ಬ್ರೇಕಿಂಗ್ ನ್ಯೂಸ್
30-01-21 12:22 pm Mangalore Correspondent ಕರಾವಳಿ
ಮಂಗಳೂರು, ಜ.30 : ದುಬೈನಲ್ಲಿ ಕಳೆದ ಎಂಟು ತಿಂಗಳಿಂದ ಕೋಮಾದಲ್ಲಿದ್ದು, ಕಳೆದ ವಾರ ನಿಧನರಾದ ಮಂಗಳೂರು ಮೂಲದ ವ್ಯಕ್ತಿಯ ಮೃತದೇಹವನ್ನು ತಾಯ್ನಾಡಿಗೆ ಕಳುಹಿಸುವಲ್ಲಿ ಅನಿವಾಸಿ ಭಾರತೀಯರ ತಂಡ ಯಶಸ್ವಿಯಾಗಿದೆ.
ಮಂಗಳೂರಿನ ಕಾವೂರು ನಿವಾಸಿಯಾಗಿರುವ, ಅನಿವಾಸಿ ಕನ್ನಡಿಗ ದಿಲೀಪ್ (55) ಅವಿವಾಹಿತರಾಗಿದ್ದು ತಾಯಿ ಮತ್ತು ಅವಿವಾಹಿತ ಸಹೋದರಿಯರ ಕುಟುಂಬಕ್ಕೆ ಏಕೈಕ ಆಸರೆಯಾಗಿದ್ದರು. 15 ವರ್ಷಗಳಿಂದ ದುಬೈನಲ್ಲಿ ದುಡಿಯುತ್ತಿದ್ದ ದಿಲೀಪ್, ಕಳೆದ ಏಪ್ರಿಲ್ ತಿಂಗಳಿನಲ್ಲಿ ಬ್ರೈನ್ ಸ್ಟ್ರೋಕ್ನ ಪರಿಣಾಮ ಕೋಮಾವಸ್ಥೆಗೆ ತಲುಪಿದ್ದರು’ ಎಂದು ಕನ್ನಡಿಗಾಸ್ ಫೆಡರೇಷನ್ ಸಂಚಾಲಕ ಹಿದಾಯತ್ ಅಡ್ಡೂರ್ ತಿಳಿಸಿದ್ದಾರೆ.
ಸತತ ಎಂಟು ತಿಂಗಳಿಂದ ಕೋಮಾ ಸ್ಥಿತಿಯಲ್ಲಿದ್ದ ದಿಲೀಪ್ ಕುಮಾರ್ ಕಳೆದ ಶುಕ್ರವಾರ ನಿಧನರಾದರು. ಅವರ ಮೃತದೇಹವನ್ನು ಇಂಡಿಯನ್ ಕಾನ್ಸುಲೇಟ್ ದುಬೈ, ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆಸಿಎಫ್), ಕನ್ನಡಿಗಾಸ್ ಫೆಡರೇಷನ್, ಇಂಡಿಯನ್ ಅಸೋಸಿಯೇಷನ್ ಅಜ್ಮಾನ್ ನೆರವಿನಿಂದ ಕೋವಿಡ್ ಸಂದರ್ಭದಲ್ಲಿ ಪಡೆಯಬೇಕಾದ ಎಲ್ಲ ಅನುಮತಿ ಪತ್ರಗಳನ್ನು ಪಡೆದು ತಾಯ್ನಾಡಿಗೆ ಕಳುಹಿಸಲಾಗಿದೆ.

ದಿಲೀಪ್ ಆರೋಗ್ಯದ ಕುರಿತು ಅಬ್ದುಲ್ ಕರೀಮ್ ನೇತೃತ್ವದ ಕೆಸಿಎಫ್ ತಂಡ ಕಾಳಜಿ ವಹಿಸುತ್ತಿತ್ತು. ಅವರ ತಾಯಿ, ಸಹೋದರಿಯರು ಮಗನ ಮುಖವನ್ನು ಕೊನೆಯ ಬಾರಿ ನೋಡಬೇಕು. ಹೇಗಾದರೂ ಮೃತದೇಹ ಕಳುಹಿಸಿ ಎಂದು ಕೋರಿಕೊಂಡಿದ್ದು ಕೋವಿಡ್ ಸಂದರ್ಭದಲ್ಲಿ ಮೃತದೇಹವನ್ನು ತಾಯ್ನಾಡಿಗೆ ತಲುಪಿಸಲು ಇತರೇ ಅನಿವಾಸಿ ಕನ್ನಡಿಗರ ಸಹಾಯ ಕೇಳಿತ್ತು.
ಕೂಡಲೇ ಕೆಎನ್ಆರ್ಐ ಅಧ್ಯಕ್ಷ ಪ್ರವೀಣ್ ಶೆಟ್ಟಿ ಮತ್ತು ದುಬೈ ಕಾನ್ಸುಲೇಟ್ ಕಚೇರಿಯ ಕಾನ್ಸುಲ್ ಜಿತೇಂದ್ರ ಸಿಂಗ್ ನೇಗಿ ಅವರನ್ನು ಸಂಪರ್ಕಿಸಿದ್ದು ತಕ್ಷಣವೇ ಸ್ಪಂದಿಸಿ ಕಾನ್ಸುಲೇಟ್ ಮೂಲಕ ವ್ಯವಸ್ಥೆ ಮಾಡುವ ಭರವಸೆ ನೀಡಿದರು. ಅಜ್ಮಾನ್ ಇಂಡಿಯನ್ ಅಸೋಸಿಯೇಷನ್ನ ಛಾಯಾದೇವಿ ಕೃಷ್ಣಮೂರ್ತಿಯವರು ದಿಲೀಪ್ ವೀಸಾ, ಇಮಿಗ್ರೇಷನ್, ಡೆತ್ ಸರ್ಟಿಫಿಕೇಟ್ ಪಡೆಯಲು ಸಹಕರಿಸಿದರು. ಇದೆಲ್ಲರ ಫಲವಾಗಿ ದಿಲೀಪ್ ಮೃತದೇಹ ದುಬೈನಿಂದ ಮಂಗಳೂರಿಗೆ ತಲುಪಿದೆ ಎಂದು ಹಿದಾಯತ್ ಹೇಳಿದರು.
ದಿಲೀಪ್ ಸಹೋದರಿ ಕಿಡ್ನಿ ಸಮಸ್ಯೆಯಿಂದ ಡಯಾಲಿಸಿಸ್ ಮಾಡಿಸುತ್ತಿದ್ದರು. ಸೋದರನ ಆದಾಯವನ್ನೇ ನಂಬಿದ್ದ ಕುಟುಂಬ ದಿಲೀಪ್ ಆಸ್ಪತ್ರೆಗೆ ದಾಖಲಾದ ನಂತರ ಹಣದ ಕೊರತೆಯಿಂದ ಡಯಾಲಿಸಿಸ್ ಮಾಡಲಾಗದೆ ಮುಂದೂಡುತ್ತಿದ್ದಾರೆ. ಮದುವೆ ವಯಸ್ಸು ಮೀರಿದ ಸಹೋದರಿ ಮತ್ತು ತಾಯಿಗೆ ಆಸರೆ ಇಲ್ಲದಾಗಿದೆ.
The mortal remains of Dilip Kumar,57, a pastry chef working in Dubai, arrived at Mangaluru on Thursday. Dilip died on January 22, and Karnataka Cultural Foundation (KCF) and International Kannadigas Federation (IKF) helped in organising Dilip’s last journey from Dubai to Mangaluru.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 01:03 pm
HK News Staffer
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm