ಬ್ರೇಕಿಂಗ್ ನ್ಯೂಸ್
04-02-21 05:03 pm Mangalore Correspondent ಕರಾವಳಿ
ಮಂಗಳೂರು, ಫೆ.4 : ಇಲ್ಲಿನ ಬೈಕಂಪಾಡಿಯಲ್ಲಿ ಇರುವ ಮಂಗಳೂರು ಎಪಿಎಂಸಿ ಯಾರ್ಡಿನ ಗೋದಾಮು ಹಂಚಿಕೆಯ ಪ್ರಕ್ರಿಯೆಗೆ ರಾಜ್ಯ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಮಂಗಳೂರು ಸೆಂಟ್ರಲ್ ಮಾರ್ಕೆಟ್ನಲ್ಲಿದ್ದ ಹಣ್ಣು ಮತ್ತು ತರಕಾರಿ ಸಹಿತ ಸುಮಾರು 200ಕ್ಕೂ ಅಧಿಕ ವ್ಯಾಪಾರಿಗಳಿಗೆ 390 ಗೋದಾಮುಗಳನ್ನು ಹಂಚಿಕೆ ಮಾಡಲಾಗಿತ್ತು. ಜೇಷ್ಠತೆಯ ಆಧಾರದ ಹಂಚಿಕೆಯಲ್ಲಿ ಆಗಿರುವ ಲೋಪಗಳು ಮತ್ತು ವ್ಯಾಪಾರಕ್ಕೆ ಯೋಗ್ಯವಲ್ಲದ ಗೋದಾಮುಗಳನ್ನು ಹಂಚಿಕೆ ಮಾಡಿರುವುದು, ಪರಿಶಿಷ್ಟ ಜಾತಿ/ಪಂಗಡಕ್ಕೆ ಮೀಸಲಿಟ್ಟಿರುವ ಗೋದಾಮುಗಳನ್ನು ನಿಯಮಬಾಹಿರವಾಗಿ ಸಾಮಾನ್ಯ ವರ್ಗದ ಬಲಾಢ್ಯ ವರ್ತಕರಿಗೆ ಹಂಚಿಕೆ ಮಾಡಿರುವುದು, ಕಾರ್ನರ್ ಅಂಗಡಿಗಳನ್ನು ಹರಾಜಿಗಿಡದೆ ನೇರವಾಗಿ ಹಂಚಿಕೆ ಮಾಡಲಾಗಿದೆ ಎಂದು ಆರೋಪಿಸಿದ್ದ ಮಂಗಳೂರು ಎಪಿಎಂಸಿ ವರ್ತಕರ ಸಂಘವು ಮಂಗಳೂರು ಎಪಿಎಂಸಿ ಅಧಿಕಾರಿಗಳ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್ನಲ್ಲಿ ದಾವೆ ಹೂಡಿತ್ತು.

ಅದಲ್ಲದೆ ಎಪಿಎಂಸಿಯ ಸುಮಾರು 170ಕ್ಕೂ ಅಧಿಕ ವರ್ತಕರು, ನಿಗದಿತ ಡಿಡಿ ಪಾವತಿಸದೆ ಗೋದಾಮು ಹಂಚಿಕೆ ಪ್ರಕ್ರಿಯೆಯನ್ನು ವಿರೋಧಿಸಿ ಕಾನೂನು ಹೋರಾಟ ನಡೆಸುವ ತೀರ್ಮಾನ ಕೈಗೊಂಡಿದ್ದರು.
ದೂರಿನಂತೆ ವಿಚಾರಣೆಗೆ ಕೈಗೆತ್ತಿಕೊಂಡ ಹೈಕೋರ್ಟ್ ಮಂಗಳೂರು ಎಪಿಎಂಸಿ ಅಧಿಕಾರಿಗಳ ಲೋಪವನ್ನು ಗುರುತಿಸಿ ಗೋದಾಮು ಹಂಚಿಕೆ ಪ್ರಕ್ರಿಯೆಗೆ ತಡೆಯಾಜ್ಞೆ ನೀಡಿ ಆದೇಶ ನೀಡಿದೆ.
ಗೋದಾಮು ಹಂಚಿಕೆ ಪ್ರಕ್ರಿಯೆಗೆ ರಾಜ್ಯ ಹೈಕೋರ್ಟ್ ನೀಡಿದ ತೀರ್ಪನ್ನು ಮಂಗಳೂರು ಎಪಿಎಂಸಿ ವರ್ತಕರ ಸಂಘದ ಅಧ್ಯಕ್ಷ ಭರತ್ ರಾಜ್ ಮತ್ತು ಪ್ರಧಾನ ಕಾರ್ಯದರ್ಶಿ ಬಿ.ಕೆ.ಇಮ್ತಿಯಾಝ್ ಸ್ವಾಗತಿಸಿದ್ದಾರೆ. ವರ್ತಕರಿಗೆ ನ್ಯಾಯ ಸಿಗುವವರೆಗೆ ಹೋರಾಟ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ.
Mangalore Irregularities in distribution of cashews by ampc the district court issues stay order on Apmc.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
29-04-26 11:10 pm
HK News Staffer
ಬೆಂಗಳೂರಿನಲ್ಲಿ ದಿಢೀರ್ ಮಳೆ ಆರ್ಭಟ ; ಬೌರಿಂಗ್ ಆಸ್ಪ...
29-04-26 08:12 pm
ಆಧಾರ್ ಹಿಡಿದು ಹೋದವರು 8 ತಿಂಗಳಾದರೂ ಸಿಗದ ಸುಳಿವು ;...
29-04-26 07:54 pm
ತ್ರಾಸಿ ಬೀಚ್ ಬಳಿ ಭೀಕರ ಅಪಘಾತ ; ಶಿವಮೊಗ್ಗದ ಪ್ರವಾಸ...
29-04-26 03:50 pm
ಪಹಲ್ಗಾಮ್ ಮಾದರಿಯಲ್ಲೇ ಮುಂಬೈನಲ್ಲಿ ದಾಳಿ ; ಕಲ್ಮಾ ಪ...
29-04-26 02:46 pm