ಬ್ರೇಕಿಂಗ್ ನ್ಯೂಸ್
04-02-21 07:44 pm Mangaluru Correspondent ಕರಾವಳಿ
ಮಂಗಳೂರು, ಫೆ.4: ಧಾರ್ಮಿಕ ದತ್ತಿ ಇಲಾಖೆಯ ದೇವಸ್ಥಾನಗಳನ್ನು ಹೊರತುಪಡಿಸಿ ಉಳಿದ ಖಾಸಗಿ ಹಿಂದು ದೇವಸ್ಥಾನಗಳನ್ನು ಕಲಂ 53ರ ಅಡಿಯಲ್ಲಿ ನೋಂದಣಿ ಮಾಡಿಸಲು ಸರಕಾರ ಮುಂದಾಗಿದೆ. ಈ ಬಗ್ಗೆ ಧಾರ್ಮಿಕ ದತ್ತಿ ಇಲಾಖೆಯಿಂದ ಎಲ್ಲ ಖಾಸಗಿ ದೇವಸ್ಥಾನಗಳಿಗೆ ನೋಟೀಸ್ ಜಾರಿ ಮಾಡಲಾಗಿದ್ದು, ಇದನ್ನು ತಕ್ಷಣದಿಂದಲೇ ಹಿಂಪಡೆಯಬೇಕೆಂದು ವಿಶ್ವ ಹಿಂದು ಪರಿಷತ್ ಆಗ್ರಹಿಸಿದೆ.
ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿದ ವಿಹಿಂಪ ಪ್ರಾಂತ ಸಂಚಾಲಕ ಎಂ.ಬಿ.ಪುರಾಣಿಕ್, ಈ ರೀತಿಯ ಸುತ್ತೋಲೆ ಹೊರಡಿಸಿದ್ದು ಸರಕಾರದ ಹಿಂದು ವಿರೋಧಿ ನಿಲುವಾಗಿದ್ದು, ಖಾಸಗಿ ದೇವಸ್ಥಾನಗಳ ವಾರ್ಷಿಕ ಲೆಕ್ಕಪತ್ರ, ಅಲ್ಲಿ ಏನೆಲ್ಲ ಸೊತ್ತುಗಳಿವೆ ಎಂಬ ಬಗ್ಗೆ ಲೆಕ್ಕ ಕೊಡಲು ಸೂಚಿಸಲಾಗಿದೆ. ಇದು ಹಿಂದು ದೇವಸ್ಥಾನಗಳಿಗೆ ಮಾತ್ರ ಸೀಮಿತ ಮಾಡಿದ್ದು ಯಾಕೆ ? ಇಂಥದ್ದೇ ನಿಲುವು ಕ್ರಿಸ್ತಿಯನ್ನರ ಚರ್ಚ್ ಮತ್ತು ಮುಸ್ಲಿಮರ ಮಸೀದಿಗಳಿಗೆ ಯಾಕೆ ಅನ್ವಯ ಮಾಡಿಲ್ಲ ಎಂದು ಪ್ರಶ್ನಿಸಿದರು.

ಕಳೆದ ಬಾರಿ ಕಾಂಗ್ರೆಸ್ ಸರಕಾರ ಇದ್ದಾಗ 2015ರ ಆಗಸ್ಟ್ ತಿಂಗಳಲ್ಲಿ ಈ ರೀತಿಯ ಸುತ್ತೋಲೆಯನ್ನು ಧಾರ್ಮಿಕ ದತ್ತಿ ಇಲಾಖೆಯ ಮೂಲಕ ಹೊರಡಿಸಲಾಗಿತ್ತು. ಅದನ್ನು ಮಾರ್ಪಾಡುಗೊಳಿಸಿ ಈಗಿನ ಬಿಜೆಪಿ ಸರಕಾರ 2020ರ ನವೆಂಬರ್ ತಿಂಗಳಲ್ಲಿ ಜಾರಿ ಮಾಡಿದ್ದು, ಅನುಷ್ಠಾನಕ್ಕೆ ತರುತ್ತಿದೆ. ಖಾಸಗಿ ಹಿಂದು ದೇವಸ್ಥಾನಗಳಿಗೆ ಅಧಿಕಾರಿಗಳು ನೋಟೀಸ್ ನೀಡಿ, ಚರಾಸ್ತಿ, ಸ್ಥಿರಾಸ್ತಿ ಮತ್ತು ವಾರ್ಷಿಕ ಆದಾಯದ ಬಗ್ಗೆ ಮಾಹಿತಿ ನೀಡಲು ಒತ್ತಡ ಹೇರುವ ಪ್ರಯತ್ನ ಮಾಡುತ್ತಿದ್ದಾರೆ. ಒಂದು ತಿಂಗಳಲ್ಲಿ ಲೆಕ್ಕಪತ್ರ ನೀಡದಿದ್ದರೆ ತಾವೇ ಬಂದು ಆ ಕೆಲಸವನ್ನು ಮಾಡಬೇಕಾಗುತ್ತದೆ ಎಂದು ಬೆದರಿಸುತ್ತಿದ್ದಾರೆ. ಮಾಹಿತಿ ನೀಡದಿದ್ದರೆ ಕಾನೂನು ಕ್ರಮದ ಎಚ್ಚರಿಕೆ ನೀಡುತ್ತಿದ್ದಾರೆ. ಈ ರೀತಿಯ ಒತ್ತಡವನ್ನು ಚರ್ಚ್, ಮಸೀದಿಗಳಿಗೂ ಮಾಡುತ್ತೀರಾ ಎಂದು ಪ್ರಶ್ನೆ ಮಾಡಿದರು.
ಮುಜರಾಯಿ ಇಲಾಖೆಯ ದೇವಸ್ಥಾನಗಳಿಗಿಂತ ಹೆಚ್ಚು ಜನಸ್ನೇಹಿಯಾಗಿ ಸೇವಾ ಚಟುವಟಿಕೆಗಳನ್ನು ಖಾಸಗಿ ದೇವಸ್ಥಾನಗಳು ನಡೆಸಿಕೊಂಡು ಬಂದಿವೆ. ರಾಜ್ಯದಲ್ಲಿ ಈ ರೀತಿಯ ಸಾವಿರಾರು ದೇವಸ್ಥಾನಗಳಿದ್ದು, ಇಂಥ ನೋಟೀಸ್ ನೀಡಿ ಹಿಂದು ಶ್ರದ್ಧಾಕೇಂದ್ರಗಳನ್ನು ಸರಕಾರೀಕರಣಗೊಳಿಸಲು ಹುನ್ನಾರ ನಡೆಸುತ್ತಿದೆ. ಸರಕಾರಕ್ಕೆ ತೆಗೆದುಕೊಳ್ಳುವ ಪ್ರಯತ್ನದ ಮೊದಲ ಹೆಜ್ಜೆ. ತಕ್ಷಣದಿಂದಲೇ ಈ ಆದೇಶವನ್ನು ಹಿಂಪಡೆಯಬೇಕು. ಇಲ್ಲದಿದ್ದರೆ ನಾವು ಯಾವುದೇ ಹೋರಾಟಕ್ಕೂ ಸಿದ್ಧವಾಗಿದ್ದೇವೆ ಎಂದು ವಿಹಿಂಪ ವಿಭಾಗ ಕಾರ್ಯದರ್ಶಿ ಶರಣ್ ಪಂಪ್ ವೆಲ್ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಗೋಪಾಲ ಕುತ್ತಾರ್, ಜಿಲ್ಲಾ ಕಾರ್ಯದರ್ಶಿ ಶಿವಾನಂದ ಮೆಂಡನ್ ಇದ್ದರು.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm