ಬ್ರೇಕಿಂಗ್ ನ್ಯೂಸ್
28-01-21 02:20 pm Mangalore Correspondent ಕರಾವಳಿ
ಸುಳ್ಯ, ಜ.28 : ಇಲ್ಲಿನ ಪೆರಾಜೆ, ಬಿಳಿಯಾರು ಪ್ರದೇಶದಲ್ಲಿ ದೊಡ್ಡ ಗಾತ್ರದ ಕಾಡಾನೆಯೊಂದು ಎರಡು ದಿನಗಳಿಂದ ಹಾದಿಯುದ್ದಕ್ಕೂ ತನ್ನ ಪಾಡಿಗೆ ನಡೆದು ಹೋಗುತ್ತಿದ್ದು ಜನರಲ್ಲಿ ಆತಂಕ ಶುರುವಾಗಿದೆ. ಆದರೆ, ಅಲ್ಲಿನ ಕೆಲವರ ಪ್ರಕಾರ ಈ ಆನೆ ಪ್ರತಿ ವರ್ಷ ಹೀಗೇ ಬರುತ್ತದೆಯಂತೆ. ಜನರಿಗೇನು ತೊಂದರೆ ಕೊಡುವುದಿಲ್ಲವಂತೆ.
ಹೌದು, ಈ ಆನೆಯು ಪ್ರತೀ ವರ್ಷ ಕಡಬದ ಸುಬ್ರಹ್ಮಣ್ಯ ಅರಣ್ಯ ವಲಯದಿಂದ ಸುಳ್ಯದ ಪಂಜ ಮೂಲಕ ಮಡಿಕೇರಿಯ ಭಾಗಮಂಡಲ ವರೆಗೂ ಇದೇ ದಾರಿಯಲ್ಲಿ ಸಂಚರಿಸುತ್ತದೆ ಎನ್ನಲಾಗುತ್ತಿದೆ. ಪ್ರತಿ ಬಾರಿ ಜನವರಿ, ಫೆಬ್ರವರಿ ತಿಂಗಳಲ್ಲಿ ಇದೇ ಆನೆ ಈ ದಾರಿಯಲ್ಲಿ ಕಂಡುಬರುತ್ತಿದೆ.
ಆನೆ ನಡೆದದ್ದೇ ದಾರಿ ಎನ್ನುವಂತೆ, ತಾನು ಹಾದು ಹೋಗುವ ದಾರಿಯಲ್ಲಿ ಹೊಟ್ಟೆ ಹಸಿವು ಆದಾಗ ಬಾಳೆ, ತೆಂಗು ಸೇರಿದಂತೆ ಬೈನೆ ಮರಗಳನ್ನು ತಿನ್ನುತ್ತದೆ. ಮಡಿಕೇರಿ ಗಡಿಭಾಗ ಭಾಗಮಂಡಲದ ವರೆಗೂ ಹೋದ ಆನೆ ನಂತರದಲ್ಲಿ ಫೆಬ್ರವರಿ ತಿಂಗಳ ಮಧ್ಯದಲ್ಲಿ ಅದೇ ದಾರಿಯಲ್ಲಿ ವಾಪಾಸು ಬರುತ್ತದೆಯಂತೆ.
ಆನೆ ಹೋಗುವ ದಾರಿಯಲ್ಲಿ ಸಿಗುವ ಕುಮಾರಧಾರಾ ನದಿ ಹಾಗೂ ಪಯಸ್ವಿನಿ ನದಿಯನ್ನೂ ಆನೆ ಈಜುವ ಮೂಲಕ ನದಿ ದಾಟುತ್ತಿದೆ ಎಂದು ಸಾರ್ವಜನಿಕರು ಹೇಳುತ್ತಾರೆ.
ಈ ಆನೆಯನ್ನು ಅರಣ್ಯಾಧಿಕಾರಿಗಳು ಕೂಡ ಗುರುತಿಸಿದ್ದು ಆನೆ ಅದರ ಪಾಡಿಗೆ ತನ್ನ ದಾರಿಯಲ್ಲೇ ಸಂಚಾರ ಮಾಡುತ್ತದೆ. ಯಾರಿಗೂ ತೊಂದರೆ ನೀಡಿದ ಮಾಹಿತಿ ಇಲ್ಲ. ಆದರೂ ರಾತ್ರಿ ವೇಳೆ ಈ ಭಾಗದಲ್ಲಿ ಸಂಚರಿಸುವ ಜನರು ಎಚ್ಚರಿಕೆ ವಹಿಸಬೇಕು. ತೊಂದರೆ ಕಂಡುಬಂದಲ್ಲಿ ಅರಣ್ಯ ಇಲಾಖೆಗೆ ಮಾಹಿತಿ ನೀಡುವಂತೆ ವಿನಂತಿ ಮಾಡಿದ್ದಾರೆ.
Video:
A Wild elephant caught on Video has become viral on social media as the Elephant enters Kadapa village every year hunting for food towards Bagamandala.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm