ಬ್ರೇಕಿಂಗ್ ನ್ಯೂಸ್
04-02-21 11:49 am Mangalore Correspondent ಕರಾವಳಿ
ಮಂಗಳೂರು, ಫೆ.4 : ಕಾರೊಂದು ಮರಕ್ಕೆ ಡಿಕ್ಕಿಯಾಗಿ ಮಹಿಳೆಯೊಬ್ಬರು ಮೃತಪಟ್ಟು, ಮೂವರು ಗಾಯಗೊಂಡ ಘಟನೆ ಕುಳಾಯಿ ಬಳಿ ನಡೆದಿದೆ.
ಮೃತ ಮಹಿಳೆಯನ್ನು ಕೃಷ್ಣಾಪುರ ಚೊಕ್ಕಬೆಟ್ಟು ನಿವಾಸಿ, ಬೋಂದೆಲ್ನಲ್ಲಿ ವಾಸಿಸುತ್ತಿದ್ದ ಸುಹಾನಾ (26) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಸುಹಾನಾ ಸಹೋದರಿ ಫಾತಿಮಾ ಶೌರೀನ್, ಸಹೋದರರಾದ ರಾಹಿಲ್ ಶಮೀಮ್ ಮತ್ತು ರಾಝಿಕ್ ಶಹಾನ್ ಅವರಿಗೆ ಗಂಭೀರ ಗಾಯಗಳಾಗಿವೆ.
ಗುರುವಾರ ಚಿಕ್ಕಮಗಳೂರಿನಲ್ಲಿ ನಡೆಯಲಿರುವ ಮದುವೆ ಕಾರ್ಯಕ್ರಮಕ್ಕೆ ತೆರಳಲು ಸಿದ್ಧತೆಯಲ್ಲಿದ್ದ ಕುಟುಂಬ ನಿನ್ನೆ ರಾತ್ರಿ ನಗರಕ್ಕೆ ಆಗಮಿಸಿ ಆಹಾರ ಪಾರ್ಸೆಲ್ ಮಾಡಿಸಿಕೊಂಡು ಕೃಷ್ಣಾಪುರ ಚೊಕ್ಕಬೆಟ್ಟುವಿಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಕಾರು ಚಲಾಯಿಸುತ್ತಿದ್ದ ರಾಹಿಲ್ ಶಮೀಮ್ಗೆ ವಿರುದ್ಧ ದಿಕ್ಕಿನಲ್ಲಿ ವಾಹನ ಬರುತ್ತಿದೆ ಎಂದು ಭ್ರಮಿಸಿ, ಅದಕ್ಕೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ರಸ್ತೆ ಬದಿಯ ಕಾರು ಮರಕ್ಕೆ ಡಿಕ್ಕಿ ಹೊಡೆಯಿತು ಎನ್ನಲಾಗಿದೆ.
ಕಾರಲ್ಲಿದ್ದ ನಾಲ್ಕು ಮಂದಿಗೂ ಗಾಯವಾಗಿದ್ದು, ಆ ಪೈಕಿ ಸುಹಾನಾ ಚಿಕಿತ್ಸೆ ಫಲಕಾರಿಯಾಗದೆ ತಡರಾತ್ರಿ ಕೊನೆಯುಸಿರೆಳೆದಿದ್ದಾರೆ. ಸುಹಾನಾ ಅವರು ಪತಿ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.
ಈ ಬಗ್ಗೆ ಮುಹಮ್ಮದ್ ರಿಯಾಝ್ ನೀಡಿದ ದೂರಿನಂತೆ ಸಂಚಾರ ಉತ್ತರ ಪೊಲೀಸ್ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
A woman was killed after their car hit a tree at Kulai in Mangalore. Three have been seriously injured. North Police have registered the case.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm