ಬ್ರೇಕಿಂಗ್ ನ್ಯೂಸ್
05-02-21 08:29 pm Mangaluru Correspondent ಕರಾವಳಿ
ಕೊಣಾಜೆ, ಫೆ.5: ಪೆಟ್ರೋಲ್, ಡಿಸೇಲ್, ಎಲ್ ಪಿಜಿ ವಿಪರೀತ ದರ ಏರಿಕೆ ಖಂಡಿಸಿ ಆಟೋ ರಾಜಕನ್ಮಾರ್ ಸಂಘಟನೆಯ ಆಶ್ರಯದಲ್ಲಿ ಶುಕ್ರವಾರ ದೇರಳಕಟ್ಟೆ ಜಂಕ್ಷನ್ ನಲ್ಲಿ ಅಟೋ ರಿಕ್ಷಾ ಚಾಲಕರು ಪ್ರತಿಭಟನೆ ನಡೆಸಿ ಕೇಂದ್ರ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಡಿವೈಎಫ್ ಐ ಮುಖಂಡ ಮುನೀರ್ ಕಾಟಿಪಳ್ಳ ಮಾತನಾಡಿ, ತೈಲ ಏರಿಕೆಯೆಂದರೆ ರಿಕ್ಷಾ ಚಾಲಕರಿಗೆ ಮಾತ್ರವಲ್ಲ ಪ್ರತಿಯೊಂದರ ಮೇಲೂ ದರ ಏರಿಕೆಯ ಬಿಸಿ ತಟ್ಟುತ್ತದೆ. ದುಡಿಯುತ್ತಿರುವ ಹಲವರ ಹಕ್ಕುಗಳನ್ನು ಕೇಂದ್ರ ಸರಕಾರ ಕಸಿದುಕೊಳ್ಳುತ್ತಿದೆ. ಬಡವರಿಂದ ಕಸಿದುಕೊಂಡು ಅಂಬಾನಿ, ಅದಾನಿಯಂತವರ ಜೇಬು ತುಂಬಿಸುವ ಕಾರ್ಯ ಮಾಡುತ್ತಿದ್ದಾರೆ. ತೈಲ ದರ ಏರಿಕೆಯ ವಿರುದ್ದ ಎಲ್ಲರೂ ಐಕ್ಯತೆಯೊಂದಿಗೆ ಹೋರಾಡೋಣ ಎಂದರು.

ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ರಾಜ್ಯ ಉಪಾಧ್ಯಕ್ಷ ಅಬ್ದುಲ್ ಶಕೀಲ್ ಮಾತನಾಡಿ ಕೇಂದ್ರ ಸರಕಾರದ ದರ ಏರಿಕೆ ನೀತಿಯನ್ನು ಖಂಡಿಸಿ ಎಲ್ಲರೂ ಪಕ್ಷಭೇದ ಮರೆತು ಕೆಂಪುಕೋಟೆಗೆ ಲಗ್ಗೆ ಹಾಕುವ ದಿನ ದೂರವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಆಟೋ ರಾಜಕನ್ಮಾರ್ ಸಂಘಟನೆಯ ಅಬ್ದುಲ್ ಜಲೀಲ್ ಪ್ರಾಸ್ತಾವಿಕ ಮಾತನಾಡಿ, ಅಂತರಾಷ್ಟ್ರೀಯ ಮಟ್ಟದಲ್ಲಿ ತೈಲ ದರ ಪಾತಾಳಕ್ಕೆ ಇಳಿದರೂ ಇಲ್ಲಿ ಮಾತ್ರ ಏರಿಕೆಯಾಗುತ್ತಲೇ ಇದೆ. ಶ್ರೀಮಂತರಿಂದ ಬೇಕಾದರೆ ಕಸಿದುಕೊಳ್ಳಿ. ಆದರೆ ಬಡ ಜನರ ಹೊಟ್ಟೆಗೆ ಹೊಡೆಯುವ ಕೆಲಸ ಮಾಡಬೇಡಿ. ಇವತ್ತು ನಾವು ದೇರಳಕಟ್ಟೆಯವರೆಗೆ ರಿಕ್ಷಾ ಚಲೋ ಮಾಡಿದ್ದೇವೆ. ಮುಂದೊಂದು ದಿನ ದೆಹಲಿಯ ಪ್ರಧಾನಿ ಕಚೇರಿಗೂ ರಿಕ್ಷಾ ಚಲೋ ಹಮ್ಮಿಕೊಳ್ಳುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ದಲಿತ ಸಂಘಟನೆಯ ಸೇಸಪ್ಪ ಬೆದ್ರಕಾಡು, ಸಿ.ಎಂ.ರವೂಫ್, ಅರುಣ್ ಕುಮಾರ್, ರಫೀಕ್ ಹರೇಕಳ, ಮೋನು ಟಿಸ್ಕೋ, ಇಸ್ಮತ್ ಪಜೀರ್, ಸತ್ತಾರ್ ಸಿ.ಎಂ, ನಾಗೇಶ್, ಚಂದ್ರಶೇಖರ್ , ನೌಷಾದ್, ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Auto Drivers in Konaje, Mangalore staged a protest against the steep rise in petrol and diesel prices blaming the BJP-led Central government.
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
28-10-25 08:36 pm
Mangalore Correspondent
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
28-10-25 10:48 pm
Mangalore Correspondent
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm