ಬ್ರೇಕಿಂಗ್ ನ್ಯೂಸ್
03-02-21 12:53 pm Mangalore Correspondent ಕರಾವಳಿ
ಮಂಗಳೂರು, ಫೆ.3 : ನಗರದ ಪಡೀಲ್ ಸಮೀಪದ ಅಡ್ಯಾರ್ ಎಂಬ ಊರಿನ ಮೂಲ ಹೆಸರು ಅಡಿಯಾರ ಎಂಬುದಾಗಿತ್ತು. ಹಿಂದಿನ ಕಾಲದಲ್ಲಿ ಅತ್ಯಂತ ಫಲವತ್ತಾದ ಭೂಮಿಯಾಗಿತ್ತು ಎನ್ನುವ ಅಂಶ ಅಲ್ಲಿ ಪತ್ತೆಯಾದ ಶಾಸನವೊಂದರಿಂದ ತಿಳಿದುಬಂದಿದೆ.
ಅಡ್ಯಾರ್ ಗ್ರಾಮದ ಸೋಮನಾಥ ಕಟ್ಟೆ ಎಂಬ ಸ್ಥಳದಲ್ಲಿ ಆಳುಪ ದೊರೆ ಮೂರನೇ ಕುಲಶೇಖರನಿಗೆ ಸೇರಿದ್ದು ಎನ್ನಲಾದ ಶಾಸನ ಕಲ್ಲನ್ನು ಸ್ಥಳೀಯ ಯುವಕರು ಪತ್ತೆ ಮಾಡಿದ್ದಾರೆ. ಸಂಶೋಧನಾರ್ಥಿ
ಶ್ರುತೇಶ್ ಆಚಾರ್ಯ ಮೂಡುಬೆಳ್ಳೆ ಅವರು ಈ ಶಾಸನವನ್ನು ಓದಿ, ಹಿಂದೆ ಮಂಗಳೂರು ರಾಜ್ಯವನ್ನು ಆಳುತ್ತಿದ್ದ ಆಳುಪ ರಾಜ ಕುಲಶೇಖರನ ಕಾಲದಲ್ಲಿ ಆಗಿರುವ ಶಾಸನ ಎಂದು ಹೇಳಿದ್ದಾರೆ. ಮಣ್ಣಿನಲ್ಲಿ ಹುದುಗಿ ಹೋಗಿದ್ದ ಶಾಸನವನ್ನು ಸ್ಥಳೀಯ ಯುವಕರು ಮತ್ತು ಸಾಮಾಜಿಕ ಕಾರ್ಯಕರ್ತ ಗಣೇಶ್ ರಾಜ್ ಸರಳಬೆಟ್ಟು ಸಹಕಾರದಿಂದ ಮಣ್ಣಿನಿಂದ ಹೊರತೆಗೆದು ನೇರವಾಗಿ ನಿಲ್ಲಿಸಲಾಗಿದೆ.

ನಾಲ್ಕು ಅಡಿ ಎತ್ತರ ಮತ್ತು ಎರಡು ಅಡಿ ಅಗಲ ಇದ್ದು ಗ್ರಾನೈಟ್ ಶಿಲೆಯಲ್ಲಿ ಕೆತ್ತಲಾದ ಶಾಸನ ಕಲ್ಲಿನಲ್ಲಿ ಅಚ್ಚ ಕನ್ನಡ ಲಿಪಿಯಲ್ಲಿ ಬರೆಯಲಾಗಿದೆ. ಶಾಸನವು 19 ಸಾಲುಗಳನ್ನು ಹೊಂದಿದ್ದು , ಆ ಕಾಲದಲ್ಲಿ ಕನ್ನಡ ಲಿಪಿ ಮತ್ತು ಕನ್ನಡ ಭಾಷೆ ಪ್ರಚಲಿತದಲ್ಲಿತ್ತು ಎಂಬುದನ್ನು ಸೂಚಿಸುತ್ತದೆ.

ಶಾಸನದಲ್ಲಿ ಮೂರನೇ ಕುಲಶೇಖರನನ್ನು ಶ್ರೀ ಮತ್ಸ್ಯಾಂಡ್ಯ ಚಕ್ರವರ್ತಿರಾಯ ಗಜಾಂಕುಶ ವೀರ ಕುಲಶೇಖರ ಎಂದು ಸಂಭೋದಿಸಲಾಗಿದೆ. ಶಾಸನದಲ್ಲಿ ಸಾಧಾರಣ ಸಂವತ್ಸರದ ಧನು ಮಾಸ ೨ ನೆಯ ಆದಿತ್ಯವಾರ ಎಂಬುದಾಗಿ ಕಾಲಮಾನದ ಉಲ್ಲೇಖವನ್ನು ಮಾಡಲಾಗಿದೆ. ವೀರ ಕುಲಶೇಖರ ಮಂಗಳೂರ ರಾಜ್ಯವನ್ನು ಆಳುತ್ತಿದ್ದ ಸಂದರ್ಭದಲ್ಲಿ ಅಡಿಯಾರ ಪ್ರದೇಶದ ಬೆದೆಕಾರು (ಮಳೆಗಾಲದಲ್ಲಿ ಬೆಳೆಯುವ ತರಿ ಭೂಮಿ) ಭೂಮಿಗಳನ್ನು ದಾನ ಕೊಟ್ಟಿರುವ ಉಲ್ಲೇಖವನ್ನು ಈ ಶಾಸನದಲ್ಲಿ ಮಾಡಲಾಗಿದೆ. ಶಾಸನದ ಕೊನೆಯಲ್ಲಿ ಈ ಶಾಸನವನ್ನು ಯಾರು ಹಾಳು ಮಾಡುವರೋ ಅವರು ಗಂಗೆ ಮತ್ತು ವಾರಣಾಸಿಯಲ್ಲಿ ಸಹಸ್ರ ಗೋವುಗಳನ್ನು ಕೊಂದ ದೋಷಕ್ಕೆ ಹೋಗುವರು ಎಂಬ ಶಾಪ ವಾಕ್ಯವನ್ನು ಬರೆಯಲಾಗಿದೆ. ಈ ದಾನವನ್ನು ಗುರುವಣಪ್ಪ ಒಡೆಯನು ಮಾಡಿದ ಎಂಬುದನ್ನು ಶಾಸನದಲ್ಲಿ ತಿಳಿಸಲಾಗಿದೆ.

ಮುಖ್ಯವಾಗಿ ಶಾಸನದಲ್ಲಿ ಉಲ್ಲೇಖಗೊಂಡ ಅಡಿಯಾರ ಎಂಬ ಹೆಸರಿನ ಊರು ಪ್ರಸ್ತುತ ಚಾಲ್ತಿಯಲ್ಲಿರುವ ಅಡ್ಯಾರ್ ಆಗಿರುವ ಸಾಧ್ಯತೆಯಿದೆ. ಅಲ್ಲದೆ, ಅಡ್ಯಾರ್ ಹೆಸರಿನ ಪೂರ್ವದ ಹೆಸರಾಗಿರಬಹುದು ಎಂದು ಸಂಶೋಧನಾರ್ಥಿ ಶ್ರುತೇಶ್ ಆಚಾರ್ಯ ಮೂಡುಬೆಳ್ಳೆ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಬುಧವಾರ ಬೆಳಗ್ಗೆ ಕ್ಷೇತ್ರಕಾರ್ಯ ಶೋಧನೆ ಕೆಲಸ ನಡೆದಿದ್ದು ಈ ಸಂದರ್ಭದಲ್ಲಿ ವಿಶ್ವಾಸ್, ವಿನೀತ್, ರಿಖಿಲ್, ಪ್ರಸನ್ನ, ರತನ್, ಸುಜಿತ್, ಸುರೇಶ್ ಶೆಟ್ಟಿ ಅವರು ಸಹಕಾರ ನೀಡಿದ್ದರು.
Historic Monument Stone of Veera Kulashekara found at Adyar in Mangalore. A large crowd has gathered to see the Historic Stone.
05-03-26 09:40 pm
HK News Staffer
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
05-03-26 08:51 pm
HK News Staffer
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
05-03-26 07:38 pm
HK News Staffer
ಸಾಕ್ಷಿಗಳು ಬರ್ತಾರೆ, ಹೋಗ್ತಾರೆ.. ಧರ್ಮಸ್ಥಳದಲ್ಲಿ ಹ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm