ಬ್ರೇಕಿಂಗ್ ನ್ಯೂಸ್
05-02-21 08:29 pm Mangaluru Correspondent ಕರಾವಳಿ
ಕೊಣಾಜೆ, ಫೆ.5: ಪೆಟ್ರೋಲ್, ಡಿಸೇಲ್, ಎಲ್ ಪಿಜಿ ವಿಪರೀತ ದರ ಏರಿಕೆ ಖಂಡಿಸಿ ಆಟೋ ರಾಜಕನ್ಮಾರ್ ಸಂಘಟನೆಯ ಆಶ್ರಯದಲ್ಲಿ ಶುಕ್ರವಾರ ದೇರಳಕಟ್ಟೆ ಜಂಕ್ಷನ್ ನಲ್ಲಿ ಅಟೋ ರಿಕ್ಷಾ ಚಾಲಕರು ಪ್ರತಿಭಟನೆ ನಡೆಸಿ ಕೇಂದ್ರ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಡಿವೈಎಫ್ ಐ ಮುಖಂಡ ಮುನೀರ್ ಕಾಟಿಪಳ್ಳ ಮಾತನಾಡಿ, ತೈಲ ಏರಿಕೆಯೆಂದರೆ ರಿಕ್ಷಾ ಚಾಲಕರಿಗೆ ಮಾತ್ರವಲ್ಲ ಪ್ರತಿಯೊಂದರ ಮೇಲೂ ದರ ಏರಿಕೆಯ ಬಿಸಿ ತಟ್ಟುತ್ತದೆ. ದುಡಿಯುತ್ತಿರುವ ಹಲವರ ಹಕ್ಕುಗಳನ್ನು ಕೇಂದ್ರ ಸರಕಾರ ಕಸಿದುಕೊಳ್ಳುತ್ತಿದೆ. ಬಡವರಿಂದ ಕಸಿದುಕೊಂಡು ಅಂಬಾನಿ, ಅದಾನಿಯಂತವರ ಜೇಬು ತುಂಬಿಸುವ ಕಾರ್ಯ ಮಾಡುತ್ತಿದ್ದಾರೆ. ತೈಲ ದರ ಏರಿಕೆಯ ವಿರುದ್ದ ಎಲ್ಲರೂ ಐಕ್ಯತೆಯೊಂದಿಗೆ ಹೋರಾಡೋಣ ಎಂದರು.

ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ರಾಜ್ಯ ಉಪಾಧ್ಯಕ್ಷ ಅಬ್ದುಲ್ ಶಕೀಲ್ ಮಾತನಾಡಿ ಕೇಂದ್ರ ಸರಕಾರದ ದರ ಏರಿಕೆ ನೀತಿಯನ್ನು ಖಂಡಿಸಿ ಎಲ್ಲರೂ ಪಕ್ಷಭೇದ ಮರೆತು ಕೆಂಪುಕೋಟೆಗೆ ಲಗ್ಗೆ ಹಾಕುವ ದಿನ ದೂರವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಆಟೋ ರಾಜಕನ್ಮಾರ್ ಸಂಘಟನೆಯ ಅಬ್ದುಲ್ ಜಲೀಲ್ ಪ್ರಾಸ್ತಾವಿಕ ಮಾತನಾಡಿ, ಅಂತರಾಷ್ಟ್ರೀಯ ಮಟ್ಟದಲ್ಲಿ ತೈಲ ದರ ಪಾತಾಳಕ್ಕೆ ಇಳಿದರೂ ಇಲ್ಲಿ ಮಾತ್ರ ಏರಿಕೆಯಾಗುತ್ತಲೇ ಇದೆ. ಶ್ರೀಮಂತರಿಂದ ಬೇಕಾದರೆ ಕಸಿದುಕೊಳ್ಳಿ. ಆದರೆ ಬಡ ಜನರ ಹೊಟ್ಟೆಗೆ ಹೊಡೆಯುವ ಕೆಲಸ ಮಾಡಬೇಡಿ. ಇವತ್ತು ನಾವು ದೇರಳಕಟ್ಟೆಯವರೆಗೆ ರಿಕ್ಷಾ ಚಲೋ ಮಾಡಿದ್ದೇವೆ. ಮುಂದೊಂದು ದಿನ ದೆಹಲಿಯ ಪ್ರಧಾನಿ ಕಚೇರಿಗೂ ರಿಕ್ಷಾ ಚಲೋ ಹಮ್ಮಿಕೊಳ್ಳುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ದಲಿತ ಸಂಘಟನೆಯ ಸೇಸಪ್ಪ ಬೆದ್ರಕಾಡು, ಸಿ.ಎಂ.ರವೂಫ್, ಅರುಣ್ ಕುಮಾರ್, ರಫೀಕ್ ಹರೇಕಳ, ಮೋನು ಟಿಸ್ಕೋ, ಇಸ್ಮತ್ ಪಜೀರ್, ಸತ್ತಾರ್ ಸಿ.ಎಂ, ನಾಗೇಶ್, ಚಂದ್ರಶೇಖರ್ , ನೌಷಾದ್, ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Auto Drivers in Konaje, Mangalore staged a protest against the steep rise in petrol and diesel prices blaming the BJP-led Central government.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
08-02-26 10:18 pm
HK News Desk
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
08-02-26 11:17 pm
HK News Desk
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm