ಬ್ರೇಕಿಂಗ್ ನ್ಯೂಸ್
06-02-21 01:24 pm Mangalore Correspondent ಕರಾವಳಿ
ಮಂಗಳೂರು, ಫೆ.6 : ಯುವ ಕಾಂಗ್ರೆಸ್ ದಕ್ಷಿಣ ಬ್ಲಾಕ್ ಪ್ರಧಾನ ಕಾರ್ಯದರ್ಶಿಯಾಗಿ ಸಂಜನಾ ಛಲವಾದಿ ಆಯ್ಕೆಯಾಗಿದ್ದಾರೆ. ಈ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೊದಲ ಬಾರಿಗೆ ಮಂಗಳಮುಖಿ ಒಬ್ಬರಿಗೆ ರಾಜಕೀಯ ಪಕ್ಷದಲ್ಲಿ ಪದಾಧಿಕಾರಿ ಸ್ಥಾನ ದೊರಕಿದೆ.
ಮಂಗಳೂರಿನಲ್ಲಿ ಬ್ಯೂಟಿಷಿಯನ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಪರಿವರ್ತನ್ ಟ್ರಾನ್ಸ್ ಕ್ವೀನ್-2018 ಸಂಜನಾ ಚಲವಾದಿಯವರು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ನಡೆಸಿರುವ ಯುವ ಕಾಂಗ್ರೆಸ್ ಮಂಗಳೂರು ದಕ್ಷಿಣ ಬ್ಲಾಕ್ ಅಧ್ಯಕ್ಷ ಸ್ಥಾನದ ಚುನಾವಣೆಗೆ ಮಹಿಳಾ ವಿಭಾಗದಿಂದ ಸ್ಪರ್ಧಿಸಿದ್ದರು. ಜನವರಿ 10, 11 ಮತ್ತು 12 ರಂದು ಆನ್ಲೈನ್ ಮೂಲಕ ಮತದಾನ ನಡೆದಿದ್ದು, ಇದೀಗ ಫಲಿತಾಂಶ ಪ್ರಕಟಗೊಂಡಿದೆ. ಅಧ್ಯಕ್ಷರಾಗಿ ಶಿವ, ಉಪಾಧ್ಯಕ್ಷರಾಗಿ ಸೋಹನ್, ದೀಕ್ಷಿತ್ ಪೂಜಾರಿ ಮತ್ತು ದಕ್ಷಿಣ ಬ್ಲಾಕ್ ಪ್ರಧಾನ ಕಾರ್ಯದರ್ಶಿಯಾಗಿ ಸಂಜನಾ ಚಲವಾದಿ ಆಯ್ಕೆಯಾಗಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಂಜನಾ ಛಲವಾದಿ, ಯೂತ್ ಕಾಂಗ್ರೆಸ್ ದಕ್ಷಿಣ ಬ್ಲಾಕ್ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿರುವುದು ಸಂತೋಷ ತಂದಿದೆ. ಮಂಗಳಮುಖಿಯರೆಂದರೆ ಬೇಡಿ ಬದುಕುವವರು, ಲೈಂಗಿಕ ಕಾರ್ಯಕರ್ತರು ಎಂಬ ಭಾವನೆಯಿದೆ. ಅವರಿಗೆ ಯಾವ ಸ್ಥಾನಮಾನವೂ ಸಿಗುತ್ತಿಲ್ಲ ಎಂಬ ಬೇಸರ ಕಾಡುತ್ತಲೇ ಇತ್ತು. ನಾನು ಇದನ್ನೆಲ್ಲಾ ದಾಟಿ ಮುಂದೆ ಬರುತ್ತೇನೆಂಬ ಛಲದಿಂದ ಹೋರಾಟ ನಡೆಸಿದ್ದರ ಫಲವಾಗಿ ರಾಜಕೀಯದಲ್ಲಿ ಸ್ಥಾನ ದೊರಕಿದೆ. ನನ್ನ ಊರಲ್ಲಿ ದೊರಕದ ಗೌರವವನ್ನು ನನಗೆ ಮಂಗಳೂರಿಗರು ನೀಡಿದ್ದಾರೆ. ಇದಕ್ಕೆ ನಾನು ಆಭಾರಿಯಾಗಿದ್ದೇನೆ ಎಂದು ಸಂಜನಾ ಸಂತಸ ವ್ಯಕ್ತಪಡಿಸಿದ್ದಾರೆ.
ನನ್ನನ್ನು ಸೇರಿಸಿ ಮಂಗಳಮುಖಿಯರಿಗೆ ಉದ್ಯೋಗ ಹಾಗೂ ವಸತಿಯ ಅಭದ್ರತೆ ಕಾಡುತ್ತಿದ್ದು, ಸಮಾಜದಲ್ಲಿ ಎಲ್ಲರಂತೆ ಮಂಗಳಮುಖಿಯರಿಗೂ ಸಮಾನ ಅವಕಾಶ, ಸ್ಥಾನಮಾನ ದೊರೆಯುವಂತೆ ಹೋರಾಟ ಮಾಡುತ್ತೇನೆ ಎಂದು ಹೇಳಿದರು.
Congress gives position of Block Congress Secretary to Sanjana a Transgender which is first in Dakshina Kannada.
01-07-26 09:49 pm
HK News Desk
ದನ ಕೊಂದವರು ಜೈಲಿಗೆ, ಮನುಷ್ಯರನ್ನು ಕೊಂದವರು ಪ್ರಧಾನ...
29-06-26 10:33 pm
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
01-07-26 10:37 pm
HK News Desk
ಭಾರಿ ಮಳೆ ; ಜುಲೈ 2 ದಕ್ಷಿಣ ಕನ್ನಡ ಶಾಲೆ - ಕಾಲೇಜಿಗ...
01-07-26 09:58 pm
ನಾಗುರಿ ದುರಂತ ನಮಗೆಲ್ಲ ಎಚ್ಚರಿಕೆ ಕರೆಗಂಟೆ, ವಿಕೋಪಗ...
01-07-26 09:18 pm
Mangalore Garodi Landslide: ನಾಗುರಿ ದುರಂತ ; ಗು...
01-07-26 08:41 pm
ಕಡೆಗೂ ಮಳೆ ಬಿರುಸು ; ತೊಕ್ಕೊಟ್ಟಿನಲ್ಲಿ ಮನೆ ಮೇಲೆರ...
01-07-26 11:46 am
01-07-26 09:34 pm
HK News Desk
ಹೋಂ ಸ್ಟೇನಲ್ಲಿ ಯುವತಿ ನಿಗೂಢ ಸಾವು ; ನನ್ನ ಪ್ರಿಯತಮ...
01-07-26 06:52 pm
ಭಗ್ನ ಪ್ರೇಮಿಯಿಂದ ಕಾರು ಸ್ಫೋಟ ಕೇಸ್ ; ಕಚ್ಚಾ ಬಾಂಬ್...
01-07-26 04:51 pm
ಕಂಕನಾಡಿ ಗರೋಡಿಯಲ್ಲಿ ನಾಲ್ಕು ಬಾಡಿಗೆ ಮನೆಗಳಿದ್ದ ಕಟ...
01-07-26 08:59 am
Panambur Gold Robbery, Update: ಪಣಂಬೂರಿನಲ್ಲಿ ಚ...
30-06-26 11:02 pm