ಬ್ರೇಕಿಂಗ್ ನ್ಯೂಸ್
03-02-21 05:08 pm Mangalore Correspondent ಕರಾವಳಿ
ಮಂಗಳೂರು, ಫೆ.3: ಕನ್ನಡ ಕಿರುತೆರೆ ಮತ್ತು ತುಳು ಸಿನಿಮಾಗಳಲ್ಲಿ ನಟಿಸುತ್ತಿರುವ ಶೋಭರಾಜ್ ಪಾವೂರು ವಿರುದ್ಧ ಮೋದಿ ಅಭಿಮಾನಿಗಳು ಮುಗಿಬಿದ್ದಿದ್ದಾರೆ. ಪೆಟ್ರೋಲ್ ದರ ವಿಪರೀತ ಏರಿಕೆಯಾಗಿರುವ ಬಗ್ಗೆ ಶೋಭರಾಜ್ ಫೇಸ್ಬುಕ್ ನಲ್ಲಿ ಮಾಡಿದ್ದ ಪೋಸ್ಟಿಗೆ ವಿರುದ್ಧವಾಗಿ ಮೋದಿ ಅಭಿಮಾನಿಗಳು ಬೆದರಿಕೆ, ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಮೋ, ನಮಗೆ ಮೋಸ, ಪೆಟ್ರೋಲ್ ಧಗ ಧಗ ಎಂದು ಶೋಭರಾಜ್ ಫೇಸ್ಬುಕ್ ನಲ್ಲಿ ಪೋಸ್ಟ್ ಮಾಡಿ, ಬಜೆಟ್ ನಲ್ಲಿ ಮತ್ತೆ ತೈಲ ದರದ ಮೇಲೆ ಸೆಸ್ ವಿಧಿಸಿರುವುದನ್ನು ವಿರೋಧಿಸಿದ್ದರು. ಈ ಬಗ್ಗೆ ಕರಾವಳಿಯ ಮೋದಿ ಅಭಿಮಾನಿಗಳು ಮೈಪರಚಿಕೊಂಡವರ ರೀತಿ ವರ್ತಿಸಿದ್ದಾರೆ.

ಆಕ್ರೋಶ ಕೇಳಿಬರುತ್ತಿದ್ದಂತೆ, ತನ್ನ ಹಳೆಯ ಪೋಸ್ಟನ್ನು ಡಿಲೀಟ್ ಮಾಡಿದ್ದ ಶೋಭರಾಜ್ ತುಳುವಿನಲ್ಲಿ ಮತ್ತೆ ಪೋಸ್ಟ್ ಮಾಡಿದ್ದರು. ನಾನು ನನ್ನ ಅಭಿಪ್ರಾಯವನ್ನು ಹೇಳಿದ್ದೇನೆ. ಅಷ್ಟಕ್ಕೂ ನನ್ನ ಪೋಸ್ಟ್ ನಿಂದ ತಪ್ಪಾಗಿದ್ದರೆ ಕ್ಷಮಿಸಿ ಎಂದಿದ್ದಾರೆ. ಆದರೆ, ಮೋದಿ ಅಭಿಮಾನಿಗಳ ಆಕ್ರೋಶ ಕಡಿಮೆಯಾಗಿಲ್ಲ. ಕೆಲವರು ನೇರವಾಗಿ ನೋಡಿಕೊಳ್ಳುತ್ತೇವೆಂದು ಬೆದರಿಕೆ ಹಾಕಿದರೆ, ಇನ್ನು ಕೆಲವರು ನಿನ್ನ ಸಿನಿಮಾ ಏನಾಗುತ್ತದೆ ನೋಡುತ್ತಿರು ಅಂತ ಟೀಕೆ ಮಾಡಿದ್ದಾರೆ. ಮತ್ತೆ ಕೆಲವರು ವ್ಯಂಗ್ಯವಾಗಿ ಅಣಕಿಸಿಯೂ ಟೀಕೆ ಮಾಡಿದ್ದಾರೆ.

ಇವೆಲ್ಲ ಆಕ್ರೋಶ ಕೇಳಿಬಂದ ಬಳಿಕ ಶೋಭರಾಜ್ ಫೇಸ್ಬುಕ್ ನಲ್ಲಿ ತಣ್ಣಗಾಗಿದ್ದಾರೆ. ಮಂಗಳೂರು ಮೂಲದ ಪ್ರತಿಭಾವಂತ ನಟನಾಗಿರುವ ಶೋಭರಾಜ್, ಕನ್ನಡ ಕಿರುತೆರೆಯಲ್ಲಿ ಮಿಂಚುತ್ತಿದ್ದಾರೆ. ಜೊತೆಗೆ ತುಳು ಚಿತ್ರಗಳಲ್ಲಿಯೂ ನಟಿಸುತ್ತಿದ್ದಾರೆ. ಹುಬ್ಲಿ ಹುಡ್ಗ , ಮಂಗಳೂರು ಹುಡ್ಗಿ ಧಾರಾವಾಹಿಯಲ್ಲಿ ಹುಡುಗಿಯ ತಂದೆಯ ಪಾತ್ರ ಶೋಭರಾಜ್ ಗೆ ಖ್ಯಾತಿ ತಂದುಕೊಟ್ಟಿತ್ತು.
Mangalore Tulu Actor and Director Shobraj Pavoor Lands into Controversy after his post on Fuel Prices and PM Modi turns into Controversy.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
29-04-26 11:10 pm
HK News Staffer
ಬೆಂಗಳೂರಿನಲ್ಲಿ ದಿಢೀರ್ ಮಳೆ ಆರ್ಭಟ ; ಬೌರಿಂಗ್ ಆಸ್ಪ...
29-04-26 08:12 pm
ಆಧಾರ್ ಹಿಡಿದು ಹೋದವರು 8 ತಿಂಗಳಾದರೂ ಸಿಗದ ಸುಳಿವು ;...
29-04-26 07:54 pm
ತ್ರಾಸಿ ಬೀಚ್ ಬಳಿ ಭೀಕರ ಅಪಘಾತ ; ಶಿವಮೊಗ್ಗದ ಪ್ರವಾಸ...
29-04-26 03:50 pm
ಪಹಲ್ಗಾಮ್ ಮಾದರಿಯಲ್ಲೇ ಮುಂಬೈನಲ್ಲಿ ದಾಳಿ ; ಕಲ್ಮಾ ಪ...
29-04-26 02:46 pm