ಶಿರಾಡಿ ಕೆಂಪುಹೊಳೆ ಬಳಿ ಟ್ಯಾಂಕರ್ ಪಲ್ಟಿ ; ಗ್ಯಾಸ್ ಲೀಕ್ ! ಮಂಗಳೂರು - ಬೆಂಗಳೂರು ಹೆದ್ದಾರಿ ಸ್ಥಗಿತ, ತೆರವು !

05-02-21 12:08 pm       Mangalore Correspondent   ಕರಾವಳಿ

ಮಂಗಳೂರಿನಿಂದ ಬೆಂಗಳೂರು ಕಡೆಗೆ ಗ್ಯಾಸ್ ತುಂಬಿಸಿಕೊಂಡು ತೆರಳುತ್ತಿದ್ದ ಟ್ಯಾಂಕರ್, ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಅಡ್ಡಲಾಗಿ ಮಗುಚಿ ಬಿದ್ದಿದೆ.

ಕಡಬ, ಫೆ.5 : ಅನಿಲ ತುಂಬಿದ್ದ ಟ್ಯಾಂಕರ್ ಪಲ್ಟಿಯಾಗಿ ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಸ್ಥಗಿತಗೊಂಡಿರುವ ಘಟನೆ ಶಿರಾಡಿ ಸಮೀಪದ ಕೆಂಪುಹೊಳೆ ಎಂಬಲ್ಲಿ ನಡೆದಿದೆ.

ಮಂಗಳೂರಿನಿಂದ ಬೆಂಗಳೂರು ಕಡೆಗೆ ಗ್ಯಾಸ್ ತುಂಬಿಸಿಕೊಂಡು ತೆರಳುತ್ತಿದ್ದ ಟ್ಯಾಂಕರ್, ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಅಡ್ಡಲಾಗಿ ಮಗುಚಿ ಬಿದ್ದಿದೆ. ಟ್ಯಾಂಕರ್ ನಿಂದ ಅನಿಲ ಸೋರಿಕೆಯಾಗಿದ್ದು ಕೂಡಲೇ ಪೊಲೀಸರು ರಸ್ತೆಯಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಿದ್ದಾರೆ.

ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಪೊಲೀಸರು ಸ್ಥಳದಲ್ಲಿದ್ದು ಟ್ಯಾಂಕರ್ ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ.

ರಾಷ್ಟ್ರೀಯ ಹೆದ್ದಾರಿ 73ರ ಶಿರಾಡಿ ಘಾಟ್ ರಸ್ತೆಯ‌ನ್ನು ಗುಂಡ್ಯದಲ್ಲಿ ನಿರ್ಬಂಧಿಸಲಾಗಿದ್ದು ಮಂಗಳೂರಿನಿಂದ ಬೆಂಗಳೂರಿಗೆ ತೆರಳುವವರು ಪರ್ಯಾಯವಾಗಿ ಮಾಣಿಯಿಂದ ಮೈಸೂರು ರಸ್ತೆ ಅಥವಾ ಬೆಳ್ತಂಗಡಿ ಮೂಲಕ ಚಾರ್ಮಾಡಿ ಆಗಿ ತೆರಳಲು ವ್ಯವಸ್ಥೆ ಮಾಡಲಾಗಿದೆ. 

ಬೆಳಗ್ಗೆ ಹತ್ತು ಗಂಟೆಯಿಂದ ಹೆದ್ದಾರಿ ಸಂಚಾರ ನಿರ್ಬಂಧಿಸಿದ್ದು ಈಗ ಮಧ್ಯಾಹ್ನ 2 ಗಂಟೆಯ ಬಳಿಕ ಹೆದ್ದಾರಿ ಸಂಚಾರಕ್ಕೆ ಮುಕ್ತ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Gas-filled tanker topples near ghats at Kadaba in Mangalore. Since February many gas tankers toppling incidents have been taking place.