ಬ್ರೇಕಿಂಗ್ ನ್ಯೂಸ್
04-02-21 05:03 pm Mangalore Correspondent ಕರಾವಳಿ
ಮಂಗಳೂರು, ಫೆ.4 : ಇಲ್ಲಿನ ಬೈಕಂಪಾಡಿಯಲ್ಲಿ ಇರುವ ಮಂಗಳೂರು ಎಪಿಎಂಸಿ ಯಾರ್ಡಿನ ಗೋದಾಮು ಹಂಚಿಕೆಯ ಪ್ರಕ್ರಿಯೆಗೆ ರಾಜ್ಯ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಮಂಗಳೂರು ಸೆಂಟ್ರಲ್ ಮಾರ್ಕೆಟ್ನಲ್ಲಿದ್ದ ಹಣ್ಣು ಮತ್ತು ತರಕಾರಿ ಸಹಿತ ಸುಮಾರು 200ಕ್ಕೂ ಅಧಿಕ ವ್ಯಾಪಾರಿಗಳಿಗೆ 390 ಗೋದಾಮುಗಳನ್ನು ಹಂಚಿಕೆ ಮಾಡಲಾಗಿತ್ತು. ಜೇಷ್ಠತೆಯ ಆಧಾರದ ಹಂಚಿಕೆಯಲ್ಲಿ ಆಗಿರುವ ಲೋಪಗಳು ಮತ್ತು ವ್ಯಾಪಾರಕ್ಕೆ ಯೋಗ್ಯವಲ್ಲದ ಗೋದಾಮುಗಳನ್ನು ಹಂಚಿಕೆ ಮಾಡಿರುವುದು, ಪರಿಶಿಷ್ಟ ಜಾತಿ/ಪಂಗಡಕ್ಕೆ ಮೀಸಲಿಟ್ಟಿರುವ ಗೋದಾಮುಗಳನ್ನು ನಿಯಮಬಾಹಿರವಾಗಿ ಸಾಮಾನ್ಯ ವರ್ಗದ ಬಲಾಢ್ಯ ವರ್ತಕರಿಗೆ ಹಂಚಿಕೆ ಮಾಡಿರುವುದು, ಕಾರ್ನರ್ ಅಂಗಡಿಗಳನ್ನು ಹರಾಜಿಗಿಡದೆ ನೇರವಾಗಿ ಹಂಚಿಕೆ ಮಾಡಲಾಗಿದೆ ಎಂದು ಆರೋಪಿಸಿದ್ದ ಮಂಗಳೂರು ಎಪಿಎಂಸಿ ವರ್ತಕರ ಸಂಘವು ಮಂಗಳೂರು ಎಪಿಎಂಸಿ ಅಧಿಕಾರಿಗಳ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್ನಲ್ಲಿ ದಾವೆ ಹೂಡಿತ್ತು.

ಅದಲ್ಲದೆ ಎಪಿಎಂಸಿಯ ಸುಮಾರು 170ಕ್ಕೂ ಅಧಿಕ ವರ್ತಕರು, ನಿಗದಿತ ಡಿಡಿ ಪಾವತಿಸದೆ ಗೋದಾಮು ಹಂಚಿಕೆ ಪ್ರಕ್ರಿಯೆಯನ್ನು ವಿರೋಧಿಸಿ ಕಾನೂನು ಹೋರಾಟ ನಡೆಸುವ ತೀರ್ಮಾನ ಕೈಗೊಂಡಿದ್ದರು.
ದೂರಿನಂತೆ ವಿಚಾರಣೆಗೆ ಕೈಗೆತ್ತಿಕೊಂಡ ಹೈಕೋರ್ಟ್ ಮಂಗಳೂರು ಎಪಿಎಂಸಿ ಅಧಿಕಾರಿಗಳ ಲೋಪವನ್ನು ಗುರುತಿಸಿ ಗೋದಾಮು ಹಂಚಿಕೆ ಪ್ರಕ್ರಿಯೆಗೆ ತಡೆಯಾಜ್ಞೆ ನೀಡಿ ಆದೇಶ ನೀಡಿದೆ.
ಗೋದಾಮು ಹಂಚಿಕೆ ಪ್ರಕ್ರಿಯೆಗೆ ರಾಜ್ಯ ಹೈಕೋರ್ಟ್ ನೀಡಿದ ತೀರ್ಪನ್ನು ಮಂಗಳೂರು ಎಪಿಎಂಸಿ ವರ್ತಕರ ಸಂಘದ ಅಧ್ಯಕ್ಷ ಭರತ್ ರಾಜ್ ಮತ್ತು ಪ್ರಧಾನ ಕಾರ್ಯದರ್ಶಿ ಬಿ.ಕೆ.ಇಮ್ತಿಯಾಝ್ ಸ್ವಾಗತಿಸಿದ್ದಾರೆ. ವರ್ತಕರಿಗೆ ನ್ಯಾಯ ಸಿಗುವವರೆಗೆ ಹೋರಾಟ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ.
Mangalore Irregularities in distribution of cashews by ampc the district court issues stay order on Apmc.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm