ಬ್ರೇಕಿಂಗ್ ನ್ಯೂಸ್
05-02-21 05:18 pm Mangalore Correspondent ಕರಾವಳಿ
ಮಂಗಳೂರು, ಫೆ.5: ಸಿಸಿಬಿಯಲ್ಲಿ ಈ ಹಿಂದೆ ಎಸ್ಐ ಆಗಿದ್ದ ಕಬ್ಬಾಳರಾಜ್ ಅವರನ್ನು ಮುಖ್ಯಮಂತ್ರಿ ಪದಕಕ್ಕೆ ಶಿಫಾರಸು ಮಾಡಲಾಗಿದ್ದು, ಈಗ ಕಬ್ಬಾಳರಾಜ್ ಪದಕ ಪಡೆಯುವ ವಿಚಾರವೇ ವಿವಾದಕ್ಕೆ ಕಾರಣವಾಗಿದೆ.
ಪ್ರಕರಣ ಒಂದರಲ್ಲಿ ಜಪ್ತಿ ಮಾಡಿದ್ದ ಕಾರು ಮಾರಾಟ ಪ್ರಕರಣದಲ್ಲಿ ಸಿಸಿಬಿ ಅಧಿಕಾರಿಗಳ ತಂಡ ಆರೋಪಕ್ಕೆ ಗುರಿಯಾಗಿರುವ ಸಂದರ್ಭದಲ್ಲೇ ಅಧಿಕಾರಿ ಒಬ್ಬರಿಗೆ ಮುಖ್ಯಮಂತ್ರಿ ಪದಕಕ್ಕೆ ಶಿಫಾರಸು ಮಾಡಿದ್ದು ಎಷ್ಟು ಸರಿ ಎನ್ನುವ ಮಾತು ಕೇಳಿಬರುತ್ತಿದೆ. ಆದರೆ, ಹಿಂದಿನ ಕಮಿಷನರ್ ವಿಕಾಸ್ ಕುಮಾರ್ ಅಧಿಕಾರದಲ್ಲಿದ್ದ ಅವಧಿಯಲ್ಲೇ ತನ್ನ ಆಪ್ತನಾಗಿದ್ದ ಕಬ್ಬಾಳರಾಜ್ ಅವರನ್ನು ಸಿಎಂ ಪದಕಕ್ಕೆ ಶಿಫಾರಸು ಮಾಡಿದ್ದಾರೆ ಎನ್ನಲಾಗುತ್ತಿದೆ.
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯ ವ್ಯಾಪ್ತಿಯ ಹತ್ತು ಮಂದಿ ಪೊಲೀಸರಿಗೆ ಸಿಎಂ ಪದಕಕ್ಕೆ ಹೆಸರು ಘೋಷಣೆ ಮಾಡಲಾಗಿದ್ದು ಫೆ.8ರಂದು ಬೆಂಗಳೂರಿನಲ್ಲಿ ಸಿಎಂ ಪದಕ ಪ್ರದಾನ ನಡೆಯಲಿದೆ. ಆದರೆ, ಮಂಗಳೂರಿನ ಸಿಸಿಬಿ ಅಧಿಕಾರಿಯಾಗಿದ್ದ ಕಬ್ಬಾಳರಾಜ್ ವಿರುದ್ಧ ಈಗಾಗ್ಲೇ ಆಂತರಿಕ ತನಿಖೆ ಆರಂಭಗೊಂಡಿದ್ದು, ಇವರಿಗೆ ಪದಕ ಪ್ರದಾನ ಮಾಡುವುದು ಅನುಮಾನ ಎನ್ನಲಾಗುತ್ತಿದೆ.
ಮುಖ್ಯಮಂತ್ರಿ ಪದಕದ ನಿಯಮ ಪ್ರಕಾರ, ಪದಕ ಪಡೆಯುವ ಪೊಲೀಸರು ಯಾವುದೇ ರೀತಿಯ ಹಗರಣ, ಪ್ರಕರಣದಲ್ಲಿ ಅಥವಾ ಇಲಾಖಾ ತನಿಖೆಗೆ ಒಳಪಟ್ಟಿರಬಾರದು ಎಂಬ ನಿಯಮವಿದೆ. ಈ ನಿಯಮದ ಪ್ರಕಾರ, ಕಬ್ಬಾಳರಾಜ್ ಸಿಎಂ ಪದಕ ಪಡೆಯುವ ವಿಚಾರಕ್ಕೆ ಕುತ್ತು ಬಂದಂತಾಗಿದೆ.
The Chief Ministers Gold Medal for former CCB Sub Inspector kabbal Raj may hold as his name has been highlighted in an illicit case.
05-09-25 11:15 pm
Bangalore Correspondent
ಭೋವಿ ಅಭಿವೃದ್ಧಿ ನಿಗಮದಲ್ಲಿ ಕಮಿಷನ್ ವಸೂಲಿ ; ಅಧ್ಯಕ...
05-09-25 07:55 pm
ಡಿಸಿಎಂ ಡಿಕೆಶಿ ಬೆಂಬಲಿಗರ ಹತ್ತಾರು ಕೇಸು ಸೇರಿದಂತೆ...
05-09-25 05:40 pm
ಕಾಂಗ್ರೆಸಿನ ಯಾರ ಮನೆಯ ನಾಯಿ ಸ್ವಾತಂತ್ರ್ಯಕ್ಕಾಗಿ ಹೋ...
03-09-25 09:00 pm
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
04-09-25 08:47 pm
HK News Desk
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
05-09-25 08:12 pm
Mangalore Correspondent
ತಡರಾತ್ರಿ ಫಾಸ್ಟ್ ಫುಡ್ ಗೌಜಿ ಪ್ರಶ್ನಿಸಿದ್ದಕ್ಕೆ ಸಿ...
05-09-25 05:09 pm
ಸೌಜನ್ಯಾ ಕೊಲೆ ಪ್ರಕರಣವನ್ನು ಮುಚ್ಚಿ ಹಾಕಿದ್ದೇ ಆರ್....
04-09-25 11:07 pm
Dharmasthala, Sameer Md, House Raid: ಧರ್ಮಸ್ಥಳ...
04-09-25 10:29 pm
Brijesh Chowta, Mangalore: ಜಿಎಸ್ಟಿ ಹೊರೆ ಇಳಿಸಿ...
04-09-25 07:57 pm
05-09-25 10:53 pm
Mangalore Correspondent
Mukka Murder, Mangalore, Crime: ಪತ್ನಿಯ ಅಶ್ಲೀಲ...
05-09-25 10:26 pm
Atm robbery, Ullal, Kotekar, Mangalore: ಕೋಟೆಕ...
05-09-25 08:36 pm
16 ವರ್ಷಗಳ ಹಳೆ ಪ್ರಕರಣದಲ್ಲಿ ಶಿಕ್ಷೆ ; ಬ್ರಹ್ಮಾವರದ...
05-09-25 12:34 pm
ಹಟ್ಟಿಯಲ್ಲಿದ್ದ ಹಸುವನ್ನು ನಡುರಾತ್ರಿ ಎಳೆದೊಯ್ದು ರೈ...
05-09-25 11:43 am