ಬ್ರೇಕಿಂಗ್ ನ್ಯೂಸ್
03-02-21 05:08 pm Mangalore Correspondent ಕರಾವಳಿ
ಮಂಗಳೂರು, ಫೆ.3: ಕನ್ನಡ ಕಿರುತೆರೆ ಮತ್ತು ತುಳು ಸಿನಿಮಾಗಳಲ್ಲಿ ನಟಿಸುತ್ತಿರುವ ಶೋಭರಾಜ್ ಪಾವೂರು ವಿರುದ್ಧ ಮೋದಿ ಅಭಿಮಾನಿಗಳು ಮುಗಿಬಿದ್ದಿದ್ದಾರೆ. ಪೆಟ್ರೋಲ್ ದರ ವಿಪರೀತ ಏರಿಕೆಯಾಗಿರುವ ಬಗ್ಗೆ ಶೋಭರಾಜ್ ಫೇಸ್ಬುಕ್ ನಲ್ಲಿ ಮಾಡಿದ್ದ ಪೋಸ್ಟಿಗೆ ವಿರುದ್ಧವಾಗಿ ಮೋದಿ ಅಭಿಮಾನಿಗಳು ಬೆದರಿಕೆ, ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಮೋ, ನಮಗೆ ಮೋಸ, ಪೆಟ್ರೋಲ್ ಧಗ ಧಗ ಎಂದು ಶೋಭರಾಜ್ ಫೇಸ್ಬುಕ್ ನಲ್ಲಿ ಪೋಸ್ಟ್ ಮಾಡಿ, ಬಜೆಟ್ ನಲ್ಲಿ ಮತ್ತೆ ತೈಲ ದರದ ಮೇಲೆ ಸೆಸ್ ವಿಧಿಸಿರುವುದನ್ನು ವಿರೋಧಿಸಿದ್ದರು. ಈ ಬಗ್ಗೆ ಕರಾವಳಿಯ ಮೋದಿ ಅಭಿಮಾನಿಗಳು ಮೈಪರಚಿಕೊಂಡವರ ರೀತಿ ವರ್ತಿಸಿದ್ದಾರೆ.

ಆಕ್ರೋಶ ಕೇಳಿಬರುತ್ತಿದ್ದಂತೆ, ತನ್ನ ಹಳೆಯ ಪೋಸ್ಟನ್ನು ಡಿಲೀಟ್ ಮಾಡಿದ್ದ ಶೋಭರಾಜ್ ತುಳುವಿನಲ್ಲಿ ಮತ್ತೆ ಪೋಸ್ಟ್ ಮಾಡಿದ್ದರು. ನಾನು ನನ್ನ ಅಭಿಪ್ರಾಯವನ್ನು ಹೇಳಿದ್ದೇನೆ. ಅಷ್ಟಕ್ಕೂ ನನ್ನ ಪೋಸ್ಟ್ ನಿಂದ ತಪ್ಪಾಗಿದ್ದರೆ ಕ್ಷಮಿಸಿ ಎಂದಿದ್ದಾರೆ. ಆದರೆ, ಮೋದಿ ಅಭಿಮಾನಿಗಳ ಆಕ್ರೋಶ ಕಡಿಮೆಯಾಗಿಲ್ಲ. ಕೆಲವರು ನೇರವಾಗಿ ನೋಡಿಕೊಳ್ಳುತ್ತೇವೆಂದು ಬೆದರಿಕೆ ಹಾಕಿದರೆ, ಇನ್ನು ಕೆಲವರು ನಿನ್ನ ಸಿನಿಮಾ ಏನಾಗುತ್ತದೆ ನೋಡುತ್ತಿರು ಅಂತ ಟೀಕೆ ಮಾಡಿದ್ದಾರೆ. ಮತ್ತೆ ಕೆಲವರು ವ್ಯಂಗ್ಯವಾಗಿ ಅಣಕಿಸಿಯೂ ಟೀಕೆ ಮಾಡಿದ್ದಾರೆ.

ಇವೆಲ್ಲ ಆಕ್ರೋಶ ಕೇಳಿಬಂದ ಬಳಿಕ ಶೋಭರಾಜ್ ಫೇಸ್ಬುಕ್ ನಲ್ಲಿ ತಣ್ಣಗಾಗಿದ್ದಾರೆ. ಮಂಗಳೂರು ಮೂಲದ ಪ್ರತಿಭಾವಂತ ನಟನಾಗಿರುವ ಶೋಭರಾಜ್, ಕನ್ನಡ ಕಿರುತೆರೆಯಲ್ಲಿ ಮಿಂಚುತ್ತಿದ್ದಾರೆ. ಜೊತೆಗೆ ತುಳು ಚಿತ್ರಗಳಲ್ಲಿಯೂ ನಟಿಸುತ್ತಿದ್ದಾರೆ. ಹುಬ್ಲಿ ಹುಡ್ಗ , ಮಂಗಳೂರು ಹುಡ್ಗಿ ಧಾರಾವಾಹಿಯಲ್ಲಿ ಹುಡುಗಿಯ ತಂದೆಯ ಪಾತ್ರ ಶೋಭರಾಜ್ ಗೆ ಖ್ಯಾತಿ ತಂದುಕೊಟ್ಟಿತ್ತು.
Mangalore Tulu Actor and Director Shobraj Pavoor Lands into Controversy after his post on Fuel Prices and PM Modi turns into Controversy.
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
28-10-25 08:36 pm
Mangalore Correspondent
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
28-10-25 10:48 pm
Mangalore Correspondent
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm