ಬ್ರೇಕಿಂಗ್ ನ್ಯೂಸ್
30-01-21 02:51 pm Mangalore Correspondent ಕರಾವಳಿ
ಬಂಟ್ವಾಳ, ಜ.30: ತಾಲೂಕಿನ ಸರಪಾಡಿಯಲ್ಲಿ ನಿರ್ಮಾಣಗೊಂಡು ಉದ್ಘಾಟನೆಗೆ ಸಿದ್ದವಾಗಿರುವ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ವೀಕ್ಷಣೆಗೆ ತೆರಳಿದ್ದ ಮಾಜಿ ಸಚಿವ ರಮಾನಾಥ ರೈ ಅವರಿಗೆ ಬಿಜೆಪಿ ಕಾರ್ಯಕರ್ತರು ಘೆರಾವ್ ಹಾಕಿದ ಘಟನೆ ನಡೆದಿದೆ.
ತನ್ನ ಅವಧಿಯಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಜಾರಿಯಾಗಿದ್ದ ಹಿನ್ನೆಲೆಯಲ್ಲಿ ಕ್ಷೇತ್ರದ ಮಾಜಿ ಶಾಸಕ ರಮಾನಾಥ ರೈ ಯೋಜನೆಯ ಕಾಮಗಾರಿಯನ್ನು ನೋಡಲೆಂದು ಇಂದು ಸ್ಥಳಕ್ಕೆ ತೆರಳಿದ್ದರು. ಆದರೆ, ರಮಾನಾಥ ರೈ ಸ್ಥಳಕ್ಕೆ ಬರುವ ವಿಚಾರ ತಿಳಿದು ಬಿಜೆಪಿ ಕಾರ್ಯಕರ್ತರು ಸೇರಿದ್ದು ಸ್ಥಳದಲ್ಲಿ ಬಿಗುವಿನ ವಾತಾವರಣ ನೆಲೆಯಾಗಿದೆ. ಗೇಟ್ ತೆರೆದು ತನಗೆ ವೀಕ್ಷಿಸಲು ಅವಕಾಶ ನೀಡಬೇಕೆಂದು ರಮಾನಾಥ ರೈ ಪಟ್ಟು ಹಿಡಿದಾಗ ಪೊಲೀಸರು ಅದಕ್ಕೆ ಅವಕಾಶ ಕೊಡಲಿಲ್ಲ. ಬಿಜೆಪಿ ಕಾರ್ಯಕರ್ತರು ಧಿಕ್ಕಾರ ಕೂಗಿದ್ದಲ್ಲದೆ, ರಮಾನಾಥ ರೈ ಜೊತೆ ವಾಗ್ವಾದ ನಡೆಸಿದ್ದಾರೆ. ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಆಕ್ರೋಶದ ಮಾತುಗಳು ವಿನಿಮಯ ಆಗಿದ್ದು ಪೊಲೀಸರ ನಡುವೆ ತಳ್ಳಾಟಕ್ಕೂ ಸಾಕ್ಷಿಯಾಯಿತು.


ಬಂಟ್ವಾಳದಿಂದ ಹೆಚ್ಚುವರಿ ಪೊಲೀಸರನ್ನು ಸ್ಥಳದಲ್ಲಿ ನಿಯೋಜಿಸಿದ್ದು ಸೇರಿದ್ದ ಕಾರ್ಯಕರ್ತರನ್ನು ಚದುರಿಸಲಾಗಿದೆ. ಬಹುಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ನಾಳೆ ಭಾನುವಾರ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಉದ್ಘಾಟಿಸಲಿದ್ದು ಇದೇ ಸಂದರ್ಭದಲ್ಲಿ ಮಾಜಿ ಶಾಸಕರು ಸ್ಥಳಕ್ಕೆ ಬಂದಿದ್ದು ಬಿಜೆಪಿ ಕಾರ್ಯಕರ್ತರ ಆಕ್ಷೇಪಕ್ಕೆ ಕಾರಣವಾಗಿದೆ.

ರಮಾನಾಥ ರೈ ಈ ವೇಳೆ ಪೊಲೀಸರ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾನು ಮಾಜಿ ಶಾಸಕ. ಸರಕಾರಿ ಯೋಜನೆಯನ್ನು ವೀಕ್ಷಿಸುವುದು ನನ್ನ ಹಕ್ಕು. ಅದನ್ನು ನಿರಾಕರಿಸುವಂತಿಲ್ಲ ಎಂದಿದ್ದಾರೆ. ಆದರೆ, ಪೊಲೀಸರು ಯೋಜನೆಗೆ ಸಂಬಂಧಪಟ್ಟ ಅಧಿಕಾರಿಗಳು ಇಲ್ಲದೆ ವೀಕ್ಷಿಸಲು ಅವಕಾಶ ನೋಡುವುದಿಲ್ಲ. ಮೇಲಿನ ಅಧಿಕಾರಿಗಳು ಪರ್ಮಿಶನ್ ನೀಡಿದರೆ ಅವಕಾಶ ನೀಡುತ್ತೇವೆ. ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನೆಲೆಯಾಗಿದೆ. ಹೀಗಿರುವಾಗ ಅವಕಾಶ ನೀಡುವುದು ಹೇಗೆ ಎಂದು ಪ್ರಶ್ನೆ ಮಾಡಿದ್ದಾರೆ. ಕೊನೆಗೆ ರಮಾನಾಥ ರೈ ಮತ್ತು ಕಾಂಗ್ರೆಸ್ ನಾಯಕರ ನಿಯೋಗ ಸ್ಥಳದಿಂದ ತೆರಳಿದ್ದಾರೆ.
Video:
Clash erupts between BJP and Congress Members in Bantwal in Mangalore. The issue erupted regarding water project at Bantwal.
07-04-26 03:51 pm
HK News Staffer
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
07-04-26 11:45 am
HK News Staffer
ಟ್ರಂಪ್ ವಾರ್ನಿಂಗ್ ಗೆ ಇರಾನ್ ಟಕ್ಕರ್ ; ವಿದ್ಯುತ್ ಸ...
07-04-26 11:42 am
ಟ್ರಂಪ್ 8pm ಘೋರ ಎಚ್ಚರಿಕೆಗೆ ಇರಾನ್ ತಿರುಗೇಟು ; ನ...
06-04-26 06:16 pm
ಗಲ್ಫ್ ಯುದ್ಧ ಎಫೆಕ್ಟ್ ; ಇಸ್ರೇಲ್ ಗೆ ಏರ್ ಇಂಡಿಯಾ ವ...
06-04-26 06:09 pm
ಯುಎಇಯಿಂದ ಪಾಕಿಸ್ತಾನಕ್ಕೆ ಬಿಗ್ ಶಾಕ್ ; 2 ಬಿಲಿಯನ್...
05-04-26 12:37 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
07-04-26 04:04 pm
HK News Staffer
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm
ಆತ್ಮಹತ್ಯೆ ಮಾಡಿಕೊಂಡ ಪತ್ನಿಯನ್ನು ನೋಡಲು ಆಸ್ಪತ್ರೆಗ...
06-04-26 02:34 pm
ಹಂದಿ ಬೇಟೆಗಾಗಿ ತೋಟದಲ್ಲಿ ಇಟ್ಟಿದ್ದ ನಾಡಬಾಂಬ್ ಸ್ಫೋ...
05-04-26 11:03 am