ಬ್ರೇಕಿಂಗ್ ನ್ಯೂಸ್
30-01-21 04:10 pm Mangalore Correspondent ಕರಾವಳಿ
ಮಂಗಳೂರು, ಜ.30: ಮಹಾರಾಷ್ಟ್ರದಲ್ಲಿ ಮೂರು ಪಕ್ಷಗಳು ಸೇರಿ ಸರಕಾರ ನಡೆಸುತ್ತಿದ್ದು, ತಮ್ಮಲ್ಲೇ ಕಚ್ಚಾಟ ಮಾಡುತ್ತಿವೆ. ಎತ್ತು ಏರಿಗೆಳೆದರೆ ಕೋಣ ನೀರಿಗೆಳೆಯುವ ರೀತಿ ಅಲ್ಲಿನ ಸ್ಥಿತಿಯಿದೆ. ತಮ್ಮಲ್ಲೇ ಮೂರು ಬಾಗಿಲು ಮಾಡಿಕೊಂಡಿರುವ ಮಂದಿ ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಗಡಿ ಕ್ಯಾತೆಯ ಹೇಳಿಕೆ ಹರಿಯ ಬಿಡುತ್ತಿದ್ದಾರೆ ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ.
ಕಾರ್ಯಕ್ರಮ ನಿಮಿತ್ತ ಮಂಗಳೂರಿನ ಬಿಜೆಪಿ ಕಚೇರಿಗೆ ಆಗಮಿಸಿದ್ದ ಲಕ್ಷ್ಮಣ ಸವದಿ, ಕಾರ್ಯಕರ್ತರ ಸನ್ಮಾನ ಸ್ವೀಕರಿಸಿದ ಬಳಿಕ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದರು.


ಮಹಾರಾಷ್ಟ್ರ ಸಿಎಂ ಉದ್ಧವ್, ಉದ್ಧಟತನದ ಹೇಳಿಕೆ ನೀಡುತ್ತಿದ್ದಾರೆ. ಕಾರವಾರ, ಬೆಳಗಾವಿ, ನಿಪ್ಪಾಣಿ ತಮ್ಮದೆಂದು ಹೇಳುತ್ತಿದ್ದಾರೆ. ಮರಾಠಿ ಭಾಷಿಗರು ಈ ಭಾಗದಲ್ಲಿ ಇದ್ದಾರೆಂದು ಅಲ್ಲಿನ ಭಾಗವನ್ನು ಮಹಾರಾಷ್ಟ್ರ ಎನ್ನಲು ಆಗುತ್ತದೆಯೇ ಎಂದು ಪ್ರಶ್ನಿಸಿದ ಸವದಿ, ಮರಾಠಿ ಮಾತನಾಡುವ ಮಂದಿ ಇಡೀ ಕರ್ನಾಟಕದಲ್ಲಿ ಇದ್ದಾರೆ. ಉತ್ತರ ಕರ್ನಾಟಕ ಹಲವೆಡೆ ಮರಾಠಿ ಭಾಷೆ ಮಾತನಾಡುವ ಮಂದಿ ವಾಸವಿದ್ದಾರೆ. ಹಾಗೆಂದು ಮುಂಬೈನಲ್ಲಿ ಕನ್ನಡ ಮಾತನಾಡುವ ಮಂದಿ ಬಹಳಷ್ಟು ಮಂದಿ ಇದ್ದಾರೆ. ಕರಾವಳಿ ಭಾಗದಿಂದ ಹೋಗಿ ಅಲ್ಲಿ ನೆಲೆಸಿದವರು ಕನ್ನಡ, ತುಳು ಮಾತನಾಡುತ್ತಾರೆ. ಹಾಗೆಂದು ಮುಂಬೈಯನ್ನು ಕರ್ನಾಟಕಕ್ ಕೊಡಿ ಎನ್ನಲಾಗುತ್ತದೆಯೇ ಎಂದು ಪ್ರಶ್ನಿಸಿದರು.
ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ. ಬೆಳಗಾವಿಯನ್ನು ಎರಡನೇ ರಾಜಧಾನಿ ಎಂದು ಪರಿಗಣಿಸಲಾಗಿದೆ. ಅಲ್ಲಿ ವಿಧಾನಸಭೆ ಅಧಿವೇಶನ ನಡೆಸುವುದನ್ನು ಮಾಡಿಕೊಂಡು ಬಂದಿದ್ದೇವೆ. ಇಂಥ ಸಂದರ್ಭದಲ್ಲಿ ಬೆಳಗಾವಿ ಮೇಲೆ ಹಕ್ಕು ಸ್ಥಾಪಿಸುವ ಹೇಳಿಕೆ ನೀಡುವುದೇ ಅಸಂಬದ್ಧ. ಮಹಾರಾಷ್ಟ್ರ ನಾಯಕರ ಹೇಳಿಕೆಯನ್ನು ಖಂಡಿಸುತ್ತೇನೆ ಎಂದು ಹೇಳಿದರು.

ಕರಾವಳಿ ಕಾರ್ಯಕರ್ತರ ಬಗ್ಗೆ ಹೆಮ್ಮೆ
ಇದಕ್ಕೂ ಮುನ್ನ ಕಾರ್ಯಕರ್ತರ ಸನ್ಮಾನ ಸ್ವೀಕರಿಸಿ ಮಾತನಾಡಿದ ಸವದಿ, ಬೇರೆ ಕಡೆಗೆ ಹೋಲಿಸಿದರೆ ಕರಾವಳಿ ಭಾಗದ ಕಾರ್ಯಕರ್ತರು ಪಕ್ಷದ ಬಗ್ಗೆ ಹೆಚ್ಚು ಅಭಿಮಾನ, ಗೌರವ ಇದ್ದವರು. ಹಾಗಾಗಿ ಇಲ್ಲಿನ ಕಾರ್ಯಕರ್ತರ ಬಗ್ಗೆ ವಿಶೇಷ ಗೌರವ ಇದೆ. ನನ್ನಿಂದ ಯಾವುದೇ ರೀತಿಯ ಕೆಲಸಗಳಾಗಬೇಕಿದ್ದರೂ, ಕಾರ್ಯಕರ್ತರು ನೇರವಾಗಿ ಫೋನ್ ಮಾಡಬಹುದು. ಬೆಂಗಳೂರಿನ ಮನೆ ಮತ್ತು ಕಚೇರಿಯಲ್ಲಿ ಸದಾ ಲಭ್ಯನಿದ್ದೇನೆ. ಬಂದು ಭೇಟಿ ಮಾಡಬಹುದು ಎಂದು ಹೇಳಿದರು.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm