ಬ್ರೇಕಿಂಗ್ ನ್ಯೂಸ್
10-02-21 10:58 pm Mangaluru Correspondent ಕರಾವಳಿ
ಮಂಗಳೂರು, ಫೆ.10: ಕೆಎಸ್ಸಾರ್ಟಿಸಿ ಬಿ.ಸಿ.ರೋಡ್ ಡಿಪೋದಲ್ಲಿ ಕೆಲಸ ಮಾಡುತ್ತಿದ್ದ ಕಂಡಕ್ಟರ್ ಕಂ ಭದ್ರತಾ ಸಿಬಂದಿಯೊಬ್ಬ ಡೆತ್ ನೋಟ್ ಬರೆದಿಟ್ಟು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಡೆತ್ ನೋಟ್ ನಲ್ಲಿ ಅಧಿಕಾರಿಗಳೇ, ಯಾರಿಗೂ ಕೂಡ ಈ ರೀತಿ ಹಿಂಸೆ ಕೊಡಬೇಡಿ ಎಂದು ಬರೆದಿದ್ದಾರೆ. ತೀವ್ರ ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ವಿಚಾರವನ್ನು ಹೇಳಿಕೊಂಡಿದ್ದಾರೆ.
ಕೆಎಸ್ಆರ್ಟಿಸಿ ಡಿಪೋದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಪುತ್ತೂರು ಮೂಲದ ಬಾಲಕೃಷ್ಣ (48) ಸಾವನ್ನಪ್ಪಿದವರು. ಸಂಸ್ಥೆಯಲ್ಲಿ ಅಧಿಕಾರಿಗಳು ನೀಡುತ್ತಿದ್ದ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ‘ಸಂಬಂಧಪಟ್ಟ ಅಧಿಕಾರಿಗಳೇ.. ಈ ರೀತಿ ಯಾರಿಗೂ ಹಿಂಸೆ ಮಾಡಬೇಡಿ, ಸಣ್ಣಸಣ್ಣ ಮಕ್ಕಳಿರುತ್ತಾರೆ, ಅವರನ್ನು ಬಿಟ್ಟು ಹೋಗಲು ಮನಸ್ಸಾಗುವುದಿಲ್ಲ.. ಆದರೂ ಈ ಹಿಂಸೆ ಅನುಭವಿಸಲು ಸಾಧ್ಯವಾಗುತ್ತಿಲ್ಲ..
‘ಅಮ್ಮನನ್ನು ಚೆನ್ನಾಗಿ ನೋಡಿಕೊಳ್ಳಿ’ ಎಂದು ಬರೆದಿರುವ ಅವರು, ತನ್ನ ಅಣ್ಣನ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ‘ನನ್ನ ಅಂತ್ಯಸಂಸ್ಕಾರಕ್ಕೂ ಅಣ್ಣನನ್ನು ಕರೆಯಬೇಡಿ. ಆತನಿಂದ ಯಾವುದೇ ಧನಸಹಾಯವನ್ನೂ ಪಡೆಯಬೇಡಿ. ಮಕ್ಕಳನ್ನು ಚೆನ್ನಾಗಿ ನೋಡಿಕೊಳ್ಳಿ. ಅವರೇನೂ ತಪ್ಪು ಮಾಡಿಲ್ಲ’ ಎಂದು ಅವರು ಡೆತ್ನೋಟ್ನಲ್ಲಿ ಬರೆದಿದ್ದಾರೆ.
ಉಳ್ಳಾಲದ ನೇತ್ರಾವತಿ ಸೇತುವೆ ಬಳಿಯ ರೈಲ್ವೇ ಸೇತುವೆಯಿಂದ ನದಿಗೆ ಹಾರಿದ್ದಾರೆ ಎನ್ನಲಾಗುತ್ತಿದ್ದು ಸಂಜೆ ಹೊತ್ತಿಗೆ ಶವ ಪತ್ತೆಯಾಗಿತ್ತು. ಇವರು ನದಿಗೆ ಹಾರುವುದನ್ನು ಯಾರೋ ನೋಡಿದ್ದು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳೀಯರು ಮತ್ತು ಹೆದ್ದಾರಿಯಲ್ಲಿ ಸಾಗುತ್ತಿದ್ದ ಪ್ರಯಾಣಿಕರು ನಿಂತು ನೋಡುತ್ತಿದ್ದರು. ಇದರಿಂದ ಹೆದ್ದಾರಿ ಬ್ಲಾಕ್ ಕೂಡ ಆಗಿತ್ತು.
A KSRTC Bus Conductor of Bantwal Unit ended his life by jumping from Neravathi railway bridge in mangalore blaming his KSRTC authorities for his death in the death note.
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm