ಬ್ರೇಕಿಂಗ್ ನ್ಯೂಸ್
30-01-21 02:51 pm Mangalore Correspondent ಕರಾವಳಿ
ಬಂಟ್ವಾಳ, ಜ.30: ತಾಲೂಕಿನ ಸರಪಾಡಿಯಲ್ಲಿ ನಿರ್ಮಾಣಗೊಂಡು ಉದ್ಘಾಟನೆಗೆ ಸಿದ್ದವಾಗಿರುವ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ವೀಕ್ಷಣೆಗೆ ತೆರಳಿದ್ದ ಮಾಜಿ ಸಚಿವ ರಮಾನಾಥ ರೈ ಅವರಿಗೆ ಬಿಜೆಪಿ ಕಾರ್ಯಕರ್ತರು ಘೆರಾವ್ ಹಾಕಿದ ಘಟನೆ ನಡೆದಿದೆ.
ತನ್ನ ಅವಧಿಯಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಜಾರಿಯಾಗಿದ್ದ ಹಿನ್ನೆಲೆಯಲ್ಲಿ ಕ್ಷೇತ್ರದ ಮಾಜಿ ಶಾಸಕ ರಮಾನಾಥ ರೈ ಯೋಜನೆಯ ಕಾಮಗಾರಿಯನ್ನು ನೋಡಲೆಂದು ಇಂದು ಸ್ಥಳಕ್ಕೆ ತೆರಳಿದ್ದರು. ಆದರೆ, ರಮಾನಾಥ ರೈ ಸ್ಥಳಕ್ಕೆ ಬರುವ ವಿಚಾರ ತಿಳಿದು ಬಿಜೆಪಿ ಕಾರ್ಯಕರ್ತರು ಸೇರಿದ್ದು ಸ್ಥಳದಲ್ಲಿ ಬಿಗುವಿನ ವಾತಾವರಣ ನೆಲೆಯಾಗಿದೆ. ಗೇಟ್ ತೆರೆದು ತನಗೆ ವೀಕ್ಷಿಸಲು ಅವಕಾಶ ನೀಡಬೇಕೆಂದು ರಮಾನಾಥ ರೈ ಪಟ್ಟು ಹಿಡಿದಾಗ ಪೊಲೀಸರು ಅದಕ್ಕೆ ಅವಕಾಶ ಕೊಡಲಿಲ್ಲ. ಬಿಜೆಪಿ ಕಾರ್ಯಕರ್ತರು ಧಿಕ್ಕಾರ ಕೂಗಿದ್ದಲ್ಲದೆ, ರಮಾನಾಥ ರೈ ಜೊತೆ ವಾಗ್ವಾದ ನಡೆಸಿದ್ದಾರೆ. ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಆಕ್ರೋಶದ ಮಾತುಗಳು ವಿನಿಮಯ ಆಗಿದ್ದು ಪೊಲೀಸರ ನಡುವೆ ತಳ್ಳಾಟಕ್ಕೂ ಸಾಕ್ಷಿಯಾಯಿತು.


ಬಂಟ್ವಾಳದಿಂದ ಹೆಚ್ಚುವರಿ ಪೊಲೀಸರನ್ನು ಸ್ಥಳದಲ್ಲಿ ನಿಯೋಜಿಸಿದ್ದು ಸೇರಿದ್ದ ಕಾರ್ಯಕರ್ತರನ್ನು ಚದುರಿಸಲಾಗಿದೆ. ಬಹುಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ನಾಳೆ ಭಾನುವಾರ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಉದ್ಘಾಟಿಸಲಿದ್ದು ಇದೇ ಸಂದರ್ಭದಲ್ಲಿ ಮಾಜಿ ಶಾಸಕರು ಸ್ಥಳಕ್ಕೆ ಬಂದಿದ್ದು ಬಿಜೆಪಿ ಕಾರ್ಯಕರ್ತರ ಆಕ್ಷೇಪಕ್ಕೆ ಕಾರಣವಾಗಿದೆ.

ರಮಾನಾಥ ರೈ ಈ ವೇಳೆ ಪೊಲೀಸರ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾನು ಮಾಜಿ ಶಾಸಕ. ಸರಕಾರಿ ಯೋಜನೆಯನ್ನು ವೀಕ್ಷಿಸುವುದು ನನ್ನ ಹಕ್ಕು. ಅದನ್ನು ನಿರಾಕರಿಸುವಂತಿಲ್ಲ ಎಂದಿದ್ದಾರೆ. ಆದರೆ, ಪೊಲೀಸರು ಯೋಜನೆಗೆ ಸಂಬಂಧಪಟ್ಟ ಅಧಿಕಾರಿಗಳು ಇಲ್ಲದೆ ವೀಕ್ಷಿಸಲು ಅವಕಾಶ ನೋಡುವುದಿಲ್ಲ. ಮೇಲಿನ ಅಧಿಕಾರಿಗಳು ಪರ್ಮಿಶನ್ ನೀಡಿದರೆ ಅವಕಾಶ ನೀಡುತ್ತೇವೆ. ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನೆಲೆಯಾಗಿದೆ. ಹೀಗಿರುವಾಗ ಅವಕಾಶ ನೀಡುವುದು ಹೇಗೆ ಎಂದು ಪ್ರಶ್ನೆ ಮಾಡಿದ್ದಾರೆ. ಕೊನೆಗೆ ರಮಾನಾಥ ರೈ ಮತ್ತು ಕಾಂಗ್ರೆಸ್ ನಾಯಕರ ನಿಯೋಗ ಸ್ಥಳದಿಂದ ತೆರಳಿದ್ದಾರೆ.
Video:
Clash erupts between BJP and Congress Members in Bantwal in Mangalore. The issue erupted regarding water project at Bantwal.
18-12-25 12:37 pm
HK News Desk
ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ; ಸದನಕ್ಕ...
17-12-25 10:30 pm
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm