ಬ್ರೇಕಿಂಗ್ ನ್ಯೂಸ್
06-02-21 02:12 pm Mangalore Correspondent ಕರಾವಳಿ
ಮಂಗಳೂರು, ಫೆ. 6: ಬಿಜೆಪಿ ಮುಖಂಡ ಜಗದೀಶ ಅಧಿಕಾರಿ ಬಿಲ್ಲವರು ಮತ್ತು ಕೋಟಿ ಚೆನ್ನಯರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಆಡಿಯೋ ವೈರಲ್ ಆಗಿದ್ದು ಅಧಿಕಾರಿ ವಿರುದ್ಧ ಭಾರೀ ಆಕ್ರೋಶ ಕೇಳಿಬಂದಿದೆ. ಮೂಡುಬಿದ್ರಿಯ ಬಿಲ್ಲವ ಮುಖಂಡರು ಜಗದೀಶ ಅಧಿಕಾರಿ ವಿರುದ್ಧ ಪೊಲೀಸ್ ದೂರು ದಾಖಲಿಸಿದ್ದಾರೆ.
ಎರಡು ದಿನಗಳ ಹಿಂದೆ ಕಾರ್ಯಕ್ರಮ ಒಂದರಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಬಿ. ಜನಾರ್ಧನ ಪೂಜಾರಿ ಬಗ್ಗೆ ಅವಹೇಳನ ಆಗುವ ರೀತಿ ಮಾತನಾಡಿದ್ದರು. ಪಟ್ಟ ಆದವರ ಕಾಲು ಹಿಡಿಯುತ್ತೇನೆ, ಜನಾರ್ದನ ಪೂಜಾರಿ ಅವರ ಕಾಲು ಹಿಡಿಯುವುದಿಲ್ಲ ಎನ್ನುವ ಮೂಲಕ ಜಗದೀಶ್ ಅಧಿಕಾರಿ ಬಿಲ್ಲವರು ಮತ್ತು ಕಾಂಗ್ರೆಸ್ ಪ್ರಮುಖರ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಕುರಿತು ಸ್ಪಷ್ಟನೆ ಕೇಳಲು ಬಿಲ್ಲವ ಸಮುದಾಯ ಮುಖಂಡರೊಬ್ಬರು ಜಗದೀಶ ಅಧಿಕಾರಿಗೆ ಕರೆ ಮಾಡಿದ್ದರು.

ಮಾತುಕತೆ ಬಳಿಕ ಕರೆ ಕಟ್ ಮಾಡದೆ, ತನ್ನ ಒಟ್ಟಿಗೆ ಇದ್ದವರ ಜೊತೆ ಜಗದೀಶ್ ಅಧಿಕಾರಿ ಬಿಲ್ಲವ ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಇದು ಫೋನ್ನಲ್ಲಿ ರೆಕಾರ್ಡ್ ಆಗಿದ್ದು ಅದೀಗ ವೈರಲ್ ಆಗಿದೆ. ಬಿಲ್ಲವರನ್ನು ಯಾವತ್ತೂ ನಂಬುವಂತಿಲ್ಲ. ಅವರಿಗಿಂತ ಬ್ಯಾರಿಗಳನ್ನು ನಂಬಬಹುದು. ಕೋಟಿ ಚೆನ್ನಯರು ಕೂಡ ಪೆರ್ಮಲೆ ಬಲ್ಲಾಳರಿಗೆ ಅನ್ಯಾಯ ಮಾಡಿದರು. ಮತ್ತೊಂದು ರಾಜನಲ್ಲಿಗೆ ಹೋಗಿ ಅಲ್ಲಿಯ ಮಂತ್ರಿಯನ್ನು ಕೊಂದರು. ಇನ್ನೊಂದು ಕಡೆ ಹೋಗಿ ಅಲ್ಲಿಯ ರಾಜನನ್ನೇ ಸೋಲಿಸಿದರು.
ಕೊನೆಗೆ ಆಸುಪಾಸಿನ ಎಲ್ಲ ರಾಜರು ಸೇರಿ ಕೋಟಿ ಚೆನ್ನಯರನ್ನು ಕೊಲ್ಲುತ್ತಾರೆ. ಆಗಲೂ ಕೋಟಿ ಚೆನ್ನಯರು ಒಳ್ಳೆದು ಮಾಡಿಲ್ಲ. ಅವರ ಸಂತಾನದವರೂ ಅಷ್ಟೇ. ಜನಾರ್ದನ ಪೂಜಾರಿಯ ಕಾಲಿಗೆ ಬೀಳುವುದು ಯಾಕೆ ? ನಂಗೇನು ಅಂಥ ಗತಿ ಬಂದಿದೆ ಎಂದು ಬಿಲ್ಲವರ ಬಗ್ಗೆ ಮೂದಲಿಸಿ ಮಾತನಾಡಿದ್ದ ಆಡಿಯೋ ಈಗ ವೈರಲ್ ಆಗಿದ್ದು ಬಿಲ್ಲವ ಸಮುದಾಯದ ಮುಖಂಡರು ಬಿಜೆಪಿ ಮುಖಂಡನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Leaders of different units of Moodbidri Billawa Sangha, on Friday, February 5, filed a complaint at Moodbidri police station against BJP leader Jagadish Adhikari.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
08-02-26 10:18 pm
HK News Desk
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
08-02-26 11:17 pm
HK News Desk
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm