ಬ್ರೇಕಿಂಗ್ ನ್ಯೂಸ್
02-02-21 06:15 pm Mangalore Correspondent ಕರಾವಳಿ
ಮಂಗಳೂರು, ಫೆ.2 : ಮೂರು ಬಾರಿ ಶಾಸಕರಾಗಿದ್ದು, ಯಾವುದೇ ಕಪ್ಪು ಚುಕ್ಕೆ ಇಲ್ಲದ ಸಜ್ಜನ ರಾಜಕಾರಣಿಯಾಗಿರುವ ಕರಾವಳಿಯ ಪ್ರಬಲ ಬಂಟ ಸಮುದಾಯದ ಪ್ರತಾಪಚಂದ್ರ ಶೆಟ್ಟಿಯವರನ್ನು ಬಿಜೆಪಿ ಹಾಗೂ ಜೆಡಿಎಸ್ ಒಳ ಒಪ್ಪಂದ ಮಾಡಿಕೊಂಡು ಸಭಾಪತಿ ಸ್ಥಾನದಿಂದ ಇಳಿಸಲು ಪಿತೂರಿ ಮಾಡಿದೆ. ಅವರನ್ನು ಬಲವಂತವಾಗಿ ರಾಜೀನಾಮೆ ಪಡೆಯಲು ಯತ್ನಿಸುತ್ತಿರುವ ಬೆಳವಣಿಗೆ ಕರಾವಳಿಯ ಜಿಲ್ಲೆಗೆ ಹಾಗೂ ಬಂಟ ಸಮುದಾಯಕ್ಕೆ ಮಾಡುತ್ತಿರುವ ಅವಮಾನ ಎಂದು ಮಾಜಿ ಸಚಿವ ಅಭಯ ಚಂದ್ರ ಜೈನ್ ಆರೋಪಿಸಿದ್ದಾರೆ.
ಮಂಗಳೂರಿನ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ರಾಜಕಾರಣದ ಇತಿಹಾಸದಲ್ಲಿ ಯಾವುದೇ ಪಕ್ಷ ಅಧಿಕಾರದಲ್ಲಿದ್ದರೂ ಸಭಾಪತಿಯ ಅಧಿಕಾರಾವಧಿ ಮುಗಿಯದೆ ಅವರನ್ನು ರಾಜೀನಾಮೆ ಕೊಡಿಸುವ ಅಥವಾ ಕೆಳಗಿಳಿಸುವ ಪ್ರಯತ್ನ ನಡೆದಿಲ್ಲ. ಆದರೆ ಬಿಜೆಪಿ ಮತ್ತು ಜೆಡಿಎಸ್ ಆ ಕೆಲಸವನ್ನು ಮಾಡುತ್ತಿದೆ ಎಂದು ಅವರು ಹೇಳಿದರು.

ಪ್ರತಾಪಚಂದ್ರ ಶೆಟ್ಟಿ ಶ್ರೀಮಂತ ಕುಟಂಬದವರಾಗಿದ್ದು, ವಿಜಯ ಬ್ಯಾಂಕ್ ಅಧಿಕಾರಿಯಾಗಿದ್ದಾಗ ರಾಜಕೀಯ ಸೇವೆಯ ಉದ್ದೇಶದಿಂದ ಕೆಲಸ ತೊರೆದವರು. ಮೂರು ಬಾರಿ ಶಾಸಕರಾಗಿ ಜನಸೇವೆ ಸಲ್ಲಿಸಿದ್ದರೂ ಮಂತ್ರಿಗಿರಿಗಾಗಿ ಹಾತೊರೆದವರಲ್ಲ. ಭ್ರಷ್ಟಾಚಾರ ರಹಿತ ಹೆಮ್ಮೆಯ ರಾಜಕಾರಣಿಗೆ ಈ ರೀತಿ ಅವಮಾನ ಮಾಡುತ್ತಿರುವುದನ್ನು ಕಂಡು ಬೇಸರವಾಗುತ್ತಿದೆ. ಅಧಿಕಾರ ದಾಹದಿಂದ ಬಿಜೆಪಿ ಹಾಗೂ ಜೆಡಿಎಸ್ ಈ ಕೃತ್ಯ ನಡೆಸುತ್ತಿದೆ ಎಂದು ಆರೋಪಿಸಿದರು.
ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಿಥುನ್ ರೈ ಮಾತನಾಡಿ, ರಾಜ್ಯ ರಾಜಕಾರಣದಲ್ಲಿ ಪ್ರತಾಪಚಂದ್ರ ಶೆಟ್ಟಿಯವರನ್ನು ರಾಜೀನಾಮೆಗೆ ಮುಂದಾಗಿಸಿರುವ ಈ ಬೆಳವಣಿಗೆ ಕಂಡು ಕೇಳರಿಯದ ಘಟನೆಗೆ ಸಾಕ್ಷಿಯಾಗುತ್ತಿದೆ. ಇದು ಬಂಟ ಸಮುದಾಯಕ್ಕೆ ಮಾಡಲಾಗುತ್ತಿರುವ ವಿಶ್ವಾಸದ್ರೋಹ ಎಂದರು.
ಗೋಷ್ಠಿಯಲ್ಲಿ ಮನಪಾ ಸದಸ್ಯ ಪ್ರವೀಣ್ ಚಂದ್ರ ಆಳ್ವ ಉಸ್ಥಿತರಿದ್ದರು.
Bjp and Jds are trying to Dismiss Prathachandra Shetty from the Position of Speaker says Abhayachandra Jain and Mithun Rai at a press meet held at Mangalore.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm