ಬ್ರೇಕಿಂಗ್ ನ್ಯೂಸ್
06-02-21 04:39 pm Mangalore Correspondent ಕರಾವಳಿ
ಮಂಗಳೂರು, ಫೆ.6: ಕಂಬಳ ಕರಾವಳಿಯ ಜನಪದ ಕ್ರೀಡೆ. ಆದರೆ, ಕಂಬಳ ಬರೀಯ ಕ್ರೀಡೆಯಾಗಿ ಉಳಿಯಬಾರದು. ಅದು ನಮ್ಮ ತುಳುನಾಡಿನ ಸಂಸ್ಕೃತಿಯನ್ನು ಬಿಂಬಿಸುವ ಉತ್ಸವ ಆಗಬೇಕು. ಮಂಗಳೂರಿಗೆ ಟೂರಿಸಂ ಆಕರ್ಷಿಸುವ ನೆಲೆಯಲ್ಲಿ ಕಂಬಳವನ್ನು ಉತ್ಸವದ ನೆಲೆಯಲ್ಲಿ ನಡೆಸಬೇಕು ಎಂದು ಬಿಜೆಪಿ ರಾಜ್ಯ ವಕ್ತಾರ ಗಣೇಶ್ ಕಾರ್ಣಿಕ್ ಹೇಳಿದ್ದಾರೆ.
ನಗರದ ಪತ್ತುಮುಡಿ ಸೌಧದಲ್ಲಿ 4ನೇ ವರ್ಷದ ಮಂಗಳೂರು ಕಂಬಳದ ಪೂರ್ವಭಾವಿ ಸಭೆಯು ಸಮಿತಿ ಅಧ್ಯಕ್ಷರಾದ ಕ್ಯಾ.ಬೃಜೇಶ್ ಚೌಚ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಮಂಗಳೂರು ಕಂಬಳದ ಬಗ್ಗೆ ಮಾತನಾಡಿದ ಕ್ಯಾ.ಕಾರ್ಣಿಕ್, ಮಂಗಳೂರು ನಗರದಲ್ಲಿ ನಡೆಯುತ್ತಿರುವ ಏಕೈಕ ಕಂಬಳ ಇದಾಗಿದ್ದು, ನಗರ ವ್ಯಾಪ್ತಿಯ ಜನರ ಪಾಲಿಗೆ ಇದು ತುಳುವರ ಉತ್ಸವದ ರೀತಿ ನಡೆಯಬೇಕು. ಕಂಬಳದ ಜೊತೆಗೆ ತುಳುನಾಡಿನ ಸಂಸ್ಕೃತಿ, ಪರಂಪರೆ ಬಿಂಬಿಸುವ ಪ್ರದರ್ಶನಗಳು, ಸ್ಪರ್ಧೆಗಳನ್ನು ಹಮ್ಮಿಕೊಂಡರೆ ಎಲ್ಲ ರೀತಿಯ ವಯೋಮಾನದ ಜನರು ಭಾಗವಹಿಸಲು ಪ್ರೇರಣೆ ಸಿಗುತ್ತದೆ. ಜೊತೆಗೆ, ಕಂಬಳವೂ ಆಕರ್ಷಣೆ ಪಡೆಯುತ್ತದೆ. ಟೂರಿಸಂ ಆಕರ್ಷಿಸುವ ನೆಲೆಯಲ್ಲಿ ಇಂತಹ ಉತ್ಸವಗಳು ಆಯೋಜನೆ ಆಗಬೇಕು ಎಂದು ಹೇಳಿದರು.

ಸಭೆಯಲ್ಲಿ ಉಪಸ್ಥಿತರಿದ್ದ ಜಿಲ್ಲಾ ಕಂಬಳ ಸಮಿತಿಯ ಅಧ್ಯಕ್ಷ ಪಿ.ಆರ್. ಶೆಟ್ಟಿ ಪೊಯ್ಯೇಲು ಮಾತನಾಡಿ, ಕಳೆದ ಬಾರಿ ಕಂಬಳಕ್ಕೆ ನಿಷೇಧದ ತೂಗುಗತ್ತಿ ಬಂದಾಗ ಜಿಲ್ಲೆಯ ರಾಜಕಾರಣಿಗಳು ಪಕ್ಷ ಭೇದ ಮರೆತು ಬೆಂಬಲ ನೀಡಿದ್ದರು. ಗಣೇಶ್ ಕಾರ್ಣಿಕ್, ಸದಾನಂದ ಗೌಡ ಸೇರಿದಂತೆ ಕಾಂಗ್ರೆಸ್, ಬಿಜೆಪಿ ಮುಖಂಡರು ಸಹಕಾರ ನೀಡಿದ್ದರು. ಈ ಬಾರಿಯೂ ಕೋವಿಡ್ ಕಾರಣದಿಂದ ಕಂಬಳ ಅಸಾಧ್ಯ ಎನ್ನುವಾಗ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿ, ಕಂಬಳ ನಡೆಯುವಂತಾಗಲು ಸಹಕಾರ ನೀಡಿದ್ದಾರೆ ಎಂದರು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಮಂಗಳೂರು ಕಂಬಳ ಸಮಿತಿ ಅಧ್ಯಕ್ಷ ಕ್ಯಾ. ಬೃಜೇಶ್ ಚೌಟ ಮಾತನಾಡಿ, ಮಂಗಳೂರು ಕಂಬಳವನ್ನು ಸಿಗ್ನೇಚಟ್ ಈವೆಂಟ್ ಆಗಿ ಪರಿವರ್ತಿಸಲು ಎಲ್ಲರ ಸಹಕಾರವೂ ಬೇಕು. ಕಂಬಳ ಅಭಿಮಾನಿಗಳ ಜೊತೆಗೆ ಸರಕಾರ, ಸಾರ್ವಜನಿಕರು, ವಿವಿಧ ಸಂಘಟನೆಗಳ ಬೆಂಬಲ ಬೇಕಾಗುತ್ತದೆ. ಮುಂದಿನ ದಿನಗಳಲ್ಲಿ ಮಂಗಳೂರು ಕಂಬಳವನ್ನು ಸಾಂಸ್ಕೃತಿಕ ಉತ್ಸವದ ರೂಪದಲ್ಲಿ ನಡೆಸಲು ಚಿಂತನೆ ನಡೆಸುತ್ತೇವೆ ಎಂದು ಹೇಳಿದರು.

ಸಭೆಯಲ್ಲಿ ಜಿಲ್ಲಾ ಕಂಬಳ ಸಮಿತಿಯ ಪ್ರಧಾನ ಕಾರ್ಯದರ್ಶಿ ವಿಜಯಕುಮಾರ್ ಕಂಗಿನಮನೆ, ಭಾರತ ಸರಕಾರದ ಸಾಮಾಜಿಕ ಹಕ್ಕು ಸಚಿವಾಲಯದ ಸದಸ್ಯರಾದ ಭಾಸ್ಕರದಾಸ್ ಎಕ್ಕಾರು, ಕರ್ನಾಟಕ ಕ್ರೈಸ್ತ ನಿಗಮದ ಅಧ್ಯಕ್ಷರಾದ ಜೋಯಲ್ ಡಿಸೋಜ, ಮಂಗಳೂರು ಮಹಾನಗರ ಪಾಲಿಕೆ ಸದಸ್ಯರಾದ ರಾಧಾಕೃಷ್ಣ , ಕಿರಣ್ ಕುಮಾರ್ ಕೋಡಿಕಲ್, ಸಂದೀಪ್ ಗರೋಡಿ, ಭರತ್ ಕುಮಾರ್, ಕಂಬಳ ಸಮಿತಿಯ ಕಾರ್ಯಾಧ್ಯಕ್ಷ ನಂದನ್ ಮಲ್ಯ, ಪ್ರಧಾನ ಕಾರ್ಯದರ್ಶಿ ಸುಜಿತ್ ಪ್ರತಾಪ್, ಸಂಚಾಲಕ ಸಚಿನ್ ಶೆಟ್ಟಿ, ಖಜಾಂಚಿ ಪ್ರೀತಮ್ ರೈ, ಸಮಿತಿ ಸದಸ್ಯರು ಉಪಸ್ಥಿತರಿದ್ದರು.
05-03-26 11:42 pm
HK News Desk
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
05-03-26 08:51 pm
HK News Staffer
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
05-03-26 07:38 pm
HK News Staffer
ಸಾಕ್ಷಿಗಳು ಬರ್ತಾರೆ, ಹೋಗ್ತಾರೆ.. ಧರ್ಮಸ್ಥಳದಲ್ಲಿ ಹ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm