ಬ್ರೇಕಿಂಗ್ ನ್ಯೂಸ್
03-02-21 05:08 pm Mangalore Correspondent ಕರಾವಳಿ
ಮಂಗಳೂರು, ಫೆ.3: ಕನ್ನಡ ಕಿರುತೆರೆ ಮತ್ತು ತುಳು ಸಿನಿಮಾಗಳಲ್ಲಿ ನಟಿಸುತ್ತಿರುವ ಶೋಭರಾಜ್ ಪಾವೂರು ವಿರುದ್ಧ ಮೋದಿ ಅಭಿಮಾನಿಗಳು ಮುಗಿಬಿದ್ದಿದ್ದಾರೆ. ಪೆಟ್ರೋಲ್ ದರ ವಿಪರೀತ ಏರಿಕೆಯಾಗಿರುವ ಬಗ್ಗೆ ಶೋಭರಾಜ್ ಫೇಸ್ಬುಕ್ ನಲ್ಲಿ ಮಾಡಿದ್ದ ಪೋಸ್ಟಿಗೆ ವಿರುದ್ಧವಾಗಿ ಮೋದಿ ಅಭಿಮಾನಿಗಳು ಬೆದರಿಕೆ, ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಮೋ, ನಮಗೆ ಮೋಸ, ಪೆಟ್ರೋಲ್ ಧಗ ಧಗ ಎಂದು ಶೋಭರಾಜ್ ಫೇಸ್ಬುಕ್ ನಲ್ಲಿ ಪೋಸ್ಟ್ ಮಾಡಿ, ಬಜೆಟ್ ನಲ್ಲಿ ಮತ್ತೆ ತೈಲ ದರದ ಮೇಲೆ ಸೆಸ್ ವಿಧಿಸಿರುವುದನ್ನು ವಿರೋಧಿಸಿದ್ದರು. ಈ ಬಗ್ಗೆ ಕರಾವಳಿಯ ಮೋದಿ ಅಭಿಮಾನಿಗಳು ಮೈಪರಚಿಕೊಂಡವರ ರೀತಿ ವರ್ತಿಸಿದ್ದಾರೆ.

ಆಕ್ರೋಶ ಕೇಳಿಬರುತ್ತಿದ್ದಂತೆ, ತನ್ನ ಹಳೆಯ ಪೋಸ್ಟನ್ನು ಡಿಲೀಟ್ ಮಾಡಿದ್ದ ಶೋಭರಾಜ್ ತುಳುವಿನಲ್ಲಿ ಮತ್ತೆ ಪೋಸ್ಟ್ ಮಾಡಿದ್ದರು. ನಾನು ನನ್ನ ಅಭಿಪ್ರಾಯವನ್ನು ಹೇಳಿದ್ದೇನೆ. ಅಷ್ಟಕ್ಕೂ ನನ್ನ ಪೋಸ್ಟ್ ನಿಂದ ತಪ್ಪಾಗಿದ್ದರೆ ಕ್ಷಮಿಸಿ ಎಂದಿದ್ದಾರೆ. ಆದರೆ, ಮೋದಿ ಅಭಿಮಾನಿಗಳ ಆಕ್ರೋಶ ಕಡಿಮೆಯಾಗಿಲ್ಲ. ಕೆಲವರು ನೇರವಾಗಿ ನೋಡಿಕೊಳ್ಳುತ್ತೇವೆಂದು ಬೆದರಿಕೆ ಹಾಕಿದರೆ, ಇನ್ನು ಕೆಲವರು ನಿನ್ನ ಸಿನಿಮಾ ಏನಾಗುತ್ತದೆ ನೋಡುತ್ತಿರು ಅಂತ ಟೀಕೆ ಮಾಡಿದ್ದಾರೆ. ಮತ್ತೆ ಕೆಲವರು ವ್ಯಂಗ್ಯವಾಗಿ ಅಣಕಿಸಿಯೂ ಟೀಕೆ ಮಾಡಿದ್ದಾರೆ.

ಇವೆಲ್ಲ ಆಕ್ರೋಶ ಕೇಳಿಬಂದ ಬಳಿಕ ಶೋಭರಾಜ್ ಫೇಸ್ಬುಕ್ ನಲ್ಲಿ ತಣ್ಣಗಾಗಿದ್ದಾರೆ. ಮಂಗಳೂರು ಮೂಲದ ಪ್ರತಿಭಾವಂತ ನಟನಾಗಿರುವ ಶೋಭರಾಜ್, ಕನ್ನಡ ಕಿರುತೆರೆಯಲ್ಲಿ ಮಿಂಚುತ್ತಿದ್ದಾರೆ. ಜೊತೆಗೆ ತುಳು ಚಿತ್ರಗಳಲ್ಲಿಯೂ ನಟಿಸುತ್ತಿದ್ದಾರೆ. ಹುಬ್ಲಿ ಹುಡ್ಗ , ಮಂಗಳೂರು ಹುಡ್ಗಿ ಧಾರಾವಾಹಿಯಲ್ಲಿ ಹುಡುಗಿಯ ತಂದೆಯ ಪಾತ್ರ ಶೋಭರಾಜ್ ಗೆ ಖ್ಯಾತಿ ತಂದುಕೊಟ್ಟಿತ್ತು.
Mangalore Tulu Actor and Director Shobraj Pavoor Lands into Controversy after his post on Fuel Prices and PM Modi turns into Controversy.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm