ಬ್ರೇಕಿಂಗ್ ನ್ಯೂಸ್
04-02-21 05:03 pm Mangalore Correspondent ಕರಾವಳಿ
ಮಂಗಳೂರು, ಫೆ.4 : ಇಲ್ಲಿನ ಬೈಕಂಪಾಡಿಯಲ್ಲಿ ಇರುವ ಮಂಗಳೂರು ಎಪಿಎಂಸಿ ಯಾರ್ಡಿನ ಗೋದಾಮು ಹಂಚಿಕೆಯ ಪ್ರಕ್ರಿಯೆಗೆ ರಾಜ್ಯ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಮಂಗಳೂರು ಸೆಂಟ್ರಲ್ ಮಾರ್ಕೆಟ್ನಲ್ಲಿದ್ದ ಹಣ್ಣು ಮತ್ತು ತರಕಾರಿ ಸಹಿತ ಸುಮಾರು 200ಕ್ಕೂ ಅಧಿಕ ವ್ಯಾಪಾರಿಗಳಿಗೆ 390 ಗೋದಾಮುಗಳನ್ನು ಹಂಚಿಕೆ ಮಾಡಲಾಗಿತ್ತು. ಜೇಷ್ಠತೆಯ ಆಧಾರದ ಹಂಚಿಕೆಯಲ್ಲಿ ಆಗಿರುವ ಲೋಪಗಳು ಮತ್ತು ವ್ಯಾಪಾರಕ್ಕೆ ಯೋಗ್ಯವಲ್ಲದ ಗೋದಾಮುಗಳನ್ನು ಹಂಚಿಕೆ ಮಾಡಿರುವುದು, ಪರಿಶಿಷ್ಟ ಜಾತಿ/ಪಂಗಡಕ್ಕೆ ಮೀಸಲಿಟ್ಟಿರುವ ಗೋದಾಮುಗಳನ್ನು ನಿಯಮಬಾಹಿರವಾಗಿ ಸಾಮಾನ್ಯ ವರ್ಗದ ಬಲಾಢ್ಯ ವರ್ತಕರಿಗೆ ಹಂಚಿಕೆ ಮಾಡಿರುವುದು, ಕಾರ್ನರ್ ಅಂಗಡಿಗಳನ್ನು ಹರಾಜಿಗಿಡದೆ ನೇರವಾಗಿ ಹಂಚಿಕೆ ಮಾಡಲಾಗಿದೆ ಎಂದು ಆರೋಪಿಸಿದ್ದ ಮಂಗಳೂರು ಎಪಿಎಂಸಿ ವರ್ತಕರ ಸಂಘವು ಮಂಗಳೂರು ಎಪಿಎಂಸಿ ಅಧಿಕಾರಿಗಳ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್ನಲ್ಲಿ ದಾವೆ ಹೂಡಿತ್ತು.

ಅದಲ್ಲದೆ ಎಪಿಎಂಸಿಯ ಸುಮಾರು 170ಕ್ಕೂ ಅಧಿಕ ವರ್ತಕರು, ನಿಗದಿತ ಡಿಡಿ ಪಾವತಿಸದೆ ಗೋದಾಮು ಹಂಚಿಕೆ ಪ್ರಕ್ರಿಯೆಯನ್ನು ವಿರೋಧಿಸಿ ಕಾನೂನು ಹೋರಾಟ ನಡೆಸುವ ತೀರ್ಮಾನ ಕೈಗೊಂಡಿದ್ದರು.
ದೂರಿನಂತೆ ವಿಚಾರಣೆಗೆ ಕೈಗೆತ್ತಿಕೊಂಡ ಹೈಕೋರ್ಟ್ ಮಂಗಳೂರು ಎಪಿಎಂಸಿ ಅಧಿಕಾರಿಗಳ ಲೋಪವನ್ನು ಗುರುತಿಸಿ ಗೋದಾಮು ಹಂಚಿಕೆ ಪ್ರಕ್ರಿಯೆಗೆ ತಡೆಯಾಜ್ಞೆ ನೀಡಿ ಆದೇಶ ನೀಡಿದೆ.
ಗೋದಾಮು ಹಂಚಿಕೆ ಪ್ರಕ್ರಿಯೆಗೆ ರಾಜ್ಯ ಹೈಕೋರ್ಟ್ ನೀಡಿದ ತೀರ್ಪನ್ನು ಮಂಗಳೂರು ಎಪಿಎಂಸಿ ವರ್ತಕರ ಸಂಘದ ಅಧ್ಯಕ್ಷ ಭರತ್ ರಾಜ್ ಮತ್ತು ಪ್ರಧಾನ ಕಾರ್ಯದರ್ಶಿ ಬಿ.ಕೆ.ಇಮ್ತಿಯಾಝ್ ಸ್ವಾಗತಿಸಿದ್ದಾರೆ. ವರ್ತಕರಿಗೆ ನ್ಯಾಯ ಸಿಗುವವರೆಗೆ ಹೋರಾಟ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ.
Mangalore Irregularities in distribution of cashews by ampc the district court issues stay order on Apmc.
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
28-10-25 08:36 pm
Mangalore Correspondent
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
28-10-25 10:48 pm
Mangalore Correspondent
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm