ಬೈಂದೂರು ; ಆಹಾರ ಅರಸಿ ಬಂದು ರೈಲು ಡಿಕ್ಕಿಯಾಗಿ ಅಪರೂಪದ ಕಪ್ಪು ಚಿರತೆ ಸಾವು

02-02-21 05:02 pm       Mangalore Correspondent   ಕರಾವಳಿ

ಕಪ್ಪು ಚಿರತೆಯೊಂದು ರೈಲು ಡಿಕ್ಕಿ ಹೊಡೆದು ಮೃತಪಟ್ಟ ಘಟನೆ ಕುಂದಾಪುರ ವಲಯ ಅರಣ್ಯ ವ್ಯಾಪ್ತಿಯಲ್ಲಿ ನಡೆದಿದೆ. 

ಉಡುಪಿ, ಫೆ.2 : ಕುಂದಾಪುರ ವಲಯ ಅರಣ್ಯ ವ್ಯಾಪ್ತಿಯಲ್ಲಿ ಕಪ್ಪು ಚಿರತೆಯೊಂದು ರೈಲು ಡಿಕ್ಕಿ ಹೊಡೆದು ಮೃತಪಟ್ಟ ಘಟನೆ ನಡೆದಿದೆ. 

ಸೋಮವಾರ ಮುಂಜಾನೆ ಬೈಂದೂರು ತಾಲೂಕು ನಾಡಾ ಗ್ರಾಮದ ಬಡಾಕೆರೆ ರೈಲ್ವೆ ಮೇಲ್ಸೇತುವೆ ಬಳಿ ಕಪ್ಪು ಚಿರತೆ ಪತ್ತೆಯಾಗಿತ್ತು. ಸುಮಾರು ನಾಲ್ಕು ವರ್ಷದ ಗಂಡು ಚಿರತೆಯಾಗಿದ್ದು ಮೇಲ್ಸೇತುವೆಯಲ್ಲಿ ರೈಲು ಡಿಕ್ಕಿ ಹೊಡೆದಿದೆ. ಆಹಾರ ಅರಸಿ ಬಂದ ಚಿರತೆಗೆ ರೈಲ್ವೆ ಮೇಲ್ಸೇತುವೆಯಿಂದ ರೈಲು ಬರುತ್ತಿರುವಾಗ ತಪ್ಪಿಸಿಕೊಳ್ಳಲು ಸಾಧ್ಯವಾಗದೇ ಪ್ರಾಣ ಕಳೆದುಕೊಂಡಿದೆ.

ಮಾಹಿತಿ ತಿಳಿಯುತ್ತಲೇ ಕುಂದಾಪುರ ವಲಯ ಅರಣ್ಯಾಧಿಕಾರಿ ಪ್ರಭಾಕರ ಕುಲಾಲ್ ಮತ್ತು ಸಿಬ್ಬಂದಿ ಚಿರತೆ ಶವ ವಶಕ್ಕೆ ಪಡೆದಿದ್ದಾರೆ. ನಂತರ ವಂಡ್ಸೆ ಪಶು ವೈದ್ಯರು ಮರಣೋತ್ತರ ಪರೀಕ್ಷೆ ನಡೆಸಿದರು. ಬಳಿಕ ಕುಂದಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿ ಆಶೀಶ್ ರೆಡ್ಡಿ ಸಮಕ್ಷಮದಲ್ಲಿ ವನ್ಯಜೀವಿ ನಿಯಮದ ಪ್ರಕಾರ ಅಂತಿಮ ಸಂಸ್ಕಾರ ಮಾಡಲಾಯಿತು.

A Black Cheetah was found dead after it was hit by a train near Byndoor in Udupi.