ಬ್ರೇಕಿಂಗ್ ನ್ಯೂಸ್
03-02-21 06:13 pm Mangalore Correspondent ಕರಾವಳಿ
ಸುಬ್ರಹ್ಮಣ್ಯ, ಫೆ.3: ಕೊನೆಗೂ ಅರಣ್ಯಾಧಿಕಾರಿಗಳ ಆಪರೇಶನ್ ಚಿರತೆ ಠುಸ್ಸಾಯ್ತು. ಬೆಳಗ್ಗಿನಿಂದ ಬೋನು, ಬಲೆ ಹಿಡಿದು ಕಾರ್ಯಾಚರಣೆ ಮಾಡಿದ್ದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿಯೇ ಚಿರತೆ ಪರಾರಿಯಾಗಿದೆ.
ಬೆಳಗ್ಗಿನಿಂದಲೇ ಅರಣ್ಯಾಧಿಕಾರಿಗಳು ಒಂದೆಡೆ ಬೋನು, ಮತ್ತೊಂದು ಕಡೆ ಬಲೆ ಹಿಡಿದು ಚಿರತೆಯನ್ನು ಹಿಡಿಯಲು ಹರಸಾಹಸ ಮಾಡಿದ್ದರು. ಚಿರತೆ ಇನ್ನೇನು ಕೈಗೆ ಸಿಕ್ಕೇಬಿಡ್ತು ಎನ್ನುವಾಗಲೇ ಒಮ್ಮೆಗೆ ಹೊರಗೆ ಬಂದಿದ್ದ ಚಿರತೆ ಬಲೆಯೊಳಗೆ ಸಿಲುಕುತ್ತಲೇ ಎಗರಾಡಿದೆ. ಬಲೆಯನ್ನು ಕಚ್ಚಿ ಹೊರಗೆ ಓಡುವ ಪ್ರಯತ್ನದಲ್ಲಿದ್ದಾಗಲೇ ಬಲೆ ತುಂಡಾಯಿತೋ ಏನೋ ಗೊತ್ತಿಲ್ಲ. ಬಲೆಯ ಅಡಿಭಾಗದಿಂದ ಚಿರತೆ ಹೊರಬಂದಿದ್ದು ಜನರನ್ನು ನೋಡಿ ಬೆದರಿ ಓಟಕ್ಕಿತ್ತಿದ್ದು ಪೊದೆಗಳ ನಡುವೆ ಓಡಿ ಪರಾರಿಯಾಗಿದೆ.


ಒಮ್ಮೆಗೆ ಚಿರತೆ ಹೊರಗೆ ಬಂದಿದ್ದು ಗೊತ್ತಾಗುತ್ತಲೇ ಅಲ್ಲಿ ಸೇರಿದ್ದ ಪರಿಸರ ಜನರು, ಪೊಲೀಸರು, ಮಾಧ್ಯಮದ ವ್ಯಕ್ತಿಗಳು ಕೂಡ ಚಿರತೆಯ ಬಗ್ಗೆ ಹೆದರಿ ಓಟಕ್ಕಿತ್ತಿದ್ದಾರೆ. ಅತ್ತ ಚಿರತೆಯೂ ಓಡಿದ್ದು, ಅದಾಗಲೇ ಕಾಡಿನಲ್ಲಿ ಮರೆಯಾಗಿತ್ತು. ಇಂದು ಮುಂಜಾವಿನ ವೇಳೆಗೆ, ಸುಬ್ರಹ್ಮಣ್ಯ ಬಳಿಯ ಕೈಕಂಬದ ರೇಗಪ್ಪ ಎಂಬವರ ಮನೆ ಆವರಣಕ್ಕೆ ಬಂದಿದ್ದ ಚಿರತೆ ನಾಯಿಯನ್ನು ಹಿಡಿಯಲೆಂದು ಬೆನ್ನಟ್ಟಿ ಬಂದಿತ್ತು. ನಾಯಿ ಪ್ರಾಣ ಭಯದಲ್ಲಿ ಮನೆಯ ಟಾಯ್ಲೆಟ್ ಕೋಣೆಗೆ ಹೊಕ್ಕಿತ್ತು. ಇದೇ ವೇಳೆ, ನಾಯಿಯನ್ನು ಹುಡುಕುತ್ತಾ ಹಿಂದೆ ಓಡಿದ್ದ ಮನೆಯಲ್ಲಿದ್ದ ಮಹಿಳೆ ಒಳಗೆ ಚಿರತೆ ಇರುವುದನ್ನು ಕಂಡು ಟಾಯ್ಲೆಟಿಗೆ ಬಾಗಿಲು ಹಾಕಿದ್ದಾರೆ.


ಆಬಳಿಕ ಸ್ಥಳೀಯರು ಸೇರಿದ್ದು ಅರಣ್ಯಾಧಿಕಾರಿಗಳು ಮತ್ತು ಸುಬ್ರಹ್ಮಣ್ಯ ಪೊಲೀಸರನ್ನು ಕರೆಸಿದ್ದಾರೆ. ಚಿರತೆ ಹಿಡಿಯಲೆಂದು ಬೋನು, ಹಗ್ಗ, ಬಲೆ ಎಲ್ಲವನ್ನೂ ಸ್ಥಳಕ್ಕೆ ತಂದು ಏನೋ ಆಪರೇಶನ್ ಮಾಡಲು ಪ್ಲಾನ್ ಹಾಕಿದ್ದರು. ಆದರೆ, ಮಧ್ಯಾಹ್ನ ಮೂರು ಗಂಟೆ ವೇಳೆಗೆ ಬಲೆಯ ನಡುವಿನಿಂದಲೇ ತಪ್ಪಿಸಿಕೊಂಡು ಮೇಲ್ಛಾವಣಿ ಹಾರಿ ತಪ್ಪಿಸಿಕೊಂಡಿದ್ದು ಸುಬ್ರಹ್ಮಣ್ಯದಲ್ಲಿ ಜನರ ಬಾಯಲ್ಲಿ ಹಾಸ್ಯದ ನಗೆ ಉಗ್ಗಿಸಿದೆ.
Read: ಸುಬ್ರಹ್ಮಣ್ಯ ; ನಾಯಿ ಅಟ್ಟಿಸಿ ಬಂದು ಟಾಯ್ಲೆಟ್ ಒಳಗೆ ಸಿಕ್ಕಿಬಿದ್ದ ಚಿರತೆ !
07-04-26 03:51 pm
HK News Staffer
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
07-04-26 11:45 am
HK News Staffer
ಟ್ರಂಪ್ ವಾರ್ನಿಂಗ್ ಗೆ ಇರಾನ್ ಟಕ್ಕರ್ ; ವಿದ್ಯುತ್ ಸ...
07-04-26 11:42 am
ಟ್ರಂಪ್ 8pm ಘೋರ ಎಚ್ಚರಿಕೆಗೆ ಇರಾನ್ ತಿರುಗೇಟು ; ನ...
06-04-26 06:16 pm
ಗಲ್ಫ್ ಯುದ್ಧ ಎಫೆಕ್ಟ್ ; ಇಸ್ರೇಲ್ ಗೆ ಏರ್ ಇಂಡಿಯಾ ವ...
06-04-26 06:09 pm
ಯುಎಇಯಿಂದ ಪಾಕಿಸ್ತಾನಕ್ಕೆ ಬಿಗ್ ಶಾಕ್ ; 2 ಬಿಲಿಯನ್...
05-04-26 12:37 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
07-04-26 04:04 pm
HK News Staffer
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm
ಆತ್ಮಹತ್ಯೆ ಮಾಡಿಕೊಂಡ ಪತ್ನಿಯನ್ನು ನೋಡಲು ಆಸ್ಪತ್ರೆಗ...
06-04-26 02:34 pm
ಹಂದಿ ಬೇಟೆಗಾಗಿ ತೋಟದಲ್ಲಿ ಇಟ್ಟಿದ್ದ ನಾಡಬಾಂಬ್ ಸ್ಫೋ...
05-04-26 11:03 am