ಬ್ರೇಕಿಂಗ್ ನ್ಯೂಸ್
06-02-21 02:12 pm Mangalore Correspondent ಕರಾವಳಿ
ಮಂಗಳೂರು, ಫೆ. 6: ಬಿಜೆಪಿ ಮುಖಂಡ ಜಗದೀಶ ಅಧಿಕಾರಿ ಬಿಲ್ಲವರು ಮತ್ತು ಕೋಟಿ ಚೆನ್ನಯರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಆಡಿಯೋ ವೈರಲ್ ಆಗಿದ್ದು ಅಧಿಕಾರಿ ವಿರುದ್ಧ ಭಾರೀ ಆಕ್ರೋಶ ಕೇಳಿಬಂದಿದೆ. ಮೂಡುಬಿದ್ರಿಯ ಬಿಲ್ಲವ ಮುಖಂಡರು ಜಗದೀಶ ಅಧಿಕಾರಿ ವಿರುದ್ಧ ಪೊಲೀಸ್ ದೂರು ದಾಖಲಿಸಿದ್ದಾರೆ.
ಎರಡು ದಿನಗಳ ಹಿಂದೆ ಕಾರ್ಯಕ್ರಮ ಒಂದರಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಬಿ. ಜನಾರ್ಧನ ಪೂಜಾರಿ ಬಗ್ಗೆ ಅವಹೇಳನ ಆಗುವ ರೀತಿ ಮಾತನಾಡಿದ್ದರು. ಪಟ್ಟ ಆದವರ ಕಾಲು ಹಿಡಿಯುತ್ತೇನೆ, ಜನಾರ್ದನ ಪೂಜಾರಿ ಅವರ ಕಾಲು ಹಿಡಿಯುವುದಿಲ್ಲ ಎನ್ನುವ ಮೂಲಕ ಜಗದೀಶ್ ಅಧಿಕಾರಿ ಬಿಲ್ಲವರು ಮತ್ತು ಕಾಂಗ್ರೆಸ್ ಪ್ರಮುಖರ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಕುರಿತು ಸ್ಪಷ್ಟನೆ ಕೇಳಲು ಬಿಲ್ಲವ ಸಮುದಾಯ ಮುಖಂಡರೊಬ್ಬರು ಜಗದೀಶ ಅಧಿಕಾರಿಗೆ ಕರೆ ಮಾಡಿದ್ದರು.
ಮಾತುಕತೆ ಬಳಿಕ ಕರೆ ಕಟ್ ಮಾಡದೆ, ತನ್ನ ಒಟ್ಟಿಗೆ ಇದ್ದವರ ಜೊತೆ ಜಗದೀಶ್ ಅಧಿಕಾರಿ ಬಿಲ್ಲವ ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಇದು ಫೋನ್ನಲ್ಲಿ ರೆಕಾರ್ಡ್ ಆಗಿದ್ದು ಅದೀಗ ವೈರಲ್ ಆಗಿದೆ. ಬಿಲ್ಲವರನ್ನು ಯಾವತ್ತೂ ನಂಬುವಂತಿಲ್ಲ. ಅವರಿಗಿಂತ ಬ್ಯಾರಿಗಳನ್ನು ನಂಬಬಹುದು. ಕೋಟಿ ಚೆನ್ನಯರು ಕೂಡ ಪೆರ್ಮಲೆ ಬಲ್ಲಾಳರಿಗೆ ಅನ್ಯಾಯ ಮಾಡಿದರು. ಮತ್ತೊಂದು ರಾಜನಲ್ಲಿಗೆ ಹೋಗಿ ಅಲ್ಲಿಯ ಮಂತ್ರಿಯನ್ನು ಕೊಂದರು. ಇನ್ನೊಂದು ಕಡೆ ಹೋಗಿ ಅಲ್ಲಿಯ ರಾಜನನ್ನೇ ಸೋಲಿಸಿದರು.
ಕೊನೆಗೆ ಆಸುಪಾಸಿನ ಎಲ್ಲ ರಾಜರು ಸೇರಿ ಕೋಟಿ ಚೆನ್ನಯರನ್ನು ಕೊಲ್ಲುತ್ತಾರೆ. ಆಗಲೂ ಕೋಟಿ ಚೆನ್ನಯರು ಒಳ್ಳೆದು ಮಾಡಿಲ್ಲ. ಅವರ ಸಂತಾನದವರೂ ಅಷ್ಟೇ. ಜನಾರ್ದನ ಪೂಜಾರಿಯ ಕಾಲಿಗೆ ಬೀಳುವುದು ಯಾಕೆ ? ನಂಗೇನು ಅಂಥ ಗತಿ ಬಂದಿದೆ ಎಂದು ಬಿಲ್ಲವರ ಬಗ್ಗೆ ಮೂದಲಿಸಿ ಮಾತನಾಡಿದ್ದ ಆಡಿಯೋ ಈಗ ವೈರಲ್ ಆಗಿದ್ದು ಬಿಲ್ಲವ ಸಮುದಾಯದ ಮುಖಂಡರು ಬಿಜೆಪಿ ಮುಖಂಡನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Leaders of different units of Moodbidri Billawa Sangha, on Friday, February 5, filed a complaint at Moodbidri police station against BJP leader Jagadish Adhikari.
06-10-25 10:47 pm
Bangalore Correspondent
ಕಫ್ ಸಿರಪ್ ದುರಂತ ; ರಾಜ್ಯದಲ್ಲಿ ಕಟ್ಟೆಚ್ಚರ, ಎಲ್ಲ...
06-10-25 05:27 pm
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
07-10-25 01:53 pm
HK News Desk
ಮೊಘಲ್ ಆಕ್ರಮಣದಿಂದ ವಿಷ್ಣು ಮೂರ್ತಿ ಭಗ್ನ ; ಪ್ರತಿಮೆ...
06-10-25 07:56 pm
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
07-10-25 03:33 pm
Mangalore Correspondent
Madhu Bangarappa: ರಾಜ್ಯದಲ್ಲಿ 18,500ಕ್ಕೂ ಅಧಿಕ...
06-10-25 10:42 pm
ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ...
06-10-25 07:19 pm
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಹೃದ್ರೋಗ...
06-10-25 04:57 pm
ಟ್ರಾಫಿಕ್ ಸಿಬಂದಿ ಕಾರು ನಿಲ್ಲಿಸಲೆತ್ನಿಸಿ ಒಡೆದ ಗಾಜ...
06-10-25 02:58 pm
07-10-25 10:31 am
HK News Desk
Kali Yogish, Arrest, Mangalore: ಮಂಗಳೂರು, ಮೈಸೂ...
05-10-25 03:22 pm
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm