ಬ್ರೇಕಿಂಗ್ ನ್ಯೂಸ್
03-02-21 05:08 pm Mangalore Correspondent ಕರಾವಳಿ
ಮಂಗಳೂರು, ಫೆ.3: ಕನ್ನಡ ಕಿರುತೆರೆ ಮತ್ತು ತುಳು ಸಿನಿಮಾಗಳಲ್ಲಿ ನಟಿಸುತ್ತಿರುವ ಶೋಭರಾಜ್ ಪಾವೂರು ವಿರುದ್ಧ ಮೋದಿ ಅಭಿಮಾನಿಗಳು ಮುಗಿಬಿದ್ದಿದ್ದಾರೆ. ಪೆಟ್ರೋಲ್ ದರ ವಿಪರೀತ ಏರಿಕೆಯಾಗಿರುವ ಬಗ್ಗೆ ಶೋಭರಾಜ್ ಫೇಸ್ಬುಕ್ ನಲ್ಲಿ ಮಾಡಿದ್ದ ಪೋಸ್ಟಿಗೆ ವಿರುದ್ಧವಾಗಿ ಮೋದಿ ಅಭಿಮಾನಿಗಳು ಬೆದರಿಕೆ, ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಮೋ, ನಮಗೆ ಮೋಸ, ಪೆಟ್ರೋಲ್ ಧಗ ಧಗ ಎಂದು ಶೋಭರಾಜ್ ಫೇಸ್ಬುಕ್ ನಲ್ಲಿ ಪೋಸ್ಟ್ ಮಾಡಿ, ಬಜೆಟ್ ನಲ್ಲಿ ಮತ್ತೆ ತೈಲ ದರದ ಮೇಲೆ ಸೆಸ್ ವಿಧಿಸಿರುವುದನ್ನು ವಿರೋಧಿಸಿದ್ದರು. ಈ ಬಗ್ಗೆ ಕರಾವಳಿಯ ಮೋದಿ ಅಭಿಮಾನಿಗಳು ಮೈಪರಚಿಕೊಂಡವರ ರೀತಿ ವರ್ತಿಸಿದ್ದಾರೆ.
ಆಕ್ರೋಶ ಕೇಳಿಬರುತ್ತಿದ್ದಂತೆ, ತನ್ನ ಹಳೆಯ ಪೋಸ್ಟನ್ನು ಡಿಲೀಟ್ ಮಾಡಿದ್ದ ಶೋಭರಾಜ್ ತುಳುವಿನಲ್ಲಿ ಮತ್ತೆ ಪೋಸ್ಟ್ ಮಾಡಿದ್ದರು. ನಾನು ನನ್ನ ಅಭಿಪ್ರಾಯವನ್ನು ಹೇಳಿದ್ದೇನೆ. ಅಷ್ಟಕ್ಕೂ ನನ್ನ ಪೋಸ್ಟ್ ನಿಂದ ತಪ್ಪಾಗಿದ್ದರೆ ಕ್ಷಮಿಸಿ ಎಂದಿದ್ದಾರೆ. ಆದರೆ, ಮೋದಿ ಅಭಿಮಾನಿಗಳ ಆಕ್ರೋಶ ಕಡಿಮೆಯಾಗಿಲ್ಲ. ಕೆಲವರು ನೇರವಾಗಿ ನೋಡಿಕೊಳ್ಳುತ್ತೇವೆಂದು ಬೆದರಿಕೆ ಹಾಕಿದರೆ, ಇನ್ನು ಕೆಲವರು ನಿನ್ನ ಸಿನಿಮಾ ಏನಾಗುತ್ತದೆ ನೋಡುತ್ತಿರು ಅಂತ ಟೀಕೆ ಮಾಡಿದ್ದಾರೆ. ಮತ್ತೆ ಕೆಲವರು ವ್ಯಂಗ್ಯವಾಗಿ ಅಣಕಿಸಿಯೂ ಟೀಕೆ ಮಾಡಿದ್ದಾರೆ.
ಇವೆಲ್ಲ ಆಕ್ರೋಶ ಕೇಳಿಬಂದ ಬಳಿಕ ಶೋಭರಾಜ್ ಫೇಸ್ಬುಕ್ ನಲ್ಲಿ ತಣ್ಣಗಾಗಿದ್ದಾರೆ. ಮಂಗಳೂರು ಮೂಲದ ಪ್ರತಿಭಾವಂತ ನಟನಾಗಿರುವ ಶೋಭರಾಜ್, ಕನ್ನಡ ಕಿರುತೆರೆಯಲ್ಲಿ ಮಿಂಚುತ್ತಿದ್ದಾರೆ. ಜೊತೆಗೆ ತುಳು ಚಿತ್ರಗಳಲ್ಲಿಯೂ ನಟಿಸುತ್ತಿದ್ದಾರೆ. ಹುಬ್ಲಿ ಹುಡ್ಗ , ಮಂಗಳೂರು ಹುಡ್ಗಿ ಧಾರಾವಾಹಿಯಲ್ಲಿ ಹುಡುಗಿಯ ತಂದೆಯ ಪಾತ್ರ ಶೋಭರಾಜ್ ಗೆ ಖ್ಯಾತಿ ತಂದುಕೊಟ್ಟಿತ್ತು.
Mangalore Tulu Actor and Director Shobraj Pavoor Lands into Controversy after his post on Fuel Prices and PM Modi turns into Controversy.
05-09-25 11:15 pm
Bangalore Correspondent
ಭೋವಿ ಅಭಿವೃದ್ಧಿ ನಿಗಮದಲ್ಲಿ ಕಮಿಷನ್ ವಸೂಲಿ ; ಅಧ್ಯಕ...
05-09-25 07:55 pm
ಡಿಸಿಎಂ ಡಿಕೆಶಿ ಬೆಂಬಲಿಗರ ಹತ್ತಾರು ಕೇಸು ಸೇರಿದಂತೆ...
05-09-25 05:40 pm
ಕಾಂಗ್ರೆಸಿನ ಯಾರ ಮನೆಯ ನಾಯಿ ಸ್ವಾತಂತ್ರ್ಯಕ್ಕಾಗಿ ಹೋ...
03-09-25 09:00 pm
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
04-09-25 08:47 pm
HK News Desk
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
05-09-25 08:12 pm
Mangalore Correspondent
ತಡರಾತ್ರಿ ಫಾಸ್ಟ್ ಫುಡ್ ಗೌಜಿ ಪ್ರಶ್ನಿಸಿದ್ದಕ್ಕೆ ಸಿ...
05-09-25 05:09 pm
ಸೌಜನ್ಯಾ ಕೊಲೆ ಪ್ರಕರಣವನ್ನು ಮುಚ್ಚಿ ಹಾಕಿದ್ದೇ ಆರ್....
04-09-25 11:07 pm
Dharmasthala, Sameer Md, House Raid: ಧರ್ಮಸ್ಥಳ...
04-09-25 10:29 pm
Brijesh Chowta, Mangalore: ಜಿಎಸ್ಟಿ ಹೊರೆ ಇಳಿಸಿ...
04-09-25 07:57 pm
05-09-25 10:53 pm
Mangalore Correspondent
Mukka Murder, Mangalore, Crime: ಪತ್ನಿಯ ಅಶ್ಲೀಲ...
05-09-25 10:26 pm
Atm robbery, Ullal, Kotekar, Mangalore: ಕೋಟೆಕ...
05-09-25 08:36 pm
16 ವರ್ಷಗಳ ಹಳೆ ಪ್ರಕರಣದಲ್ಲಿ ಶಿಕ್ಷೆ ; ಬ್ರಹ್ಮಾವರದ...
05-09-25 12:34 pm
ಹಟ್ಟಿಯಲ್ಲಿದ್ದ ಹಸುವನ್ನು ನಡುರಾತ್ರಿ ಎಳೆದೊಯ್ದು ರೈ...
05-09-25 11:43 am