ಬ್ರೇಕಿಂಗ್ ನ್ಯೂಸ್
09-02-21 06:49 pm Mangaluru Correspondent ಕರಾವಳಿ
ಮೂಡುಬಿದ್ರೆ, ಫೆ.9: ಕೋಟಿ ಚೆನ್ನಯರು ಮತ್ತು ಬಿಲ್ಲವರ ಬಗ್ಗೆ ಅವಹೇಳನಕಾರಿ ಮಾತನಾಡಿದ್ದ ಬಿಜೆಪಿ ಮುಖಂಡ ಜಗದೀಶ ಅಧಿಕಾರಿ ಕೊನೆಗೂ ಕೋಟಿ ಚೆನ್ನಯರಿಗೆ ಕೈಮುಗಿದಿದ್ದಾರೆ. ಇಲ್ಲಿನ ಕೆಲ್ಲಪುತ್ತಿಗೆಯ ಗರೋಡಿಗೆ ತೆರಳಿ ಅಧಿಕಾರಿ ತಪ್ಪು ಕಾಣಿಕೆ ಸಲ್ಲಿಸಿದ್ದಾರೆ. ಅಲ್ಲದೆ ಬಹಿರಂಗ ಕ್ಷಮೆ ಯಾಚನೆಯನ್ನೂ ಮಾಡಿದ್ದಾರೆ.
ಕೆಲ್ಲಪುತ್ತಿಗೆಯ ಶ್ರೀ ಕ್ಷೇತ್ರ ಭೂತರಾಜಗುಡ್ಡೆಯ ಶ್ರೀ ಧರ್ಮರಸು ದೈವ, ಕುಕ್ಕಿನಂತಾಯ, ಕೊಡಮಣಿತ್ತಾಯ, ಬ್ರಹ್ಮ ಬೈದರ್ಕಳ ಗರೋಡಿಗೆ ಆಗಮಿಸಿದ ಜಗದೀಶ್ ಅಧಿಕಾರಿ ತಪ್ಪು ಕಾಣಿಕೆ ಹಾಕಿದ್ದಾರೆ. ಅಲ್ಲದೆ ದೈವದ ಮುಂದೆ ಕ್ಷಮೆಯಾಚನೆ ಮಾಡಿದ್ದಾರೆ. ತನ್ನ ಹೇಳಿಕೆಯಿಂದ ಬಿಲ್ಲವ ಸಮುದಾಯಕ್ಕೆ ನೋವಾಗಿದ್ದರೆ ಬಹಿರಂಗ ಕ್ಷಮೆ ಯಾಚಿಸುತ್ತಿದ್ದೇನೆ. ಅಲ್ಲದೆ, ಕಾಂಗ್ರೆಸ್ ಹಿರಿಯ ಮುಖಂಡ ಜನಾರ್ದನ ಪೂಜಾರಿ ಅವರಿಗೂ ತನ್ನ ಹೇಳಿಕೆಯಿಂದ ನೊಂದಿದ್ದರೆ ಕ್ಷಮೆ ಕೋರುತ್ತೇನೆ. ತನ್ನ ಮಾತಿನಿಂದ ಉಂಟಾದ ವಿವಾದಕ್ಕೆ ಕೋಟಿ ಚೆನ್ನಯರ ಗರಡಿಯಲ್ಲಿಯೇ ನಿಂತು ಕ್ಷಮೆಯಾಚಿಸುತ್ತಿದ್ದು, ತಪ್ಪು ಕಾಣಿಕೆ ಹಾಕಿ ಎಲ್ಲ ವಿವಾದಗಳಿಗೆ ಇತಿಶ್ರೀ ಹಾಕಲು ನಿರ್ಧರಿಸಿದ್ದೇನೆ ಎಂದು ಅಧಿಕಾರಿ ಹೇಳಿದರು.




ಜನಾರ್ದನ ಪೂಜಾರಿ ನಮಗೆಲ್ಲ ಹಿರಿಯರು, ಪೂಜ್ಯರು. ಅವರ ನಿವಾಸಕ್ಕೂ ತೆರಳಿ ಕ್ಷಮೆ ಕೋರುತ್ತೇನೆ. ಜೊತೆಗೆ ಕುದ್ರೋಳಿ ಹಾಗೂ ಗೆಜ್ಜೆಗಿರಿ ಕ್ಷೇತ್ರಕ್ಕೂ ತೆರಳಿ ತಪ್ಪು ಕಾಣಿಕೆ ಸಲ್ಲಿಸಿ, ಕ್ಷಮೆಯಾಚನೆ ಮಾಡುವುದಾಗಿ ಜಗದೀಶ್ ಅಧಿಕಾರಿ ಹೇಳಿದ್ದಾರೆ.
ನಿನ್ನೆಯಷ್ಟೇ ಬಿಲ್ಲವ ಸಮುದಾಯದ ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ, ಜಗದೀಶ ಅಧಿಕಾರಿ ವಿರುದ್ಧ ಬಹಿರಂಗ ಸವಾಲು ಹಾಕಿದ್ದರು. ಮೂರು ದಿನದೊಳಗೆ ಗರೋಡಿಗೆ ತೆರಳಿ ಕ್ಷಮೆ ಯಾಚಿಸದಿದ್ದರೆ ಬಿಲ್ಲವ ಯುವಕರು ಅಧಿಕಾರಿ ಮುಖಕ್ಕೆ ಮಸಿ ಹಾಕಲಿದ್ದಾರೆ. ಮಸಿ ಹಾಕಿದ ಯುವಕನಿಗೆ ಒಂದು ಲಕ್ಷ ರೂ. ಬಹುಮಾನ ನೀಡುತ್ತೇನೆ ಎಂದು ಹೇಳಿಕೆ ನೀಡಿದ್ದರು. ಈ ವಿಚಾರ ವಿವಾದಕ್ಕೆ ಕಾರಣವಾಗುತ್ತಲೇ ಜಗದೀಶ್ ಅಧಿಕಾರಿ ಇಂದು ಮೂಡುಬಿದ್ರೆಯಲ್ಲಿ ಗರೋಡಿಗೇ ತೆರಳಿ ಬಿಲ್ಲವರಲ್ಲಿ ಕ್ಷಮೆ ಕೋರಿದ್ದಾರೆ.
Defamatory words against Koti Chennayya BJP Leader Jagadish Adhikari offers forgiveness offering at the temple in Moodbidri.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm