ಬ್ರೇಕಿಂಗ್ ನ್ಯೂಸ್
10-02-21 10:58 pm Mangaluru Correspondent ಕರಾವಳಿ
ಮಂಗಳೂರು, ಫೆ.10: ಕೆಎಸ್ಸಾರ್ಟಿಸಿ ಬಿ.ಸಿ.ರೋಡ್ ಡಿಪೋದಲ್ಲಿ ಕೆಲಸ ಮಾಡುತ್ತಿದ್ದ ಕಂಡಕ್ಟರ್ ಕಂ ಭದ್ರತಾ ಸಿಬಂದಿಯೊಬ್ಬ ಡೆತ್ ನೋಟ್ ಬರೆದಿಟ್ಟು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಡೆತ್ ನೋಟ್ ನಲ್ಲಿ ಅಧಿಕಾರಿಗಳೇ, ಯಾರಿಗೂ ಕೂಡ ಈ ರೀತಿ ಹಿಂಸೆ ಕೊಡಬೇಡಿ ಎಂದು ಬರೆದಿದ್ದಾರೆ. ತೀವ್ರ ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ವಿಚಾರವನ್ನು ಹೇಳಿಕೊಂಡಿದ್ದಾರೆ.
ಕೆಎಸ್ಆರ್ಟಿಸಿ ಡಿಪೋದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಪುತ್ತೂರು ಮೂಲದ ಬಾಲಕೃಷ್ಣ (48) ಸಾವನ್ನಪ್ಪಿದವರು. ಸಂಸ್ಥೆಯಲ್ಲಿ ಅಧಿಕಾರಿಗಳು ನೀಡುತ್ತಿದ್ದ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ‘ಸಂಬಂಧಪಟ್ಟ ಅಧಿಕಾರಿಗಳೇ.. ಈ ರೀತಿ ಯಾರಿಗೂ ಹಿಂಸೆ ಮಾಡಬೇಡಿ, ಸಣ್ಣಸಣ್ಣ ಮಕ್ಕಳಿರುತ್ತಾರೆ, ಅವರನ್ನು ಬಿಟ್ಟು ಹೋಗಲು ಮನಸ್ಸಾಗುವುದಿಲ್ಲ.. ಆದರೂ ಈ ಹಿಂಸೆ ಅನುಭವಿಸಲು ಸಾಧ್ಯವಾಗುತ್ತಿಲ್ಲ..




‘ಅಮ್ಮನನ್ನು ಚೆನ್ನಾಗಿ ನೋಡಿಕೊಳ್ಳಿ’ ಎಂದು ಬರೆದಿರುವ ಅವರು, ತನ್ನ ಅಣ್ಣನ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ‘ನನ್ನ ಅಂತ್ಯಸಂಸ್ಕಾರಕ್ಕೂ ಅಣ್ಣನನ್ನು ಕರೆಯಬೇಡಿ. ಆತನಿಂದ ಯಾವುದೇ ಧನಸಹಾಯವನ್ನೂ ಪಡೆಯಬೇಡಿ. ಮಕ್ಕಳನ್ನು ಚೆನ್ನಾಗಿ ನೋಡಿಕೊಳ್ಳಿ. ಅವರೇನೂ ತಪ್ಪು ಮಾಡಿಲ್ಲ’ ಎಂದು ಅವರು ಡೆತ್ನೋಟ್ನಲ್ಲಿ ಬರೆದಿದ್ದಾರೆ.
ಉಳ್ಳಾಲದ ನೇತ್ರಾವತಿ ಸೇತುವೆ ಬಳಿಯ ರೈಲ್ವೇ ಸೇತುವೆಯಿಂದ ನದಿಗೆ ಹಾರಿದ್ದಾರೆ ಎನ್ನಲಾಗುತ್ತಿದ್ದು ಸಂಜೆ ಹೊತ್ತಿಗೆ ಶವ ಪತ್ತೆಯಾಗಿತ್ತು. ಇವರು ನದಿಗೆ ಹಾರುವುದನ್ನು ಯಾರೋ ನೋಡಿದ್ದು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳೀಯರು ಮತ್ತು ಹೆದ್ದಾರಿಯಲ್ಲಿ ಸಾಗುತ್ತಿದ್ದ ಪ್ರಯಾಣಿಕರು ನಿಂತು ನೋಡುತ್ತಿದ್ದರು. ಇದರಿಂದ ಹೆದ್ದಾರಿ ಬ್ಲಾಕ್ ಕೂಡ ಆಗಿತ್ತು.
A KSRTC Bus Conductor of Bantwal Unit ended his life by jumping from Neravathi railway bridge in mangalore blaming his KSRTC authorities for his death in the death note.
05-03-26 11:42 pm
HK News Desk
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
05-03-26 08:51 pm
HK News Staffer
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
05-03-26 07:38 pm
HK News Staffer
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm