ಅಡ್ಡಾದಿಡ್ಡಿ ಚಲಿಸಿದ ಆಲ್ಟೋ ಕಾರು ; ಬುಲೆಟ್ ಬೈಕಿಗೆ ಡಿಕ್ಕಿಯಾಗಿ ಸವಾರರಿಬ್ಬರು ಬಲಿ !!

09-02-21 01:18 pm       Udupi Correspondent   ಕರಾವಳಿ

ಕಾರೊಂದು ಬುಲೆಟ್‌ಗೆ ಡಿಕ್ಕಿಯಾಗಿ ಸವಾರರು ಮೃತಪಟ್ಟ ಘಟನೆ ಕುಂದಾಪುರ ಚರ್ಚ್ ರಸ್ತೆಯಲ್ಲಿ ನಡೆದಿದೆ.

ಕುಂದಾಪುರ, ಫೆ.9 : ಕಾರೊಂದು ಬುಲೆಟ್‌ ಬೈಕಿಗೆ ಡಿಕ್ಕಿಯಾದ ಪರಿಣಾಮ ಇಬ್ಬರು ಬುಲೆಟ್‌ ಸವಾರರು ಮೃತಪಟ್ಟ ಘಟನೆ ಕುಂದಾಪುರ ಚರ್ಚ್ ರಸ್ತೆಯಲ್ಲಿ ನಡೆದಿದೆ.

ಮೃತರನ್ನು ಕುಂದಾಪುರ ನೇರಳೆಕಟ್ಟೆಯ ಕಿರಣ್ ಮೇಸ್ತಾ (24) ಹಾಗೂ ಕುಂದಾಪುರ ಕರ್ಗುಂಜೆ ಗ್ರಾಮದ ರಾಜು ಪೂಜಾರಿ ಎಂಬವರ ಮಗ, ಹಿಂಬದಿ ಸವಾರ ರವೀಂದ್ರ ಕುಮಾರ್ ಎಂದು ಗುರುತಿಸಲಾಗಿದೆ.

ಸೋಮವಾರ ರಾತ್ರಿ ಘಟನೆ ನಡೆದಿದ್ದು ಶ್ಯಾಮಲಾ ಎಂಬವರು ತನ್ನ ಮಾರುತಿ ಅಲ್ಟೋ ಕಾರನ್ನು ಮದ್ದುಗುಡ್ಡೆ ಕಡೆಯಿಂದ ಕುಂದಾಪುರ ಕಡೆಗೆ ಅತೀವೇಗ ಮತ್ತು ಅಡ್ಡಾದಿಡ್ಡಿ ಚಾಲನೆ ಮಾಡಿಕೊಂಡು ಬಂದಿದ್ದು ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಬುಲೆಟ್‌ಗೆ ಡಿಕ್ಕಿಯಾಗಿದ್ದಾರೆ ಎಂದು ದೂರಲಾಗಿದೆ.

ಸವಾರರಿಬ್ಬರು ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡಿದ್ದು, ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ವೇಳೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

In a tragic incident two persons on Bullet Bike we're killed after an alto car lost control at Kundapura.