ಬ್ರೇಕಿಂಗ್ ನ್ಯೂಸ್
02-02-21 06:15 pm Mangalore Correspondent ಕರಾವಳಿ
ಮಂಗಳೂರು, ಫೆ.2 : ಮೂರು ಬಾರಿ ಶಾಸಕರಾಗಿದ್ದು, ಯಾವುದೇ ಕಪ್ಪು ಚುಕ್ಕೆ ಇಲ್ಲದ ಸಜ್ಜನ ರಾಜಕಾರಣಿಯಾಗಿರುವ ಕರಾವಳಿಯ ಪ್ರಬಲ ಬಂಟ ಸಮುದಾಯದ ಪ್ರತಾಪಚಂದ್ರ ಶೆಟ್ಟಿಯವರನ್ನು ಬಿಜೆಪಿ ಹಾಗೂ ಜೆಡಿಎಸ್ ಒಳ ಒಪ್ಪಂದ ಮಾಡಿಕೊಂಡು ಸಭಾಪತಿ ಸ್ಥಾನದಿಂದ ಇಳಿಸಲು ಪಿತೂರಿ ಮಾಡಿದೆ. ಅವರನ್ನು ಬಲವಂತವಾಗಿ ರಾಜೀನಾಮೆ ಪಡೆಯಲು ಯತ್ನಿಸುತ್ತಿರುವ ಬೆಳವಣಿಗೆ ಕರಾವಳಿಯ ಜಿಲ್ಲೆಗೆ ಹಾಗೂ ಬಂಟ ಸಮುದಾಯಕ್ಕೆ ಮಾಡುತ್ತಿರುವ ಅವಮಾನ ಎಂದು ಮಾಜಿ ಸಚಿವ ಅಭಯ ಚಂದ್ರ ಜೈನ್ ಆರೋಪಿಸಿದ್ದಾರೆ.
ಮಂಗಳೂರಿನ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ರಾಜಕಾರಣದ ಇತಿಹಾಸದಲ್ಲಿ ಯಾವುದೇ ಪಕ್ಷ ಅಧಿಕಾರದಲ್ಲಿದ್ದರೂ ಸಭಾಪತಿಯ ಅಧಿಕಾರಾವಧಿ ಮುಗಿಯದೆ ಅವರನ್ನು ರಾಜೀನಾಮೆ ಕೊಡಿಸುವ ಅಥವಾ ಕೆಳಗಿಳಿಸುವ ಪ್ರಯತ್ನ ನಡೆದಿಲ್ಲ. ಆದರೆ ಬಿಜೆಪಿ ಮತ್ತು ಜೆಡಿಎಸ್ ಆ ಕೆಲಸವನ್ನು ಮಾಡುತ್ತಿದೆ ಎಂದು ಅವರು ಹೇಳಿದರು.

ಪ್ರತಾಪಚಂದ್ರ ಶೆಟ್ಟಿ ಶ್ರೀಮಂತ ಕುಟಂಬದವರಾಗಿದ್ದು, ವಿಜಯ ಬ್ಯಾಂಕ್ ಅಧಿಕಾರಿಯಾಗಿದ್ದಾಗ ರಾಜಕೀಯ ಸೇವೆಯ ಉದ್ದೇಶದಿಂದ ಕೆಲಸ ತೊರೆದವರು. ಮೂರು ಬಾರಿ ಶಾಸಕರಾಗಿ ಜನಸೇವೆ ಸಲ್ಲಿಸಿದ್ದರೂ ಮಂತ್ರಿಗಿರಿಗಾಗಿ ಹಾತೊರೆದವರಲ್ಲ. ಭ್ರಷ್ಟಾಚಾರ ರಹಿತ ಹೆಮ್ಮೆಯ ರಾಜಕಾರಣಿಗೆ ಈ ರೀತಿ ಅವಮಾನ ಮಾಡುತ್ತಿರುವುದನ್ನು ಕಂಡು ಬೇಸರವಾಗುತ್ತಿದೆ. ಅಧಿಕಾರ ದಾಹದಿಂದ ಬಿಜೆಪಿ ಹಾಗೂ ಜೆಡಿಎಸ್ ಈ ಕೃತ್ಯ ನಡೆಸುತ್ತಿದೆ ಎಂದು ಆರೋಪಿಸಿದರು.
ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಿಥುನ್ ರೈ ಮಾತನಾಡಿ, ರಾಜ್ಯ ರಾಜಕಾರಣದಲ್ಲಿ ಪ್ರತಾಪಚಂದ್ರ ಶೆಟ್ಟಿಯವರನ್ನು ರಾಜೀನಾಮೆಗೆ ಮುಂದಾಗಿಸಿರುವ ಈ ಬೆಳವಣಿಗೆ ಕಂಡು ಕೇಳರಿಯದ ಘಟನೆಗೆ ಸಾಕ್ಷಿಯಾಗುತ್ತಿದೆ. ಇದು ಬಂಟ ಸಮುದಾಯಕ್ಕೆ ಮಾಡಲಾಗುತ್ತಿರುವ ವಿಶ್ವಾಸದ್ರೋಹ ಎಂದರು.
ಗೋಷ್ಠಿಯಲ್ಲಿ ಮನಪಾ ಸದಸ್ಯ ಪ್ರವೀಣ್ ಚಂದ್ರ ಆಳ್ವ ಉಸ್ಥಿತರಿದ್ದರು.
Bjp and Jds are trying to Dismiss Prathachandra Shetty from the Position of Speaker says Abhayachandra Jain and Mithun Rai at a press meet held at Mangalore.
07-12-25 10:21 pm
HK News Desk
Dog Attack: ಪಾದಚಾರಿಗಳ ಮೇಲೆ ಹುಚ್ಚುನಾಯಿ ದಾಳಿ ;...
07-12-25 10:17 pm
Dog Attack, Davangere: ಮಹಿಳೆ ಮೇಲೆ ರಾಟ್ ವೀಲರ್...
06-12-25 12:33 pm
Dharwad Accident, Police Inspector: ಧಾರವಾಡ; ಡ...
05-12-25 11:20 pm
Shivamogga Doctor Suicide: ಶಿವಮೊಗ್ಗ ; ಮೂರು ವರ...
05-12-25 10:00 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
07-12-25 10:45 pm
Udupi Correspondent
Inayat Ali, Mangalore Notice: ನ್ಯಾಶನಲ್ ಹೆರಾಲ್...
07-12-25 03:02 pm
ತಡರಾತ್ರಿ ಮನೆಗೆ ನುಗ್ಗಿ ಕಡಬ ಹೆಡ್ ಕಾನ್ಸ್ ಟೇಬಲ್ ದ...
06-12-25 06:12 pm
Kantara, Mangalore, Rishab Shetty; ಕಾಂತಾರ -1ರ...
05-12-25 12:24 pm
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm