ಬ್ರೇಕಿಂಗ್ ನ್ಯೂಸ್
30-01-21 02:51 pm Mangalore Correspondent ಕರಾವಳಿ
ಬಂಟ್ವಾಳ, ಜ.30: ತಾಲೂಕಿನ ಸರಪಾಡಿಯಲ್ಲಿ ನಿರ್ಮಾಣಗೊಂಡು ಉದ್ಘಾಟನೆಗೆ ಸಿದ್ದವಾಗಿರುವ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ವೀಕ್ಷಣೆಗೆ ತೆರಳಿದ್ದ ಮಾಜಿ ಸಚಿವ ರಮಾನಾಥ ರೈ ಅವರಿಗೆ ಬಿಜೆಪಿ ಕಾರ್ಯಕರ್ತರು ಘೆರಾವ್ ಹಾಕಿದ ಘಟನೆ ನಡೆದಿದೆ.
ತನ್ನ ಅವಧಿಯಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಜಾರಿಯಾಗಿದ್ದ ಹಿನ್ನೆಲೆಯಲ್ಲಿ ಕ್ಷೇತ್ರದ ಮಾಜಿ ಶಾಸಕ ರಮಾನಾಥ ರೈ ಯೋಜನೆಯ ಕಾಮಗಾರಿಯನ್ನು ನೋಡಲೆಂದು ಇಂದು ಸ್ಥಳಕ್ಕೆ ತೆರಳಿದ್ದರು. ಆದರೆ, ರಮಾನಾಥ ರೈ ಸ್ಥಳಕ್ಕೆ ಬರುವ ವಿಚಾರ ತಿಳಿದು ಬಿಜೆಪಿ ಕಾರ್ಯಕರ್ತರು ಸೇರಿದ್ದು ಸ್ಥಳದಲ್ಲಿ ಬಿಗುವಿನ ವಾತಾವರಣ ನೆಲೆಯಾಗಿದೆ. ಗೇಟ್ ತೆರೆದು ತನಗೆ ವೀಕ್ಷಿಸಲು ಅವಕಾಶ ನೀಡಬೇಕೆಂದು ರಮಾನಾಥ ರೈ ಪಟ್ಟು ಹಿಡಿದಾಗ ಪೊಲೀಸರು ಅದಕ್ಕೆ ಅವಕಾಶ ಕೊಡಲಿಲ್ಲ. ಬಿಜೆಪಿ ಕಾರ್ಯಕರ್ತರು ಧಿಕ್ಕಾರ ಕೂಗಿದ್ದಲ್ಲದೆ, ರಮಾನಾಥ ರೈ ಜೊತೆ ವಾಗ್ವಾದ ನಡೆಸಿದ್ದಾರೆ. ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಆಕ್ರೋಶದ ಮಾತುಗಳು ವಿನಿಮಯ ಆಗಿದ್ದು ಪೊಲೀಸರ ನಡುವೆ ತಳ್ಳಾಟಕ್ಕೂ ಸಾಕ್ಷಿಯಾಯಿತು.


ಬಂಟ್ವಾಳದಿಂದ ಹೆಚ್ಚುವರಿ ಪೊಲೀಸರನ್ನು ಸ್ಥಳದಲ್ಲಿ ನಿಯೋಜಿಸಿದ್ದು ಸೇರಿದ್ದ ಕಾರ್ಯಕರ್ತರನ್ನು ಚದುರಿಸಲಾಗಿದೆ. ಬಹುಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ನಾಳೆ ಭಾನುವಾರ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಉದ್ಘಾಟಿಸಲಿದ್ದು ಇದೇ ಸಂದರ್ಭದಲ್ಲಿ ಮಾಜಿ ಶಾಸಕರು ಸ್ಥಳಕ್ಕೆ ಬಂದಿದ್ದು ಬಿಜೆಪಿ ಕಾರ್ಯಕರ್ತರ ಆಕ್ಷೇಪಕ್ಕೆ ಕಾರಣವಾಗಿದೆ.

ರಮಾನಾಥ ರೈ ಈ ವೇಳೆ ಪೊಲೀಸರ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾನು ಮಾಜಿ ಶಾಸಕ. ಸರಕಾರಿ ಯೋಜನೆಯನ್ನು ವೀಕ್ಷಿಸುವುದು ನನ್ನ ಹಕ್ಕು. ಅದನ್ನು ನಿರಾಕರಿಸುವಂತಿಲ್ಲ ಎಂದಿದ್ದಾರೆ. ಆದರೆ, ಪೊಲೀಸರು ಯೋಜನೆಗೆ ಸಂಬಂಧಪಟ್ಟ ಅಧಿಕಾರಿಗಳು ಇಲ್ಲದೆ ವೀಕ್ಷಿಸಲು ಅವಕಾಶ ನೋಡುವುದಿಲ್ಲ. ಮೇಲಿನ ಅಧಿಕಾರಿಗಳು ಪರ್ಮಿಶನ್ ನೀಡಿದರೆ ಅವಕಾಶ ನೀಡುತ್ತೇವೆ. ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನೆಲೆಯಾಗಿದೆ. ಹೀಗಿರುವಾಗ ಅವಕಾಶ ನೀಡುವುದು ಹೇಗೆ ಎಂದು ಪ್ರಶ್ನೆ ಮಾಡಿದ್ದಾರೆ. ಕೊನೆಗೆ ರಮಾನಾಥ ರೈ ಮತ್ತು ಕಾಂಗ್ರೆಸ್ ನಾಯಕರ ನಿಯೋಗ ಸ್ಥಳದಿಂದ ತೆರಳಿದ್ದಾರೆ.
Video:
Clash erupts between BJP and Congress Members in Bantwal in Mangalore. The issue erupted regarding water project at Bantwal.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm