ಬ್ರೇಕಿಂಗ್ ನ್ಯೂಸ್
28-01-21 02:20 pm Mangalore Correspondent ಕರಾವಳಿ
ಸುಳ್ಯ, ಜ.28 : ಇಲ್ಲಿನ ಪೆರಾಜೆ, ಬಿಳಿಯಾರು ಪ್ರದೇಶದಲ್ಲಿ ದೊಡ್ಡ ಗಾತ್ರದ ಕಾಡಾನೆಯೊಂದು ಎರಡು ದಿನಗಳಿಂದ ಹಾದಿಯುದ್ದಕ್ಕೂ ತನ್ನ ಪಾಡಿಗೆ ನಡೆದು ಹೋಗುತ್ತಿದ್ದು ಜನರಲ್ಲಿ ಆತಂಕ ಶುರುವಾಗಿದೆ. ಆದರೆ, ಅಲ್ಲಿನ ಕೆಲವರ ಪ್ರಕಾರ ಈ ಆನೆ ಪ್ರತಿ ವರ್ಷ ಹೀಗೇ ಬರುತ್ತದೆಯಂತೆ. ಜನರಿಗೇನು ತೊಂದರೆ ಕೊಡುವುದಿಲ್ಲವಂತೆ.
ಹೌದು, ಈ ಆನೆಯು ಪ್ರತೀ ವರ್ಷ ಕಡಬದ ಸುಬ್ರಹ್ಮಣ್ಯ ಅರಣ್ಯ ವಲಯದಿಂದ ಸುಳ್ಯದ ಪಂಜ ಮೂಲಕ ಮಡಿಕೇರಿಯ ಭಾಗಮಂಡಲ ವರೆಗೂ ಇದೇ ದಾರಿಯಲ್ಲಿ ಸಂಚರಿಸುತ್ತದೆ ಎನ್ನಲಾಗುತ್ತಿದೆ. ಪ್ರತಿ ಬಾರಿ ಜನವರಿ, ಫೆಬ್ರವರಿ ತಿಂಗಳಲ್ಲಿ ಇದೇ ಆನೆ ಈ ದಾರಿಯಲ್ಲಿ ಕಂಡುಬರುತ್ತಿದೆ.
ಆನೆ ನಡೆದದ್ದೇ ದಾರಿ ಎನ್ನುವಂತೆ, ತಾನು ಹಾದು ಹೋಗುವ ದಾರಿಯಲ್ಲಿ ಹೊಟ್ಟೆ ಹಸಿವು ಆದಾಗ ಬಾಳೆ, ತೆಂಗು ಸೇರಿದಂತೆ ಬೈನೆ ಮರಗಳನ್ನು ತಿನ್ನುತ್ತದೆ. ಮಡಿಕೇರಿ ಗಡಿಭಾಗ ಭಾಗಮಂಡಲದ ವರೆಗೂ ಹೋದ ಆನೆ ನಂತರದಲ್ಲಿ ಫೆಬ್ರವರಿ ತಿಂಗಳ ಮಧ್ಯದಲ್ಲಿ ಅದೇ ದಾರಿಯಲ್ಲಿ ವಾಪಾಸು ಬರುತ್ತದೆಯಂತೆ.

ಆನೆ ಹೋಗುವ ದಾರಿಯಲ್ಲಿ ಸಿಗುವ ಕುಮಾರಧಾರಾ ನದಿ ಹಾಗೂ ಪಯಸ್ವಿನಿ ನದಿಯನ್ನೂ ಆನೆ ಈಜುವ ಮೂಲಕ ನದಿ ದಾಟುತ್ತಿದೆ ಎಂದು ಸಾರ್ವಜನಿಕರು ಹೇಳುತ್ತಾರೆ.
ಈ ಆನೆಯನ್ನು ಅರಣ್ಯಾಧಿಕಾರಿಗಳು ಕೂಡ ಗುರುತಿಸಿದ್ದು ಆನೆ ಅದರ ಪಾಡಿಗೆ ತನ್ನ ದಾರಿಯಲ್ಲೇ ಸಂಚಾರ ಮಾಡುತ್ತದೆ. ಯಾರಿಗೂ ತೊಂದರೆ ನೀಡಿದ ಮಾಹಿತಿ ಇಲ್ಲ. ಆದರೂ ರಾತ್ರಿ ವೇಳೆ ಈ ಭಾಗದಲ್ಲಿ ಸಂಚರಿಸುವ ಜನರು ಎಚ್ಚರಿಕೆ ವಹಿಸಬೇಕು. ತೊಂದರೆ ಕಂಡುಬಂದಲ್ಲಿ ಅರಣ್ಯ ಇಲಾಖೆಗೆ ಮಾಹಿತಿ ನೀಡುವಂತೆ ವಿನಂತಿ ಮಾಡಿದ್ದಾರೆ.
Video:
A Wild elephant caught on Video has become viral on social media as the Elephant enters Kadapa village every year hunting for food towards Bagamandala.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
08-02-26 10:18 pm
HK News Desk
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
08-02-26 10:10 pm
HK News Desk
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm