ಬ್ರೇಕಿಂಗ್ ನ್ಯೂಸ್
06-02-21 01:24 pm Mangalore Correspondent ಕರಾವಳಿ
ಮಂಗಳೂರು, ಫೆ.6 : ಯುವ ಕಾಂಗ್ರೆಸ್ ದಕ್ಷಿಣ ಬ್ಲಾಕ್ ಪ್ರಧಾನ ಕಾರ್ಯದರ್ಶಿಯಾಗಿ ಸಂಜನಾ ಛಲವಾದಿ ಆಯ್ಕೆಯಾಗಿದ್ದಾರೆ. ಈ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೊದಲ ಬಾರಿಗೆ ಮಂಗಳಮುಖಿ ಒಬ್ಬರಿಗೆ ರಾಜಕೀಯ ಪಕ್ಷದಲ್ಲಿ ಪದಾಧಿಕಾರಿ ಸ್ಥಾನ ದೊರಕಿದೆ.
ಮಂಗಳೂರಿನಲ್ಲಿ ಬ್ಯೂಟಿಷಿಯನ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಪರಿವರ್ತನ್ ಟ್ರಾನ್ಸ್ ಕ್ವೀನ್-2018 ಸಂಜನಾ ಚಲವಾದಿಯವರು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ನಡೆಸಿರುವ ಯುವ ಕಾಂಗ್ರೆಸ್ ಮಂಗಳೂರು ದಕ್ಷಿಣ ಬ್ಲಾಕ್ ಅಧ್ಯಕ್ಷ ಸ್ಥಾನದ ಚುನಾವಣೆಗೆ ಮಹಿಳಾ ವಿಭಾಗದಿಂದ ಸ್ಪರ್ಧಿಸಿದ್ದರು. ಜನವರಿ 10, 11 ಮತ್ತು 12 ರಂದು ಆನ್ಲೈನ್ ಮೂಲಕ ಮತದಾನ ನಡೆದಿದ್ದು, ಇದೀಗ ಫಲಿತಾಂಶ ಪ್ರಕಟಗೊಂಡಿದೆ. ಅಧ್ಯಕ್ಷರಾಗಿ ಶಿವ, ಉಪಾಧ್ಯಕ್ಷರಾಗಿ ಸೋಹನ್, ದೀಕ್ಷಿತ್ ಪೂಜಾರಿ ಮತ್ತು ದಕ್ಷಿಣ ಬ್ಲಾಕ್ ಪ್ರಧಾನ ಕಾರ್ಯದರ್ಶಿಯಾಗಿ ಸಂಜನಾ ಚಲವಾದಿ ಆಯ್ಕೆಯಾಗಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಂಜನಾ ಛಲವಾದಿ, ಯೂತ್ ಕಾಂಗ್ರೆಸ್ ದಕ್ಷಿಣ ಬ್ಲಾಕ್ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿರುವುದು ಸಂತೋಷ ತಂದಿದೆ. ಮಂಗಳಮುಖಿಯರೆಂದರೆ ಬೇಡಿ ಬದುಕುವವರು, ಲೈಂಗಿಕ ಕಾರ್ಯಕರ್ತರು ಎಂಬ ಭಾವನೆಯಿದೆ. ಅವರಿಗೆ ಯಾವ ಸ್ಥಾನಮಾನವೂ ಸಿಗುತ್ತಿಲ್ಲ ಎಂಬ ಬೇಸರ ಕಾಡುತ್ತಲೇ ಇತ್ತು. ನಾನು ಇದನ್ನೆಲ್ಲಾ ದಾಟಿ ಮುಂದೆ ಬರುತ್ತೇನೆಂಬ ಛಲದಿಂದ ಹೋರಾಟ ನಡೆಸಿದ್ದರ ಫಲವಾಗಿ ರಾಜಕೀಯದಲ್ಲಿ ಸ್ಥಾನ ದೊರಕಿದೆ. ನನ್ನ ಊರಲ್ಲಿ ದೊರಕದ ಗೌರವವನ್ನು ನನಗೆ ಮಂಗಳೂರಿಗರು ನೀಡಿದ್ದಾರೆ. ಇದಕ್ಕೆ ನಾನು ಆಭಾರಿಯಾಗಿದ್ದೇನೆ ಎಂದು ಸಂಜನಾ ಸಂತಸ ವ್ಯಕ್ತಪಡಿಸಿದ್ದಾರೆ.
ನನ್ನನ್ನು ಸೇರಿಸಿ ಮಂಗಳಮುಖಿಯರಿಗೆ ಉದ್ಯೋಗ ಹಾಗೂ ವಸತಿಯ ಅಭದ್ರತೆ ಕಾಡುತ್ತಿದ್ದು, ಸಮಾಜದಲ್ಲಿ ಎಲ್ಲರಂತೆ ಮಂಗಳಮುಖಿಯರಿಗೂ ಸಮಾನ ಅವಕಾಶ, ಸ್ಥಾನಮಾನ ದೊರೆಯುವಂತೆ ಹೋರಾಟ ಮಾಡುತ್ತೇನೆ ಎಂದು ಹೇಳಿದರು.
Congress gives position of Block Congress Secretary to Sanjana a Transgender which is first in Dakshina Kannada.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm