ಬ್ರೇಕಿಂಗ್ ನ್ಯೂಸ್
05-02-21 08:51 pm Mangaluru Correspondent ಕರಾವಳಿ
ಮಂಗಳೂರು, ಫೆ.5: ಪೆಟ್ರೋಲ್, ಡೀಸೆಲ್ ಬೆಲೆ ವಿಪರೀತ ಏರಿಕೆ ಆಗಿರುವುದನ್ನು ವಿರೋಧಿಸಿ ಮಂಗಳೂರಿನಲ್ಲಿ ಡಿವೈಎಫ್ಐ ವತಿಯಿಂದ ಸ್ಕೂಟರನ್ನು ತಳ್ಳುಗಾಡಿಯಿಂದ ಎಳೆದು ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಲಾಯಿತು.
ನಗರದ ಎ.ಬಿ.ಶೆಟ್ಟಿ ಸರ್ಕಲ್ ಬಳಿಯಿಂದ ಕ್ಲಾಕ್ ಟವರ್ ವೃತ್ತದ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ಕಾರ್ಯಕರ್ತರು ಕೇಂದ್ರ ಸರಕಾರದ ವಿರುದ್ಧ ಧಿಕ್ಕಾರ ಕೂಗಿದರು. ಬಳಿಕ ಪ್ರತಿಭಟನೆಯಲ್ಲಿ ಮಾತನಾಡಿದ ಡಿವೈಎಫ್ಐ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್, ಬಿಜೆಪಿಯವರು 2013ರಲ್ಲಿ ಪೆಟ್ರೋಲ್ ದರ 80 ರೂ. ಆಗಿದ್ದಾಗ ಭಾರತ್ ಬಂದ್ ನಡೆಸಿದ್ದರು. ತಾವು ಅಧಿಕಾರಕ್ಕೆ ಬಂದಲ್ಲಿ ಪೆಟ್ರೋಲಿಗೆ 50 ರೂ. ಮಾಡ್ತೇವೆ ಎಂದಿದ್ದರು. ಈಗ ಅಧಿಕಾರಕ್ಕೆ ಬಂದು ಆರು ವರ್ಷ ಕಳೆದಿದೆ. ಯಾಕೆ ಪೆಟ್ರೋಲ್ ದರ ಇಳಿಸಿಲ್ಲ ಎಂದು ಪ್ರಶ್ನೆ ಮಾಡಿದರು.


ಈಗಂತೂ ವಿಪರೀತವಾಗಿ ದರ ಏರಿಕೆ ಮಾಡಿದ್ದಾರೆ. ಜೊತೆಗೆ ಡೀಸೆಲ್, ಎಲ್ಪಿಜಿ ದರವನ್ನೂ ಏರಿಸಿ ಜನಸಾಮಾನ್ಯರ ಮೇಲೆ ಬರೆ ಹಾಕಿದ್ದಾರೆ. ಇವರಿಗೆ ಅಂಬಾನಿ, ಅದಾನಿಯಂತಹ ಕಂಪನಿ ಧಣಿಗಳು ಅಷ್ಟೇ ಮುಖ್ಯವಾಗಿದ್ದಾರೆ. ಕಂಪನಿಗಳ ಸಾಲಮನ್ನಾ ಮಾಡುತ್ತಾರೆ. ಕಳೆದ ಬಾರಿ 1.90 ಲಕ್ಷ ಕೋಟಿ ಸಾಲಮನ್ನಾ ಮಾಡಿದ್ದಾರೆ. ಇವರಿಗೆ ಸಾಮಾನ್ಯ ಜನರ ಮೇಲೆ ಕಾಳಜಿಯೇ ಇಲ್ಲ. ಕೊರೊನಾ ಲಾಕ್ಡೌನ್ ಸಂದರ್ಭದಲ್ಲಿ ತೈಲ ದರ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ವಿಪರೀತ ಇಳಿಕೆಯಾಗಿತ್ತು. ಆದರೆ, ಜನರಿಗೆ ಅದರ ಲಾಭ ಸಿಕ್ಕಿಲ್ಲ. ಈಗಲೂ 45 ಡಾಲರಿಗೆ ತೈಲ ಬ್ಯಾರೆಲ್ ಸಿಗುತ್ತಿದೆ. ಇವರು ಇತಿಹಾಸದಲ್ಲೇ ಅತಿ ಹೆಚ್ಚು ದರ ಪೀಕಿಸುತ್ತಿದ್ದಾರೆ ಎಂದು ಸಂತೋಷ್ ಹೇಳಿದರು.
ಪ್ರತಿಭಟನೆಯಲ್ಲಿ ಡಿವೈಎಫ್ಐ ದ.ಕ ಜಿಲ್ಲಾದ್ಯಕ್ಷ ಬಿ.ಕೆ ಇಮ್ತಿಯಾಜ್ , ಜೆಎಮ್ಎಸ್ ಜಿಲ್ಲಾ ಮುಖಂಡರಾದ ಜಯಂತಿ ಬಿ ಶೆಟ್ಟಿ, ಭಾರತಿ ಬೋಳಾರ್, ಅಸುಂತ ಡಿಸೋಜಾ, ಪ್ರಮಿಳಾ ದೇವಾಡಿಗ, ಡಿವೈಎಫ್ಐ ನಗರ ಸಮಿತಿ ಮುಖಂಡರಾದ ಎ.ಬಿ ನೌಶದ್ , ರಫೀಕ್ ಪಿ.ಜಿ, ದೀಪಕ್ ಬಜಾಲ್, ಚರಣ್ ಶೆಟ್ಟಿ ಪಂಜಿಮೊಗರು, ಹನೀಫ್ ಮುಂತಾದವರು ಉಪಸ್ಥಿತರಿದ್ದರು.
Activists today staged a protest against the steep rise in petrol and diesel prices near in Mangalore city by carrying their two-wheelers in procession, blaming the BJP-led Centre for the same.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm