ಬ್ರೇಕಿಂಗ್ ನ್ಯೂಸ್
31-01-21 05:08 pm Mangaluru Correspondent ಕರಾವಳಿ
ಮಂಗಳೂರು, ಜ.31: ಪ್ರತಿ ನಾಗರಿಕನಿಗೂ ಶುದ್ಧ ಕುಡಿಯುವ ನೀರು ಅವಶ್ಯಕವಾಗಿದ್ದು ಪ್ರತಿ ಮನೆ ಮನೆಗೂ ಶುದ್ಧ ಕುಡಿಯುವ ನೀರು ಪೂರೈಕೆಯಾಗಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.
ಅವರು ಇಂದು ಬಂಟ್ವಾಳ ತಾಲೂಕಿನ ಸ್ಪರ್ಶ ಸಭಾಂಗಣದಲ್ಲಿ ಬಂಟ್ವಾಳ ತಾಲೂಕಿನ ನರಿಕೊಂಬು ಮತ್ತು ಸರಪಾಡಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳ ಉದ್ಘಾಟನೆ ನೆರವೇರಿಸಿ ಮಾತನಾಡಿದರು.
ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು, ಈ ಸಮಸ್ಯೆಗಳನ್ನು ನಿವಾರಿಸಲು ಸರ್ಕಾರ ವಿವಿಧ ಯೋಜನೆಗಳನ್ನು ಜಾರಿಗೊಳಿಸಿದೆ. ಅದರಂತೆ ಬಹುಗ್ರಾಮ ಶುದ್ಧ ಕುಡಿಯುವ ನೀರು ಸರಬರಾಜು ಯೋಜನೆಯಡಿ 62 ಕೋಟಿ ರೂ. ಅನುದಾನದಲ್ಲಿ ಬಂಟ್ವಾಳ ತಾಲೂಕಿನ ನರಿಕೊಂಬು ಮತ್ತು ಸರಪಾಡಿ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಯನ್ನು ಅನುಷ್ಟಾನಗೊಳಿಸಲಾಗುತ್ತಿದೆ ಎಂದರು.

ನೀರಿನ ಮೂಲಗಳಾದ ಕೆರೆ, ನದಿ, ಅಣೆಕಟ್ಟುಗಳಿಂದ ನೀರನ್ನು ಸಂಗ್ರಹಿಸಿ ರಾಜ್ಯದ ಪ್ರತಿ ಮನೆ ಮನೆಗೂ ನೀರು ತಲುಪುವಂತಾಗಬೇಕು ಹಾಗೂ ದಿನದ 24 ಗಂಟೆಗಳ ಕಾಲವೂ ಶುದ್ಧ ಕುಡಿಯುವ ನೀರು ಪೂರೈಕೆ ಆಗಬೇಕು ಎಂದರು.
ಜಿಲ್ಲಾ ಪಂಚಾಯತ್ ಅಧ್ಯಕ್ಷರು ಹಾಗೂ ಸದಸ್ಯರುಗಳು ತಮ್ಮ ಜಿಲ್ಲೆಯಲ್ಲಿ ಯಾವ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆಗಳು ಇವೆ ಎಂದು ಗುರುತಿಸಿ ಅದನ್ನು ಸರಿಪಡಿಸಲು ಕಾರ್ಯವನ್ನು ಮಾಡಬೇಕು ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಕುಡಿಯುವ ನೀರಿನ ಯೋಜನೆಯು ಬಹಳ ವೇಗವಾಗಿ, ಸಮರ್ಪಕವಾಗಿ ಹಾಗೂ ಎಲ್ಲರಿಗೂ ಅನುಕೂಲವಾಗುವ ರೀತಿಯಲ್ಲಿ ನಿರ್ಮಾಣವಾಗಿರುವುದು ಬಹಳ ಸಂತೋಷಕರ ಸಂಗತಿ ಎಂದರು.
ಅಧ್ಯಕ್ಷತೆ ವಹಿಸಿದ್ದ ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಮಾತನಾಡಿ, ಬಂಟ್ವಾಳ ತಾಲೂಕು ನರಿಕೊಂಬು ಮತ್ತು ಇತರೆ 38 ಜನ ವಸತಿ ಪ್ರದೇಶಗಳಿಗೆ ಹಾಗೂ ಸರಪಾಡಿ ಮತ್ತು ಇತರೆ 95 ಜನ ವಸತಿ ಪ್ರದೇಶಗಳಿಗೆ 22.55 ಕೋಟಿ ಮತ್ತು 38.70 ಕೋಟಿ ವೆಚ್ಚದಲ್ಲಿ ಶುದ್ಧ ಕುಡಿಯುವ ನೀರು ಸರಬರಾಜು ಕಾಮಗಾರಿ ಪೂರ್ಣಗೊಂಡಿದೆ ಎಂದರು.
ಬಂಟ್ವಾಳ ವಿಧಾನಸಭಾ ಕ್ಷೇತ್ರ ಒಟ್ಟು 39 ಗ್ರಾಮ ಪಂಚಾಯತಿಗಳನ್ನು ಹೊಂದಿದ್ದು, ಈ ಯೋಜನೆಗಳು 30 ಗ್ರಾಮ ಪಂಚಾಯಿತಿಗಳನ್ನು ಒಳಗೊಂಡಿರುತ್ತದೆ. ಇನ್ನುಳಿದ ವೀರಕಂಬ, ಬೋಳಂತೂರು, ಸಜೀಪ ಮುನ್ನೂರು, ಸಜೀಪ ಮೂಡ ಮತ್ತು ಮಂಚಿ ಗ್ರಾಮ ಪಂಚಾಯತಿಗಳ ಒಟ್ಟು 49 ಜನ ವಸತಿ ಪ್ರದೇಶಗಳಿಗೆ ಹಾಗೂ ಉಳ್ಳಾಲ ನಗರಸಭೆ, ಕೋಟೆಕಾರು ಪಟ್ಟಣ ಪಂಚಾಯತಿಗಳಿಗೆ ನೇತ್ರಾವತಿ ನದಿಯಿಂದ ನೀರು ಸರಬರಾಜು ವ್ಯವಸ್ಥೆಯನ್ನು ಕಲ್ಪಿಸಲಾಗಿದ್ದು, ಕಾಮಗಾರಿ ಪ್ರಗತಿಯಲ್ಲಿದೆ ಎಂದರು.

ಕೇಂದ್ರ ಜಲ ಜೀವನ ಮಿಷನ್ ಯೋಜನೆಯಡಿ 2024 ರ ಒಳಗೆ ಗ್ರಾಮೀಣ ಪ್ರದೇಶದ ಪ್ರತಿ ಮನೆಗಳಿಗೆ ನಳಗಳ ಮೂಲಕ ಶುದ್ಧ ಕುಡಿಯುವ ನೀರನ್ನು ತಲುಪಿಸುವ ಯೋಜನೆಗೆ ಸಂಬಂದಿಸಿ ಬಂಟ್ವಾಳ ವಿಧಾನ ಸಭಾ ಕ್ಷೇತ್ರದ 30 ಗ್ರಾಮ ಪಂಚಾಯತಿಗಳ 46 ಗ್ರಾಮಗಳಿಗೆ ಅಂದಾಜು 33.72 ಕೋಟಿ ವೆಚ್ಚದ ಅಂದಾಜು ಪಟ್ಟಿಯನ್ನು ತಯಾರಿಸಲಾಗಿದ್ದು, ಈ ಯೋಜನೆ ಅನುಷ್ಟಾನಗೊಳ್ಳಬೇಕಾಗಿದೆ ಎಂದರು.
ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೊಡು, ಜಿಲ್ಲಾ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಸೆಲ್ವಮಣಿ. ಆರ್, ರಾಜ್ಯ ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಜಿಪಂ ಅಭಿಯಂತರರಾದ ನರೇಂದ್ರ ಬಾಬು, ಜಿಲ್ಲಾ ಪಂಚಾಯತ್ ಸದಸ್ಯರಾದ ರವೀಂದ್ರ ಕಂಬಳಿ, ಮಂಜುಳಾ, ಕಮಲಾಕ್ಷೀ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm