ಬ್ರೇಕಿಂಗ್ ನ್ಯೂಸ್
10-02-21 10:58 pm Mangaluru Correspondent ಕರಾವಳಿ
ಮಂಗಳೂರು, ಫೆ.10: ಕೆಎಸ್ಸಾರ್ಟಿಸಿ ಬಿ.ಸಿ.ರೋಡ್ ಡಿಪೋದಲ್ಲಿ ಕೆಲಸ ಮಾಡುತ್ತಿದ್ದ ಕಂಡಕ್ಟರ್ ಕಂ ಭದ್ರತಾ ಸಿಬಂದಿಯೊಬ್ಬ ಡೆತ್ ನೋಟ್ ಬರೆದಿಟ್ಟು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಡೆತ್ ನೋಟ್ ನಲ್ಲಿ ಅಧಿಕಾರಿಗಳೇ, ಯಾರಿಗೂ ಕೂಡ ಈ ರೀತಿ ಹಿಂಸೆ ಕೊಡಬೇಡಿ ಎಂದು ಬರೆದಿದ್ದಾರೆ. ತೀವ್ರ ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ವಿಚಾರವನ್ನು ಹೇಳಿಕೊಂಡಿದ್ದಾರೆ.
ಕೆಎಸ್ಆರ್ಟಿಸಿ ಡಿಪೋದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಪುತ್ತೂರು ಮೂಲದ ಬಾಲಕೃಷ್ಣ (48) ಸಾವನ್ನಪ್ಪಿದವರು. ಸಂಸ್ಥೆಯಲ್ಲಿ ಅಧಿಕಾರಿಗಳು ನೀಡುತ್ತಿದ್ದ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ‘ಸಂಬಂಧಪಟ್ಟ ಅಧಿಕಾರಿಗಳೇ.. ಈ ರೀತಿ ಯಾರಿಗೂ ಹಿಂಸೆ ಮಾಡಬೇಡಿ, ಸಣ್ಣಸಣ್ಣ ಮಕ್ಕಳಿರುತ್ತಾರೆ, ಅವರನ್ನು ಬಿಟ್ಟು ಹೋಗಲು ಮನಸ್ಸಾಗುವುದಿಲ್ಲ.. ಆದರೂ ಈ ಹಿಂಸೆ ಅನುಭವಿಸಲು ಸಾಧ್ಯವಾಗುತ್ತಿಲ್ಲ..




‘ಅಮ್ಮನನ್ನು ಚೆನ್ನಾಗಿ ನೋಡಿಕೊಳ್ಳಿ’ ಎಂದು ಬರೆದಿರುವ ಅವರು, ತನ್ನ ಅಣ್ಣನ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ‘ನನ್ನ ಅಂತ್ಯಸಂಸ್ಕಾರಕ್ಕೂ ಅಣ್ಣನನ್ನು ಕರೆಯಬೇಡಿ. ಆತನಿಂದ ಯಾವುದೇ ಧನಸಹಾಯವನ್ನೂ ಪಡೆಯಬೇಡಿ. ಮಕ್ಕಳನ್ನು ಚೆನ್ನಾಗಿ ನೋಡಿಕೊಳ್ಳಿ. ಅವರೇನೂ ತಪ್ಪು ಮಾಡಿಲ್ಲ’ ಎಂದು ಅವರು ಡೆತ್ನೋಟ್ನಲ್ಲಿ ಬರೆದಿದ್ದಾರೆ.
ಉಳ್ಳಾಲದ ನೇತ್ರಾವತಿ ಸೇತುವೆ ಬಳಿಯ ರೈಲ್ವೇ ಸೇತುವೆಯಿಂದ ನದಿಗೆ ಹಾರಿದ್ದಾರೆ ಎನ್ನಲಾಗುತ್ತಿದ್ದು ಸಂಜೆ ಹೊತ್ತಿಗೆ ಶವ ಪತ್ತೆಯಾಗಿತ್ತು. ಇವರು ನದಿಗೆ ಹಾರುವುದನ್ನು ಯಾರೋ ನೋಡಿದ್ದು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳೀಯರು ಮತ್ತು ಹೆದ್ದಾರಿಯಲ್ಲಿ ಸಾಗುತ್ತಿದ್ದ ಪ್ರಯಾಣಿಕರು ನಿಂತು ನೋಡುತ್ತಿದ್ದರು. ಇದರಿಂದ ಹೆದ್ದಾರಿ ಬ್ಲಾಕ್ ಕೂಡ ಆಗಿತ್ತು.
A KSRTC Bus Conductor of Bantwal Unit ended his life by jumping from Neravathi railway bridge in mangalore blaming his KSRTC authorities for his death in the death note.
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
29-10-25 06:55 pm
Mangalore Correspondent
ಸುಳ್ಳು ಕೇಸು ಹಾಕುತ್ತಿದ್ದಾರೆಂದು ಮನವಿ ಕೊಡಲು ಬಂದವ...
29-10-25 03:57 pm
ಭ್ರಷ್ಟಾಚಾರ ಆರೋಪಕ್ಕೆ ಉತ್ತರಿಸಲು ಸ್ಪೀಕರ್ ಖಾದರ್ ನ...
29-10-25 03:16 pm
Smart City, Kadri Park Road: ಕದ್ರಿ ಪಾರ್ಕ್ ರಸ್...
28-10-25 08:36 pm
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
29-10-25 02:53 pm
Mangalore Correspondent
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm