ಬ್ರೇಕಿಂಗ್ ನ್ಯೂಸ್
04-02-21 05:03 pm Mangalore Correspondent ಕರಾವಳಿ
ಮಂಗಳೂರು, ಫೆ.4 : ಇಲ್ಲಿನ ಬೈಕಂಪಾಡಿಯಲ್ಲಿ ಇರುವ ಮಂಗಳೂರು ಎಪಿಎಂಸಿ ಯಾರ್ಡಿನ ಗೋದಾಮು ಹಂಚಿಕೆಯ ಪ್ರಕ್ರಿಯೆಗೆ ರಾಜ್ಯ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಮಂಗಳೂರು ಸೆಂಟ್ರಲ್ ಮಾರ್ಕೆಟ್ನಲ್ಲಿದ್ದ ಹಣ್ಣು ಮತ್ತು ತರಕಾರಿ ಸಹಿತ ಸುಮಾರು 200ಕ್ಕೂ ಅಧಿಕ ವ್ಯಾಪಾರಿಗಳಿಗೆ 390 ಗೋದಾಮುಗಳನ್ನು ಹಂಚಿಕೆ ಮಾಡಲಾಗಿತ್ತು. ಜೇಷ್ಠತೆಯ ಆಧಾರದ ಹಂಚಿಕೆಯಲ್ಲಿ ಆಗಿರುವ ಲೋಪಗಳು ಮತ್ತು ವ್ಯಾಪಾರಕ್ಕೆ ಯೋಗ್ಯವಲ್ಲದ ಗೋದಾಮುಗಳನ್ನು ಹಂಚಿಕೆ ಮಾಡಿರುವುದು, ಪರಿಶಿಷ್ಟ ಜಾತಿ/ಪಂಗಡಕ್ಕೆ ಮೀಸಲಿಟ್ಟಿರುವ ಗೋದಾಮುಗಳನ್ನು ನಿಯಮಬಾಹಿರವಾಗಿ ಸಾಮಾನ್ಯ ವರ್ಗದ ಬಲಾಢ್ಯ ವರ್ತಕರಿಗೆ ಹಂಚಿಕೆ ಮಾಡಿರುವುದು, ಕಾರ್ನರ್ ಅಂಗಡಿಗಳನ್ನು ಹರಾಜಿಗಿಡದೆ ನೇರವಾಗಿ ಹಂಚಿಕೆ ಮಾಡಲಾಗಿದೆ ಎಂದು ಆರೋಪಿಸಿದ್ದ ಮಂಗಳೂರು ಎಪಿಎಂಸಿ ವರ್ತಕರ ಸಂಘವು ಮಂಗಳೂರು ಎಪಿಎಂಸಿ ಅಧಿಕಾರಿಗಳ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್ನಲ್ಲಿ ದಾವೆ ಹೂಡಿತ್ತು.

ಅದಲ್ಲದೆ ಎಪಿಎಂಸಿಯ ಸುಮಾರು 170ಕ್ಕೂ ಅಧಿಕ ವರ್ತಕರು, ನಿಗದಿತ ಡಿಡಿ ಪಾವತಿಸದೆ ಗೋದಾಮು ಹಂಚಿಕೆ ಪ್ರಕ್ರಿಯೆಯನ್ನು ವಿರೋಧಿಸಿ ಕಾನೂನು ಹೋರಾಟ ನಡೆಸುವ ತೀರ್ಮಾನ ಕೈಗೊಂಡಿದ್ದರು.
ದೂರಿನಂತೆ ವಿಚಾರಣೆಗೆ ಕೈಗೆತ್ತಿಕೊಂಡ ಹೈಕೋರ್ಟ್ ಮಂಗಳೂರು ಎಪಿಎಂಸಿ ಅಧಿಕಾರಿಗಳ ಲೋಪವನ್ನು ಗುರುತಿಸಿ ಗೋದಾಮು ಹಂಚಿಕೆ ಪ್ರಕ್ರಿಯೆಗೆ ತಡೆಯಾಜ್ಞೆ ನೀಡಿ ಆದೇಶ ನೀಡಿದೆ.
ಗೋದಾಮು ಹಂಚಿಕೆ ಪ್ರಕ್ರಿಯೆಗೆ ರಾಜ್ಯ ಹೈಕೋರ್ಟ್ ನೀಡಿದ ತೀರ್ಪನ್ನು ಮಂಗಳೂರು ಎಪಿಎಂಸಿ ವರ್ತಕರ ಸಂಘದ ಅಧ್ಯಕ್ಷ ಭರತ್ ರಾಜ್ ಮತ್ತು ಪ್ರಧಾನ ಕಾರ್ಯದರ್ಶಿ ಬಿ.ಕೆ.ಇಮ್ತಿಯಾಝ್ ಸ್ವಾಗತಿಸಿದ್ದಾರೆ. ವರ್ತಕರಿಗೆ ನ್ಯಾಯ ಸಿಗುವವರೆಗೆ ಹೋರಾಟ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ.
Mangalore Irregularities in distribution of cashews by ampc the district court issues stay order on Apmc.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
08-02-26 10:18 pm
HK News Desk
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
08-02-26 11:17 pm
HK News Desk
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm