ಬ್ರೇಕಿಂಗ್ ನ್ಯೂಸ್
06-02-21 04:39 pm Mangalore Correspondent ಕರಾವಳಿ
ಮಂಗಳೂರು, ಫೆ.6: ಕಂಬಳ ಕರಾವಳಿಯ ಜನಪದ ಕ್ರೀಡೆ. ಆದರೆ, ಕಂಬಳ ಬರೀಯ ಕ್ರೀಡೆಯಾಗಿ ಉಳಿಯಬಾರದು. ಅದು ನಮ್ಮ ತುಳುನಾಡಿನ ಸಂಸ್ಕೃತಿಯನ್ನು ಬಿಂಬಿಸುವ ಉತ್ಸವ ಆಗಬೇಕು. ಮಂಗಳೂರಿಗೆ ಟೂರಿಸಂ ಆಕರ್ಷಿಸುವ ನೆಲೆಯಲ್ಲಿ ಕಂಬಳವನ್ನು ಉತ್ಸವದ ನೆಲೆಯಲ್ಲಿ ನಡೆಸಬೇಕು ಎಂದು ಬಿಜೆಪಿ ರಾಜ್ಯ ವಕ್ತಾರ ಗಣೇಶ್ ಕಾರ್ಣಿಕ್ ಹೇಳಿದ್ದಾರೆ.
ನಗರದ ಪತ್ತುಮುಡಿ ಸೌಧದಲ್ಲಿ 4ನೇ ವರ್ಷದ ಮಂಗಳೂರು ಕಂಬಳದ ಪೂರ್ವಭಾವಿ ಸಭೆಯು ಸಮಿತಿ ಅಧ್ಯಕ್ಷರಾದ ಕ್ಯಾ.ಬೃಜೇಶ್ ಚೌಚ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಮಂಗಳೂರು ಕಂಬಳದ ಬಗ್ಗೆ ಮಾತನಾಡಿದ ಕ್ಯಾ.ಕಾರ್ಣಿಕ್, ಮಂಗಳೂರು ನಗರದಲ್ಲಿ ನಡೆಯುತ್ತಿರುವ ಏಕೈಕ ಕಂಬಳ ಇದಾಗಿದ್ದು, ನಗರ ವ್ಯಾಪ್ತಿಯ ಜನರ ಪಾಲಿಗೆ ಇದು ತುಳುವರ ಉತ್ಸವದ ರೀತಿ ನಡೆಯಬೇಕು. ಕಂಬಳದ ಜೊತೆಗೆ ತುಳುನಾಡಿನ ಸಂಸ್ಕೃತಿ, ಪರಂಪರೆ ಬಿಂಬಿಸುವ ಪ್ರದರ್ಶನಗಳು, ಸ್ಪರ್ಧೆಗಳನ್ನು ಹಮ್ಮಿಕೊಂಡರೆ ಎಲ್ಲ ರೀತಿಯ ವಯೋಮಾನದ ಜನರು ಭಾಗವಹಿಸಲು ಪ್ರೇರಣೆ ಸಿಗುತ್ತದೆ. ಜೊತೆಗೆ, ಕಂಬಳವೂ ಆಕರ್ಷಣೆ ಪಡೆಯುತ್ತದೆ. ಟೂರಿಸಂ ಆಕರ್ಷಿಸುವ ನೆಲೆಯಲ್ಲಿ ಇಂತಹ ಉತ್ಸವಗಳು ಆಯೋಜನೆ ಆಗಬೇಕು ಎಂದು ಹೇಳಿದರು.

ಸಭೆಯಲ್ಲಿ ಉಪಸ್ಥಿತರಿದ್ದ ಜಿಲ್ಲಾ ಕಂಬಳ ಸಮಿತಿಯ ಅಧ್ಯಕ್ಷ ಪಿ.ಆರ್. ಶೆಟ್ಟಿ ಪೊಯ್ಯೇಲು ಮಾತನಾಡಿ, ಕಳೆದ ಬಾರಿ ಕಂಬಳಕ್ಕೆ ನಿಷೇಧದ ತೂಗುಗತ್ತಿ ಬಂದಾಗ ಜಿಲ್ಲೆಯ ರಾಜಕಾರಣಿಗಳು ಪಕ್ಷ ಭೇದ ಮರೆತು ಬೆಂಬಲ ನೀಡಿದ್ದರು. ಗಣೇಶ್ ಕಾರ್ಣಿಕ್, ಸದಾನಂದ ಗೌಡ ಸೇರಿದಂತೆ ಕಾಂಗ್ರೆಸ್, ಬಿಜೆಪಿ ಮುಖಂಡರು ಸಹಕಾರ ನೀಡಿದ್ದರು. ಈ ಬಾರಿಯೂ ಕೋವಿಡ್ ಕಾರಣದಿಂದ ಕಂಬಳ ಅಸಾಧ್ಯ ಎನ್ನುವಾಗ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿ, ಕಂಬಳ ನಡೆಯುವಂತಾಗಲು ಸಹಕಾರ ನೀಡಿದ್ದಾರೆ ಎಂದರು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಮಂಗಳೂರು ಕಂಬಳ ಸಮಿತಿ ಅಧ್ಯಕ್ಷ ಕ್ಯಾ. ಬೃಜೇಶ್ ಚೌಟ ಮಾತನಾಡಿ, ಮಂಗಳೂರು ಕಂಬಳವನ್ನು ಸಿಗ್ನೇಚಟ್ ಈವೆಂಟ್ ಆಗಿ ಪರಿವರ್ತಿಸಲು ಎಲ್ಲರ ಸಹಕಾರವೂ ಬೇಕು. ಕಂಬಳ ಅಭಿಮಾನಿಗಳ ಜೊತೆಗೆ ಸರಕಾರ, ಸಾರ್ವಜನಿಕರು, ವಿವಿಧ ಸಂಘಟನೆಗಳ ಬೆಂಬಲ ಬೇಕಾಗುತ್ತದೆ. ಮುಂದಿನ ದಿನಗಳಲ್ಲಿ ಮಂಗಳೂರು ಕಂಬಳವನ್ನು ಸಾಂಸ್ಕೃತಿಕ ಉತ್ಸವದ ರೂಪದಲ್ಲಿ ನಡೆಸಲು ಚಿಂತನೆ ನಡೆಸುತ್ತೇವೆ ಎಂದು ಹೇಳಿದರು.

ಸಭೆಯಲ್ಲಿ ಜಿಲ್ಲಾ ಕಂಬಳ ಸಮಿತಿಯ ಪ್ರಧಾನ ಕಾರ್ಯದರ್ಶಿ ವಿಜಯಕುಮಾರ್ ಕಂಗಿನಮನೆ, ಭಾರತ ಸರಕಾರದ ಸಾಮಾಜಿಕ ಹಕ್ಕು ಸಚಿವಾಲಯದ ಸದಸ್ಯರಾದ ಭಾಸ್ಕರದಾಸ್ ಎಕ್ಕಾರು, ಕರ್ನಾಟಕ ಕ್ರೈಸ್ತ ನಿಗಮದ ಅಧ್ಯಕ್ಷರಾದ ಜೋಯಲ್ ಡಿಸೋಜ, ಮಂಗಳೂರು ಮಹಾನಗರ ಪಾಲಿಕೆ ಸದಸ್ಯರಾದ ರಾಧಾಕೃಷ್ಣ , ಕಿರಣ್ ಕುಮಾರ್ ಕೋಡಿಕಲ್, ಸಂದೀಪ್ ಗರೋಡಿ, ಭರತ್ ಕುಮಾರ್, ಕಂಬಳ ಸಮಿತಿಯ ಕಾರ್ಯಾಧ್ಯಕ್ಷ ನಂದನ್ ಮಲ್ಯ, ಪ್ರಧಾನ ಕಾರ್ಯದರ್ಶಿ ಸುಜಿತ್ ಪ್ರತಾಪ್, ಸಂಚಾಲಕ ಸಚಿನ್ ಶೆಟ್ಟಿ, ಖಜಾಂಚಿ ಪ್ರೀತಮ್ ರೈ, ಸಮಿತಿ ಸದಸ್ಯರು ಉಪಸ್ಥಿತರಿದ್ದರು.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm