ಹಳೆಯಂಗಡಿ ಬಳಿ ಭೀಕರ ಅಪಘಾತ ; ಬೈಕ್ ಸವಾರನ ಮೇಲೆ ಹರಿದ ಬಸ್ ! ರಕ್ತದೋಕುಳಿ 

28-01-21 10:19 pm       Mangaluru Correspondant   ಕರಾವಳಿ

ಹಳೆಯಂಗಡಿ ಸಮೀಪದ ಲೈಟ್ ಹೌಸ್ ಬಳಿ ಬೈಕುಗಳೆರಡು ಮುಖಾಮುಖಿ ಡಿಕ್ಕಿಯಾಗಿ ರಸ್ತೆಗೆ ಎಸೆಯಲ್ಪಟ್ಟ ಸವಾರನೊಬ್ಬ ಅದೇ ದಾರಿಯಲ್ಲಿ ಬರುತ್ತಿದ್ದ ಬಸ್ಸಿನಡಿಗೆ ಬಿದ್ದು ದಾರುಣ ಮೃತಪಟ್ಟ ಘಟನೆ ನಡೆದಿದೆ. 

ಮುಲ್ಕಿ ಜ.28: ಹಳೆಯಂಗಡಿ ಸಮೀಪದ ಲೈಟ್ ಹೌಸ್ ಬಳಿ ಬೈಕುಗಳೆರಡು ಮುಖಾಮುಖಿ ಡಿಕ್ಕಿಯಾಗಿ ರಸ್ತೆಗೆ ಎಸೆಯಲ್ಪಟ್ಟ ಸವಾರನೊಬ್ಬ ಅದೇ ದಾರಿಯಲ್ಲಿ ಬರುತ್ತಿದ್ದ ಬಸ್ಸಿನಡಿಗೆ ಬಿದ್ದು ದಾರುಣ ಮೃತಪಟ್ಟ ಘಟನೆ ನಡೆದಿದೆ. 

ಮೃತ ಯುವಕನನ್ನು ಮೂಡುಬಿದ್ರೆ ನಿವಾಸಿ ಮೋಕ್ಷಿತ್ (19) ಎಂದು ಗುರುತಿಸಲಾಗಿದೆ. ಹಳೆಯಂಗಡಿ ಕಡೆಯಿಂದ ಕಿನ್ನಿಗೋಳಿ ಕಡೆಗೆ ಬರುತ್ತಿದ್ದ ಬೈಕಿಗೆ ಲೈಟ್ ಹೌಸ್ ಬಳಿ ಬಸ್ ಅನ್ನು ಓವರ್ ಟೇಕ್ ಮಾಡಿ ಬರುತ್ತಿದ್ದ ಬೈಕೊಂದು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. 

ಅಪಘಾತದ ಸಂದರ್ಭ ಬೈಕ್ ಸವಾರ ಆಯತಪ್ಪಿ ರಸ್ತೆಗೆ ಬಿದ್ದಿದ್ದು, ಈ ವೇಳೆ ಹಿಂದಿನಿಂದ ಬರುತ್ತಿದ್ದ ಬಸ್, ಬೈಕ್ ಸವಾರನ ಮೇಲೆಯೇ ಹರಿದು ದಾರುಣ ಘಟನೆ ನಡೆದಿದೆ. ಬಸ್ ಹರಿದ ರಭಸಕ್ಕೆ ಬೈಕ್ ಸವಾರನ ತಲೆ ಚೂರು- ಚೂರಾಗಿದ್ದು ರಸ್ತೆಯಲ್ಲಿ ರಕ್ತದೋಕುಳಿಯೇ ಹರಿದಿತ್ತು. ಕೂಡಲೇ ಸ್ಥಳಕ್ಕೆ ಧಾವಿಸಿದ ಸ್ಥಳೀಯರು ಬೈಕುಗಳನ್ನು ಸ್ಥಳದಿಂದ ತೆರವುಗೊಳಿಸಿದ್ದಾರೆ. ಸ್ಥಳಕ್ಕೆ ಸುರತ್ಕಲ್ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ಅಪಘಾತದ ಸಂದರ್ಭ ರಸ್ತೆ ತಡೆ ಉಂಟಾಗಿದ್ದು, ಭಾರಿ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದರು. ಸುರತ್ಕಲ್ ಟ್ರಾಫಿಕ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

19-year-old youth dies after bus rams on his Bike in Haleangady near the lighthouse, Mangalore . The deceased has been identified as Mokshith.