ಬ್ರೇಕಿಂಗ್ ನ್ಯೂಸ್
06-02-21 04:39 pm Mangalore Correspondent ಕರಾವಳಿ
ಮಂಗಳೂರು, ಫೆ.6: ಕಂಬಳ ಕರಾವಳಿಯ ಜನಪದ ಕ್ರೀಡೆ. ಆದರೆ, ಕಂಬಳ ಬರೀಯ ಕ್ರೀಡೆಯಾಗಿ ಉಳಿಯಬಾರದು. ಅದು ನಮ್ಮ ತುಳುನಾಡಿನ ಸಂಸ್ಕೃತಿಯನ್ನು ಬಿಂಬಿಸುವ ಉತ್ಸವ ಆಗಬೇಕು. ಮಂಗಳೂರಿಗೆ ಟೂರಿಸಂ ಆಕರ್ಷಿಸುವ ನೆಲೆಯಲ್ಲಿ ಕಂಬಳವನ್ನು ಉತ್ಸವದ ನೆಲೆಯಲ್ಲಿ ನಡೆಸಬೇಕು ಎಂದು ಬಿಜೆಪಿ ರಾಜ್ಯ ವಕ್ತಾರ ಗಣೇಶ್ ಕಾರ್ಣಿಕ್ ಹೇಳಿದ್ದಾರೆ.
ನಗರದ ಪತ್ತುಮುಡಿ ಸೌಧದಲ್ಲಿ 4ನೇ ವರ್ಷದ ಮಂಗಳೂರು ಕಂಬಳದ ಪೂರ್ವಭಾವಿ ಸಭೆಯು ಸಮಿತಿ ಅಧ್ಯಕ್ಷರಾದ ಕ್ಯಾ.ಬೃಜೇಶ್ ಚೌಚ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಮಂಗಳೂರು ಕಂಬಳದ ಬಗ್ಗೆ ಮಾತನಾಡಿದ ಕ್ಯಾ.ಕಾರ್ಣಿಕ್, ಮಂಗಳೂರು ನಗರದಲ್ಲಿ ನಡೆಯುತ್ತಿರುವ ಏಕೈಕ ಕಂಬಳ ಇದಾಗಿದ್ದು, ನಗರ ವ್ಯಾಪ್ತಿಯ ಜನರ ಪಾಲಿಗೆ ಇದು ತುಳುವರ ಉತ್ಸವದ ರೀತಿ ನಡೆಯಬೇಕು. ಕಂಬಳದ ಜೊತೆಗೆ ತುಳುನಾಡಿನ ಸಂಸ್ಕೃತಿ, ಪರಂಪರೆ ಬಿಂಬಿಸುವ ಪ್ರದರ್ಶನಗಳು, ಸ್ಪರ್ಧೆಗಳನ್ನು ಹಮ್ಮಿಕೊಂಡರೆ ಎಲ್ಲ ರೀತಿಯ ವಯೋಮಾನದ ಜನರು ಭಾಗವಹಿಸಲು ಪ್ರೇರಣೆ ಸಿಗುತ್ತದೆ. ಜೊತೆಗೆ, ಕಂಬಳವೂ ಆಕರ್ಷಣೆ ಪಡೆಯುತ್ತದೆ. ಟೂರಿಸಂ ಆಕರ್ಷಿಸುವ ನೆಲೆಯಲ್ಲಿ ಇಂತಹ ಉತ್ಸವಗಳು ಆಯೋಜನೆ ಆಗಬೇಕು ಎಂದು ಹೇಳಿದರು.

ಸಭೆಯಲ್ಲಿ ಉಪಸ್ಥಿತರಿದ್ದ ಜಿಲ್ಲಾ ಕಂಬಳ ಸಮಿತಿಯ ಅಧ್ಯಕ್ಷ ಪಿ.ಆರ್. ಶೆಟ್ಟಿ ಪೊಯ್ಯೇಲು ಮಾತನಾಡಿ, ಕಳೆದ ಬಾರಿ ಕಂಬಳಕ್ಕೆ ನಿಷೇಧದ ತೂಗುಗತ್ತಿ ಬಂದಾಗ ಜಿಲ್ಲೆಯ ರಾಜಕಾರಣಿಗಳು ಪಕ್ಷ ಭೇದ ಮರೆತು ಬೆಂಬಲ ನೀಡಿದ್ದರು. ಗಣೇಶ್ ಕಾರ್ಣಿಕ್, ಸದಾನಂದ ಗೌಡ ಸೇರಿದಂತೆ ಕಾಂಗ್ರೆಸ್, ಬಿಜೆಪಿ ಮುಖಂಡರು ಸಹಕಾರ ನೀಡಿದ್ದರು. ಈ ಬಾರಿಯೂ ಕೋವಿಡ್ ಕಾರಣದಿಂದ ಕಂಬಳ ಅಸಾಧ್ಯ ಎನ್ನುವಾಗ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿ, ಕಂಬಳ ನಡೆಯುವಂತಾಗಲು ಸಹಕಾರ ನೀಡಿದ್ದಾರೆ ಎಂದರು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಮಂಗಳೂರು ಕಂಬಳ ಸಮಿತಿ ಅಧ್ಯಕ್ಷ ಕ್ಯಾ. ಬೃಜೇಶ್ ಚೌಟ ಮಾತನಾಡಿ, ಮಂಗಳೂರು ಕಂಬಳವನ್ನು ಸಿಗ್ನೇಚಟ್ ಈವೆಂಟ್ ಆಗಿ ಪರಿವರ್ತಿಸಲು ಎಲ್ಲರ ಸಹಕಾರವೂ ಬೇಕು. ಕಂಬಳ ಅಭಿಮಾನಿಗಳ ಜೊತೆಗೆ ಸರಕಾರ, ಸಾರ್ವಜನಿಕರು, ವಿವಿಧ ಸಂಘಟನೆಗಳ ಬೆಂಬಲ ಬೇಕಾಗುತ್ತದೆ. ಮುಂದಿನ ದಿನಗಳಲ್ಲಿ ಮಂಗಳೂರು ಕಂಬಳವನ್ನು ಸಾಂಸ್ಕೃತಿಕ ಉತ್ಸವದ ರೂಪದಲ್ಲಿ ನಡೆಸಲು ಚಿಂತನೆ ನಡೆಸುತ್ತೇವೆ ಎಂದು ಹೇಳಿದರು.

ಸಭೆಯಲ್ಲಿ ಜಿಲ್ಲಾ ಕಂಬಳ ಸಮಿತಿಯ ಪ್ರಧಾನ ಕಾರ್ಯದರ್ಶಿ ವಿಜಯಕುಮಾರ್ ಕಂಗಿನಮನೆ, ಭಾರತ ಸರಕಾರದ ಸಾಮಾಜಿಕ ಹಕ್ಕು ಸಚಿವಾಲಯದ ಸದಸ್ಯರಾದ ಭಾಸ್ಕರದಾಸ್ ಎಕ್ಕಾರು, ಕರ್ನಾಟಕ ಕ್ರೈಸ್ತ ನಿಗಮದ ಅಧ್ಯಕ್ಷರಾದ ಜೋಯಲ್ ಡಿಸೋಜ, ಮಂಗಳೂರು ಮಹಾನಗರ ಪಾಲಿಕೆ ಸದಸ್ಯರಾದ ರಾಧಾಕೃಷ್ಣ , ಕಿರಣ್ ಕುಮಾರ್ ಕೋಡಿಕಲ್, ಸಂದೀಪ್ ಗರೋಡಿ, ಭರತ್ ಕುಮಾರ್, ಕಂಬಳ ಸಮಿತಿಯ ಕಾರ್ಯಾಧ್ಯಕ್ಷ ನಂದನ್ ಮಲ್ಯ, ಪ್ರಧಾನ ಕಾರ್ಯದರ್ಶಿ ಸುಜಿತ್ ಪ್ರತಾಪ್, ಸಂಚಾಲಕ ಸಚಿನ್ ಶೆಟ್ಟಿ, ಖಜಾಂಚಿ ಪ್ರೀತಮ್ ರೈ, ಸಮಿತಿ ಸದಸ್ಯರು ಉಪಸ್ಥಿತರಿದ್ದರು.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm