ಬ್ರೇಕಿಂಗ್ ನ್ಯೂಸ್
06-02-21 04:55 pm Mangalore Correspondent ಕರಾವಳಿ
ಮಂಗಳೂರು, ಫೆ.6: ಭಾರತ ಹಿಂದು ರಾಷ್ಟ್ರವೆಂದು ಘೋಷಣೆಯಾಗಬೇಕು ಅನ್ನೋದು ನಮ್ಮ ಹಳೆಯ ಬೇಡಿಕೆ. ಈಗ ಹೊಸತಾಗಿ ನಿರ್ಮಾಣಗೊಳ್ಳುತ್ತಿರುವ ಪ್ರಜಾಪ್ರಭುತ್ವದ ದೇಗುಲವಾಗಿರುವ ಸಂಸತ್ ಭವನಕ್ಕೆ ಹಿಂದು ರಾಷ್ಟ್ರ ಭವನ ಎಂದು ಹೆಸರಿಡಬೇಕೆಂದು ಅಖಿಲ ಭಾರತ ಹಿಂದು ಮಹಾಸಭಾ ಆಗ್ರಹಿಸಿದೆ.
ಮಂಗಳೂರಿನ ಆರ್ಯ ಸಮಾಜದಲ್ಲಿ ಸುದ್ದಿಗೋಷ್ಠಿ ನಡೆಸಿದ ಅಖಿಲ ಭಾರತ ಹಿಂದು ಮಹಾಸಭಾ ದಕ್ಷಿಣ ಭಾರತ ವಲಯ ಕಾರ್ಯದರ್ಶಿ ಶ್ರೀ ಸ್ವಾಮಿ ದತ್ತಾತ್ರೇಯ ಸ್ವಾಮಿ ಸ್ವರೂಪನಾಥ, ಹಿಂದು ರಾಷ್ಟ್ರ ಭವನ ಎಂದು ಹೆಸರಿಡಲು ಒತ್ತಾಯಿಸಿ ಈಗಾಗ್ಲೇ ಸಹಿ ಸಂಗ್ರಹ ಆರಂಭಿಸಲಾಗಿದೆ. ಫೆ.7ರಂದು ಚಿಕ್ಕಮಗಳೂರಿನಲ್ಲಿ ರಾಜ್ಯದಲ್ಲಿ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಲಾಗುವುದು ಎಂದು ಹೇಳಿದರು.
ಹಿಂದು ವಿರೋಧಿ ಹೇಳಿಕೆ ನೀಡುತ್ತಿದ್ದ ಸಾಹಿತಿ ಭಗವಾನ್ ಮುಖಕ್ಕೆ ಮಸಿ ಬಳಿದ ಪ್ರಕರಣದಲ್ಲಿ ವಕೀಲೆ ಮೀರಾ ರಾಘವೇಂದ್ರ ಅವರನ್ನು ಅಭಿನಂದಿಸುವುದಾಗಿ ಹೇಳಿದ ಅವರು, ಈ ಬಗ್ಗೆ ಬೆಂಗಳೂರಿನ ಹಲಸೂರು ಠಾಣೆಯಲ್ಲಿ ದಾಖಲಾಗಿರುವ ಪ್ರಕರಣವನ್ನು ಕೂಡಲೇ ಹಿಂಪಡೆಯಬೇಕು. ಇದು ಹಿಂದುತ್ವಕ್ಕಾಗಿ ನಡೆದ ಹೋರಾಟ. ಅಂಥ ಕೇಸನ್ನು ರಾಜ್ಯ ಸರಕಾರ ಹಿಂದಕ್ಕೆ ಪಡೆಯಬೇಕು ಎಂದರು.
ಬಿಜೆಪಿ ಜಿಲ್ಲಾ ಉಪಾಧ್ಯಕ್ಷನಾಗಿರುವ ಜಗದೀಶ ಅಧಿಕಾರಿ ಬಿಲ್ಲವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವುದನ್ನು ಖಂಡಿಸುತ್ತೇವೆ. ಕೋಟಿ ಚೆನ್ನಯರು ಮತ್ತು ಬಿಲ್ಲವ ಸಮುದಾಯಕ್ಕೆ ಅವಹೇಳನ ಮಾಡಿದ ಅಧಿಕಾರಿಯನ್ನು ಬಿಜೆಪಿ ಪಕ್ಷದಿಂದ ಉಚ್ಚಾಟನೆ ಮಾಡಬೇಕು. ಬಿಲ್ಲವ ಸಮುದಾಯ ಹಿಂದುತ್ವಕ್ಕಾಗಿ ಅಗಾಧ ಕೊಡುಗೆ ನೀಡಿದೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಹಿಂದು ಮಹಾಸಭಾ ಸಮಿತಿಯ ರಾಜ್ಯಾಧ್ಯಕ್ಷ ಡಾ.ಎಲ್. ಕೆ. ಸುವರ್ಣ, ರಾಜ್ಯ ಪ್ರಭಾರಿ ರಾಜೇಶ್ ಪೂಜಾರಿ, ಕಾರ್ಯದರ್ಶಿ ನವೀನ್ ಕುಮಾರ್ ಸುರತ್ಕಲ್, ದ.ಕ. ಜಿಲ್ಲಾಧ್ಯಕ್ಷ ಲೋಕೇಶ್ ಉಳ್ಳಾಲ, ದ.ಕ ಜಿಲ್ಲಾ ಶ್ರಮಿಕ ಸಭಾ ಕಾರ್ಯದರ್ಶಿ ಪ್ರಕಾಶ್ ಭಟ್ ಉಪಸ್ಥಿತರಿದ್ದರು.
06-10-25 10:47 pm
Bangalore Correspondent
ಕಫ್ ಸಿರಪ್ ದುರಂತ ; ರಾಜ್ಯದಲ್ಲಿ ಕಟ್ಟೆಚ್ಚರ, ಎಲ್ಲ...
06-10-25 05:27 pm
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
07-10-25 01:53 pm
HK News Desk
ಮೊಘಲ್ ಆಕ್ರಮಣದಿಂದ ವಿಷ್ಣು ಮೂರ್ತಿ ಭಗ್ನ ; ಪ್ರತಿಮೆ...
06-10-25 07:56 pm
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
07-10-25 03:33 pm
Mangalore Correspondent
Madhu Bangarappa: ರಾಜ್ಯದಲ್ಲಿ 18,500ಕ್ಕೂ ಅಧಿಕ...
06-10-25 10:42 pm
ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ...
06-10-25 07:19 pm
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಹೃದ್ರೋಗ...
06-10-25 04:57 pm
ಟ್ರಾಫಿಕ್ ಸಿಬಂದಿ ಕಾರು ನಿಲ್ಲಿಸಲೆತ್ನಿಸಿ ಒಡೆದ ಗಾಜ...
06-10-25 02:58 pm
07-10-25 10:31 am
HK News Desk
Kali Yogish, Arrest, Mangalore: ಮಂಗಳೂರು, ಮೈಸೂ...
05-10-25 03:22 pm
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm