ಬ್ರೇಕಿಂಗ್ ನ್ಯೂಸ್
03-02-21 05:08 pm Mangalore Correspondent ಕರಾವಳಿ
ಮಂಗಳೂರು, ಫೆ.3: ಕನ್ನಡ ಕಿರುತೆರೆ ಮತ್ತು ತುಳು ಸಿನಿಮಾಗಳಲ್ಲಿ ನಟಿಸುತ್ತಿರುವ ಶೋಭರಾಜ್ ಪಾವೂರು ವಿರುದ್ಧ ಮೋದಿ ಅಭಿಮಾನಿಗಳು ಮುಗಿಬಿದ್ದಿದ್ದಾರೆ. ಪೆಟ್ರೋಲ್ ದರ ವಿಪರೀತ ಏರಿಕೆಯಾಗಿರುವ ಬಗ್ಗೆ ಶೋಭರಾಜ್ ಫೇಸ್ಬುಕ್ ನಲ್ಲಿ ಮಾಡಿದ್ದ ಪೋಸ್ಟಿಗೆ ವಿರುದ್ಧವಾಗಿ ಮೋದಿ ಅಭಿಮಾನಿಗಳು ಬೆದರಿಕೆ, ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಮೋ, ನಮಗೆ ಮೋಸ, ಪೆಟ್ರೋಲ್ ಧಗ ಧಗ ಎಂದು ಶೋಭರಾಜ್ ಫೇಸ್ಬುಕ್ ನಲ್ಲಿ ಪೋಸ್ಟ್ ಮಾಡಿ, ಬಜೆಟ್ ನಲ್ಲಿ ಮತ್ತೆ ತೈಲ ದರದ ಮೇಲೆ ಸೆಸ್ ವಿಧಿಸಿರುವುದನ್ನು ವಿರೋಧಿಸಿದ್ದರು. ಈ ಬಗ್ಗೆ ಕರಾವಳಿಯ ಮೋದಿ ಅಭಿಮಾನಿಗಳು ಮೈಪರಚಿಕೊಂಡವರ ರೀತಿ ವರ್ತಿಸಿದ್ದಾರೆ.

ಆಕ್ರೋಶ ಕೇಳಿಬರುತ್ತಿದ್ದಂತೆ, ತನ್ನ ಹಳೆಯ ಪೋಸ್ಟನ್ನು ಡಿಲೀಟ್ ಮಾಡಿದ್ದ ಶೋಭರಾಜ್ ತುಳುವಿನಲ್ಲಿ ಮತ್ತೆ ಪೋಸ್ಟ್ ಮಾಡಿದ್ದರು. ನಾನು ನನ್ನ ಅಭಿಪ್ರಾಯವನ್ನು ಹೇಳಿದ್ದೇನೆ. ಅಷ್ಟಕ್ಕೂ ನನ್ನ ಪೋಸ್ಟ್ ನಿಂದ ತಪ್ಪಾಗಿದ್ದರೆ ಕ್ಷಮಿಸಿ ಎಂದಿದ್ದಾರೆ. ಆದರೆ, ಮೋದಿ ಅಭಿಮಾನಿಗಳ ಆಕ್ರೋಶ ಕಡಿಮೆಯಾಗಿಲ್ಲ. ಕೆಲವರು ನೇರವಾಗಿ ನೋಡಿಕೊಳ್ಳುತ್ತೇವೆಂದು ಬೆದರಿಕೆ ಹಾಕಿದರೆ, ಇನ್ನು ಕೆಲವರು ನಿನ್ನ ಸಿನಿಮಾ ಏನಾಗುತ್ತದೆ ನೋಡುತ್ತಿರು ಅಂತ ಟೀಕೆ ಮಾಡಿದ್ದಾರೆ. ಮತ್ತೆ ಕೆಲವರು ವ್ಯಂಗ್ಯವಾಗಿ ಅಣಕಿಸಿಯೂ ಟೀಕೆ ಮಾಡಿದ್ದಾರೆ.

ಇವೆಲ್ಲ ಆಕ್ರೋಶ ಕೇಳಿಬಂದ ಬಳಿಕ ಶೋಭರಾಜ್ ಫೇಸ್ಬುಕ್ ನಲ್ಲಿ ತಣ್ಣಗಾಗಿದ್ದಾರೆ. ಮಂಗಳೂರು ಮೂಲದ ಪ್ರತಿಭಾವಂತ ನಟನಾಗಿರುವ ಶೋಭರಾಜ್, ಕನ್ನಡ ಕಿರುತೆರೆಯಲ್ಲಿ ಮಿಂಚುತ್ತಿದ್ದಾರೆ. ಜೊತೆಗೆ ತುಳು ಚಿತ್ರಗಳಲ್ಲಿಯೂ ನಟಿಸುತ್ತಿದ್ದಾರೆ. ಹುಬ್ಲಿ ಹುಡ್ಗ , ಮಂಗಳೂರು ಹುಡ್ಗಿ ಧಾರಾವಾಹಿಯಲ್ಲಿ ಹುಡುಗಿಯ ತಂದೆಯ ಪಾತ್ರ ಶೋಭರಾಜ್ ಗೆ ಖ್ಯಾತಿ ತಂದುಕೊಟ್ಟಿತ್ತು.
Mangalore Tulu Actor and Director Shobraj Pavoor Lands into Controversy after his post on Fuel Prices and PM Modi turns into Controversy.
07-04-26 03:51 pm
HK News Staffer
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
07-04-26 11:45 am
HK News Staffer
ಟ್ರಂಪ್ ವಾರ್ನಿಂಗ್ ಗೆ ಇರಾನ್ ಟಕ್ಕರ್ ; ವಿದ್ಯುತ್ ಸ...
07-04-26 11:42 am
ಟ್ರಂಪ್ 8pm ಘೋರ ಎಚ್ಚರಿಕೆಗೆ ಇರಾನ್ ತಿರುಗೇಟು ; ನ...
06-04-26 06:16 pm
ಗಲ್ಫ್ ಯುದ್ಧ ಎಫೆಕ್ಟ್ ; ಇಸ್ರೇಲ್ ಗೆ ಏರ್ ಇಂಡಿಯಾ ವ...
06-04-26 06:09 pm
ಯುಎಇಯಿಂದ ಪಾಕಿಸ್ತಾನಕ್ಕೆ ಬಿಗ್ ಶಾಕ್ ; 2 ಬಿಲಿಯನ್...
05-04-26 12:37 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
07-04-26 04:04 pm
HK News Staffer
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm
ಆತ್ಮಹತ್ಯೆ ಮಾಡಿಕೊಂಡ ಪತ್ನಿಯನ್ನು ನೋಡಲು ಆಸ್ಪತ್ರೆಗ...
06-04-26 02:34 pm
ಹಂದಿ ಬೇಟೆಗಾಗಿ ತೋಟದಲ್ಲಿ ಇಟ್ಟಿದ್ದ ನಾಡಬಾಂಬ್ ಸ್ಫೋ...
05-04-26 11:03 am