ಬ್ರೇಕಿಂಗ್ ನ್ಯೂಸ್
30-01-21 10:40 pm Mangaluru Correspondent ಕರಾವಳಿ
ಮಂಗಳೂರು, ಜ.30: ಸಿಸಿಬಿ ಪೊಲೀಸರ ಎಣ್ಣೆ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಶಿಸ್ತು ಕ್ರಮ ಜರುಗಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಲೋಪ ಕಂಡುಬಂದ ಹಿನ್ನೆಲೆಯಲ್ಲಿ ಎಂಟು ಮಂದಿ ಸಿಬಂದಿಯನ್ನು ಕಮಿಷನರೇಟ್ ವ್ಯಾಪ್ತಿಯ ವಿವಿಧ ಠಾಣೆಗಳಿಗೆ ವರ್ಗಾಯಿಸಿ ಆದೇಶ ಮಾಡಿದ್ದಾರೆ.
ಅಲ್ಲದೆ, ಘಟನೆಗೆ ಸಂಬಂಧಿಸಿ ಹೆಚ್ಚುವರಿ ಇಲಾಖಾ ತನಿಖೆ ಕೈಗೊಂಡು ವಿಚಾರಣಾ ವರದಿ ನೀಡುವಂತೆ ಡಿಸಿಪಿ ಹರಿರಾಮ್ ಶಂಕರ್ ಅವರಿಗೆ ಸೂಚಿಸಲಾಗಿದೆ.


ಪ್ರಕರಣದಲ್ಲಿ ಎಎಸ್ಐಗಳು, ಐದು ಹೆಡ್ ಕಾನ್ಸ್ ಟೇಬಲ್ ಗಳಿದ್ದು ಅವರನ್ನು ಕೊಣಾಜೆ, ಬಜ್ಪೆ, ಕಂಕನಾಡಿ ನಗರ, ಪಾಂಡೇಶ್ವರ, ಬಂದರು, ಉರ್ವಾ ಮತ್ತು ಬರ್ಕೆ ಠಾಣೆಗಳಿಗೆ ವರ್ಗಾಯಿಸಿ ಆದೇಶ ಮಾಡಲಾಗಿದೆ. ಅಲ್ಲದೆ, ನಾಳೆಯೇ ಅವರು ತಮಗೆ ನಿಯೋಜಿಸಿದ ಠಾಣೆಗಳಲ್ಲಿ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿರುವ ಕಮಿಷನರ್ ಶಶಿಕುಮಾರ್, ಜನಸ್ನೇಹಿ ಪೊಲೀಸ್ ವ್ಯವಸ್ಥೆ ರೂಪಿಸುವ ನಮ್ಮ ಪ್ರಯತ್ನದ ನಡುವೆ ಈ ರೀತಿಯ ಘಟನೆ ನಡೆದಿರುವುದು ಪೊಲೀಸರ ಘನತೆಗೆ ಕುಂದು ತಂದಿದೆ. ಕರ್ತವ್ಯದ ಸಮಯದಲ್ಲಿ ಬೆಟ್ಟಿಂಗ್ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಯ ಜೊತೆಗೆ ಜೊತೆಗೆ ಕುಳಿತು ಟೇಬಲ್ ಹಂಚಿಕೊಂಡಿದ್ದು ತಪ್ಪೆಂದು ಪರಿಗಣಿಸಲಾಗಿದೆ. ಹೀಗಾಗಿ ಘಟನೆಯಲ್ಲಿ ಪಾಲ್ಗೊಂಡವರ ವಿರುದ್ಧ ಇಲಾಖಾ ಶಿಸ್ತು ಕ್ರಮ ಜರುಗಿಸಲಾಗಿದೆ ಎಂದು ಹೇಳಿದ್ದಾರೆ.
ಸಿಸಿಬಿ ಸಿಬಂದಿ ಪಾಲ್ಗೊಂಡಿದ್ದ ಎಣ್ಣೆ ಪಾರ್ಟಿಯ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿತ್ತು.
Read: ಮಂಗಳೂರು ಸಿಸಿಬಿ ಸಿಬಂದಿ ಎಣ್ಣೆ ಪಾರ್ಟಿ ; ತನಿಖೆಗೆ ಸೂಚಿಸಿದ ಕಮಿಷನರ್
In connection to CCB police personals drinking in a bar at Thokottu in Mangalore, Police Commissioner Shashi Kumar has transferred eight of the CCB police personals to Various Police Stations of Mangalore.
18-12-25 12:37 pm
HK News Desk
ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ; ಸದನಕ್ಕ...
17-12-25 10:30 pm
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm