A Wild elephant caught on Video has become viral on social media as the Elephant enters Kadapa village every year hunting for food towards Bagamandala.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
05-03-26 05:02 pm
HK News Staffer
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
05-03-26 07:38 pm
HK News Staffer
ಸಾಕ್ಷಿಗಳು ಬರ್ತಾರೆ, ಹೋಗ್ತಾರೆ.. ಧರ್ಮಸ್ಥಳದಲ್ಲಿ ಹ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm