ಬ್ರೇಕಿಂಗ್ ನ್ಯೂಸ್
09-02-21 05:10 pm Udupi Correspondent ಕರಾವಳಿ
ಉಡುಪಿ, ಫೆ.9: ದೇವರ ದರ್ಶನಕ್ಕೆ ಉಡುಪಿ ಶ್ರೀಕೃಷ್ಣ ಮಠಕ್ಕೆ ಬಂದಿದ್ದ ಬೆಂಗಳೂರು ಮೂಲದ ಯಾತ್ರಾರ್ಥಿಯೊಬ್ಬರು ಉಡುಪಿ ಬಸ್ ನಿಲ್ದಾಣದಲ್ಲಿ ಕುಸಿದು ಬಿದ್ದು ಮೃತಪಟ್ಟ ಘಟನೆ ನಡೆದಿದೆ.
ಉಡುಪಿಯಲ್ಲಿ ದೇವರ ದರ್ಶನ ಪಡೆದುಕೊಂಡು, ಊರಿಗೆ ಹೊರಡಲೆಂದು ಸರಕಾರಿ ಬಸ್ ನಿಲ್ದಾಣದಲ್ಲಿ ಸಿದ್ಧತೆಯಲ್ಲಿದ್ದಾಗ, ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದರು. ವಿಷಯ ತಿಳಿದು ಸಮಾಜ ಸೇವಕರಾದ ನಿತ್ಯಾನಂದ ಒಳಕಾಡು, ತಾರಾನಾಥ್ ಮೇಸ್ತ ಶಿರೂರು ಯಾತ್ರಾರ್ಥಿಯನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಾಗಿಸಿದ್ದು ಅಷ್ಟರಲ್ಲಿ ಮೃತಪಟ್ಟಿದ್ದಾರೆ.

ಪೊಲೀಸರು ಮೃತರ ಬ್ಯಾಗಿನಲ್ಲಿ ದೊರೆತ ಚೀಟಿಗಳ ಆಧಾರದಿಂದ ಮೃತರ ಸಂಬಂಧಿಕರ ವಿಳಾಸ ಪತ್ತೆ ಮಾಡಿ ವಿಷಯ ಮುಟ್ಟಿಸಿದ್ದಾರೆ. ಮೃತ ಯಾತ್ರಾರ್ಥಿ, ರಮೇಶ್ ರಾವ್ ಟೈಲರ್ (63) ವಿನಾಯಕ ನಗರ, ನಾಯಂಡ ಹಳ್ಳಿ, ಬೆಂಗಳೂರಿನ ನಿವಾಸಿಯೆಂದು ತಿಳಿದುಬಂದಿದೆ.
ಬಳಿಕ ಮೃತರ ಕುಟುಂಬಿಕರು ಉಡುಪಿಗೆ ಆಗಮಿಸಿದ್ದು ಶವಸಂಸ್ಕಾರ ನಡೆಸಲು ಅಸಹಾಯಕತೆ ತೋರಿದರು. ನಗರ ಠಾಣೆಯ ವಿಶ್ವನಾಥ್ ಶೆಟ್ಟಿ ಅಮಾಸೆಬೈಲು ನೀಡಿದ ಸಲಹೆಯಂತೆ ಕುಟುಂಬಿಕರು ಸಮಾಜಸೇವಕರಾದ ನಿತ್ಯಾನಂದ ಒಳಕಾಡು, ತಾರಾನಾಥ್ ಮೇಸ್ತ ಶಿರೂರು ಅವರನ್ನು ಸಂಪರ್ಕಿಸಿದ್ದು ಅಸಹಾಯಕತೆ ಹೇಳಿಕೊಂಡಿದ್ದರು.
ತಕ್ಷಣ ನೆರವಿಗೆ ಬಂದಿದ್ದು ಶವ ಪರೀಕ್ಷೆ ಬಳಿಕ ಉದ್ಯಾವರ ಹಿಂದು ರುದ್ರಭೂಮಿಯಲ್ಲಿ ಧಾರ್ಮಿಕ ವಿಧಿ ವಿಧಾನಗಳ ಮೂಲಕ ಅಂತ್ಯಸಂಸ್ಕಾರವನ್ನು ನಡೆಸಿಕೊಟ್ಟಿದ್ದಾರೆ.
Bangalorean Devotee who came to Krishna Temple at Udupi breathed his last while he was at the temple. The final rituals to take place at Udupi.
05-03-26 11:42 pm
HK News Desk
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
05-03-26 08:51 pm
HK News Staffer
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
05-03-26 07:38 pm
HK News Staffer
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm