ಬ್ರೇಕಿಂಗ್ ನ್ಯೂಸ್
29-01-21 12:50 pm Mangalore Correspondent ಕರಾವಳಿ
ಬೆಳ್ತಂಗಡಿ, ಜ.29: ಇಲ್ಲಿನ ಮಲವಂತಿಗೆ ಗ್ರಾಮದ ಬಂಗಾರ್ ಪಲ್ಕೆ ಜಲಪಾತದಲ್ಲಿ ಬಂಡೆ ಕುಸಿದು ಬಿದ್ದು ಯುವಕ ಮಣ್ಣಿನಡಿಗೆ ಬಿದ್ದ ಪ್ರಕರಣದಲ್ಲಿ ಸತತ ನಾಲ್ಕನೇ ದಿನವೂ ಶೋಧ ಕಾರ್ಯಾಚರಣೆ ಮುಂದುವರಿದಿದೆ. ಉಜಿರೆಯ ಯುವಕ ಸನತ್ ಶೆಟ್ಟಿ (20) ಮತ್ತು ಇತರ ಮೂವರು ಜಲಪಾತದಲ್ಲಿ ನೀರಾಟ ಆಡುತ್ತಿದ್ದಾಗ ಬಂಡೆ ಕುಸಿದು ಘಟನೆ ಸಂಭವಿಸಿತ್ತು. ಸನತ್ ಮಣ್ಣಿನಡಿಗೆ ಬಿದ್ದಿದ್ದಾನೆ ಎನ್ನಲಾಗಿದ್ದು, ನಾಲ್ಕು ದಿನಗಳಿಂದ ಕಾರ್ಯಾಚರಣೆ ನಡೆಸುತ್ತಿದ್ದರೂ ಯುವಕ ಮಾತ್ರ ಪತ್ತೆಯಾಗಿಲ್ಲ.
ಕಾಡಿನ ಮಧ್ಯೆ ಈ ಜಾಗ ಇರುವುದರಿಂದ ಜೆಸಿಬಿ ಆಗಲೀ, ಇನ್ನಿತರ ಆಧುನಿಕ ತಂತ್ರಜ್ಞಾನದ ಪರಿಕರಗಳನ್ನು ಅಲ್ಲಿಗೆ ಒಯ್ಯಲು ಸಾಧ್ಯವಾಗುತ್ತಿಲ್ಲ. ಬೃಹತ್ ಬಂಡೆ ಕಲ್ಲುಗಳು ಕುಸಿದು ಬಿದ್ದಿರುವುದರಿಂದ ಅದನ್ನು ಒಡೆಯುವುದಾಗಲೀ, ಎಬ್ಬಿಸುವುದಾಗಲೀ ಮಾನವ ಶ್ರಮದಿಂದ ಸಾಧ್ಯವಿಲ್ಲ ಎಂಬ ಮಾತನ್ನು ಅಧಿಕಾರಿಗಳು ಹೇಳುತ್ತಿದ್ದಾರೆ. ಹೀಗಾಗಿ ಸ್ಥಳೀಯ ಶಾಸಕ ಹರೀಶ್ ಪೂಂಜಾ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸಲಹೆ ಮೇರೆಗೆ ಯಾವುದೇ ರೀತಿಯಲ್ಲಾದರೂ ಬಂಡೆಯನ್ನು ಒಡೆದು ಯುವಕನ ಪತ್ತೆ ಮಾಡಲು ಕಾರ್ಯಾಚರಣೆಗೆ ಅಧಿಕಾರಿಗಳು ಮುಂದಾಗಿದ್ದಾರೆ.

ಗುರುವಾರ ಪುತ್ತೂರು ವಿಭಾಗೀಯ ಕಮಿಷನರ್ ಸತೀಶ್ ಸ್ಥಳಕ್ಕೆ ಭೇಟಿ ನೀಡಿದ್ದು, ಕಾರ್ಯಾಚರಣೆಗೆ ನೇತೃತ್ವ ನೀಡಿದ್ದಾರೆ. ಅಲ್ಲದೆ, ಬೆಳ್ತಂಗಡಿ ಎಸ್ಐ ನಂದಕುಮಾರ್ ಮೂಲಕ ಶುಕ್ರವಾರ ಕ್ರಷರ್ ಯಂತ್ರವನ್ನು ಸ್ಥಳಕ್ಕೆ ಒಯ್ಯಲು ಸೂಚನೆ ನೀಡಿದ್ದಾರೆ. ರಸ್ತೆ ಇಲ್ಲದಿರುವ ಕಾರಣದಿಂದಾಗಿ ದೊಡ್ಡ ಯಂತ್ರಗಳನ್ನು ಸ್ಥಳಕ್ಕೆ ಒಯ್ಯಲು ಕಷ್ಟವಾಗಿದೆ. ಹಾಗಿದ್ದರೂ, ಜಿಲ್ಲಾಡಳಿತ ಯಾವುದೇ ರೀತಿಯಲ್ಲಾದರೂ ಯುವಕನನ್ನು ಪತ್ತೆ ಮಾಡಬೇಕೆಂದು ಸೂಚನೆ ನೀಡಿದ್ದು, ಸ್ಥಳೀಯರು ಮತ್ತು ಅಗ್ನಿಶಾಮಕ ಸಿಬಂದಿ ನಿರಂತರ ಕಾರ್ಯಾಚರಣೆ ನಡೆಸುತ್ತಿದ್ದಾರೆ.
Belthangady Landslide at Badamane Abbi waterfall Youth from Ujire dead body stuck amid rock crusher used to destroy rock and recover the body.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
08-02-26 10:18 pm
HK News Desk
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
08-02-26 10:10 pm
HK News Desk
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm