ಬ್ರೇಕಿಂಗ್ ನ್ಯೂಸ್
03-02-21 06:13 pm Mangalore Correspondent ಕರಾವಳಿ
ಸುಬ್ರಹ್ಮಣ್ಯ, ಫೆ.3: ಕೊನೆಗೂ ಅರಣ್ಯಾಧಿಕಾರಿಗಳ ಆಪರೇಶನ್ ಚಿರತೆ ಠುಸ್ಸಾಯ್ತು. ಬೆಳಗ್ಗಿನಿಂದ ಬೋನು, ಬಲೆ ಹಿಡಿದು ಕಾರ್ಯಾಚರಣೆ ಮಾಡಿದ್ದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿಯೇ ಚಿರತೆ ಪರಾರಿಯಾಗಿದೆ.
ಬೆಳಗ್ಗಿನಿಂದಲೇ ಅರಣ್ಯಾಧಿಕಾರಿಗಳು ಒಂದೆಡೆ ಬೋನು, ಮತ್ತೊಂದು ಕಡೆ ಬಲೆ ಹಿಡಿದು ಚಿರತೆಯನ್ನು ಹಿಡಿಯಲು ಹರಸಾಹಸ ಮಾಡಿದ್ದರು. ಚಿರತೆ ಇನ್ನೇನು ಕೈಗೆ ಸಿಕ್ಕೇಬಿಡ್ತು ಎನ್ನುವಾಗಲೇ ಒಮ್ಮೆಗೆ ಹೊರಗೆ ಬಂದಿದ್ದ ಚಿರತೆ ಬಲೆಯೊಳಗೆ ಸಿಲುಕುತ್ತಲೇ ಎಗರಾಡಿದೆ. ಬಲೆಯನ್ನು ಕಚ್ಚಿ ಹೊರಗೆ ಓಡುವ ಪ್ರಯತ್ನದಲ್ಲಿದ್ದಾಗಲೇ ಬಲೆ ತುಂಡಾಯಿತೋ ಏನೋ ಗೊತ್ತಿಲ್ಲ. ಬಲೆಯ ಅಡಿಭಾಗದಿಂದ ಚಿರತೆ ಹೊರಬಂದಿದ್ದು ಜನರನ್ನು ನೋಡಿ ಬೆದರಿ ಓಟಕ್ಕಿತ್ತಿದ್ದು ಪೊದೆಗಳ ನಡುವೆ ಓಡಿ ಪರಾರಿಯಾಗಿದೆ.


ಒಮ್ಮೆಗೆ ಚಿರತೆ ಹೊರಗೆ ಬಂದಿದ್ದು ಗೊತ್ತಾಗುತ್ತಲೇ ಅಲ್ಲಿ ಸೇರಿದ್ದ ಪರಿಸರ ಜನರು, ಪೊಲೀಸರು, ಮಾಧ್ಯಮದ ವ್ಯಕ್ತಿಗಳು ಕೂಡ ಚಿರತೆಯ ಬಗ್ಗೆ ಹೆದರಿ ಓಟಕ್ಕಿತ್ತಿದ್ದಾರೆ. ಅತ್ತ ಚಿರತೆಯೂ ಓಡಿದ್ದು, ಅದಾಗಲೇ ಕಾಡಿನಲ್ಲಿ ಮರೆಯಾಗಿತ್ತು. ಇಂದು ಮುಂಜಾವಿನ ವೇಳೆಗೆ, ಸುಬ್ರಹ್ಮಣ್ಯ ಬಳಿಯ ಕೈಕಂಬದ ರೇಗಪ್ಪ ಎಂಬವರ ಮನೆ ಆವರಣಕ್ಕೆ ಬಂದಿದ್ದ ಚಿರತೆ ನಾಯಿಯನ್ನು ಹಿಡಿಯಲೆಂದು ಬೆನ್ನಟ್ಟಿ ಬಂದಿತ್ತು. ನಾಯಿ ಪ್ರಾಣ ಭಯದಲ್ಲಿ ಮನೆಯ ಟಾಯ್ಲೆಟ್ ಕೋಣೆಗೆ ಹೊಕ್ಕಿತ್ತು. ಇದೇ ವೇಳೆ, ನಾಯಿಯನ್ನು ಹುಡುಕುತ್ತಾ ಹಿಂದೆ ಓಡಿದ್ದ ಮನೆಯಲ್ಲಿದ್ದ ಮಹಿಳೆ ಒಳಗೆ ಚಿರತೆ ಇರುವುದನ್ನು ಕಂಡು ಟಾಯ್ಲೆಟಿಗೆ ಬಾಗಿಲು ಹಾಕಿದ್ದಾರೆ.


ಆಬಳಿಕ ಸ್ಥಳೀಯರು ಸೇರಿದ್ದು ಅರಣ್ಯಾಧಿಕಾರಿಗಳು ಮತ್ತು ಸುಬ್ರಹ್ಮಣ್ಯ ಪೊಲೀಸರನ್ನು ಕರೆಸಿದ್ದಾರೆ. ಚಿರತೆ ಹಿಡಿಯಲೆಂದು ಬೋನು, ಹಗ್ಗ, ಬಲೆ ಎಲ್ಲವನ್ನೂ ಸ್ಥಳಕ್ಕೆ ತಂದು ಏನೋ ಆಪರೇಶನ್ ಮಾಡಲು ಪ್ಲಾನ್ ಹಾಕಿದ್ದರು. ಆದರೆ, ಮಧ್ಯಾಹ್ನ ಮೂರು ಗಂಟೆ ವೇಳೆಗೆ ಬಲೆಯ ನಡುವಿನಿಂದಲೇ ತಪ್ಪಿಸಿಕೊಂಡು ಮೇಲ್ಛಾವಣಿ ಹಾರಿ ತಪ್ಪಿಸಿಕೊಂಡಿದ್ದು ಸುಬ್ರಹ್ಮಣ್ಯದಲ್ಲಿ ಜನರ ಬಾಯಲ್ಲಿ ಹಾಸ್ಯದ ನಗೆ ಉಗ್ಗಿಸಿದೆ.
Read: ಸುಬ್ರಹ್ಮಣ್ಯ ; ನಾಯಿ ಅಟ್ಟಿಸಿ ಬಂದು ಟಾಯ್ಲೆಟ್ ಒಳಗೆ ಸಿಕ್ಕಿಬಿದ್ದ ಚಿರತೆ !
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm